ಬೆಳಗಾವಿಯಲ್ಲಿ ಅಧಿವೇಶನ ನಡೆಸಿ: ಸಿಎಂಗೆ ಹೊರಟ್ಟಿ ಪತ್ರ

Kannadaprabha News   | Asianet News
Published : Jun 30, 2021, 08:36 AM IST
ಬೆಳಗಾವಿಯಲ್ಲಿ ಅಧಿವೇಶನ ನಡೆಸಿ: ಸಿಎಂಗೆ ಹೊರಟ್ಟಿ ಪತ್ರ

ಸಾರಾಂಶ

* ಅಧಿವೇಶನ ಬೆಳಗಾವಿಯಲ್ಲಿ ಮಾಡಿದರೆ ಸೂಕ್ತ  * ಬೆಳಗಾವಿಯಲ್ಲಿ 2 ವರ್ಷದಿಂದ ಅಧಿವೇಶನ ನಡೆದಿಲ್ಲ * ವಿಧಾನಸಭೆ ಸ್ಪೀಕರ್‌ ಹಾಗೂ ನಾನೂ ಒಮ್ಮತ ಸೂಚಿಸಿದ್ದೇನೆ: ಹೊರಟ್ಟಿ

ಹುಬ್ಬಳ್ಳಿ(ಜೂ.30): ಮುಂಬರುವ ಅಧಿವೇಶನವನ್ನು ಬೆಳಗಾವಿಯಲ್ಲಿ ನಡೆಸುವಂತೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದೇನೆ. ಈ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ಸರ್ಕಾರ ತೀರ್ಮಾನ ಕೈಗೊಳ್ಳಬೇಕು ಎಂದು ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ. 

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಮಾನ್ಯವಾಗಿ ಅಧಿವೇಶನವನ್ನು ಜೂನ್‌ನಲ್ಲಿ ಮಾಡಲಾಗುತ್ತದೆ. ಆದರೆ, ಈ ವರ್ಷ ಈ ಬಗ್ಗೆ ಯಾವುದೇ ಪ್ರಕ್ರಿಯೆ ನಡೆದಿಲ್ಲ. ಹೀಗಾಗಿ ಜುಲೈನಲ್ಲಿ ಅಧಿವೇಶನ ನಡೆಯಬಹುದು. ಈ ಅಧಿವೇಶನವನ್ನು ಬೆಳಗಾವಿಯಲ್ಲಿ ಮಾಡಿದರೆ ಸೂಕ್ತ ಎಂದರು.

ಬೆಳಗಾವಿ ಅಧಿವೇಶನ ವೇಳೆ ಶಾಸಕರು ಗೋವಾಕ್ಕೆ ಹೋಗಬೇಡಿ : ಎಚ್ಚರಿಕೆ !

ಬೆಳಗಾವಿಯಲ್ಲಿ 2 ವರ್ಷದಿಂದ ಅಧಿವೇಶನ ನಡೆದಿಲ್ಲ. ವಿಪ ಸದಸ್ಯ ಮಹಾಂತೇಶ ಕವಟಗಿಮಠ ಕೂಡ ಈ ಬಗ್ಗೆ ಮನವಿ ಮಾಡಿದ್ದಾರೆ. ಈ ಬಗ್ಗೆ ವಿಧಾನಸಭೆ ಸ್ಪೀಕರ್‌ ಹಾಗೂ ನಾನೂ ಒಮ್ಮತ ಸೂಚಿಸಿದ್ದೇನೆ. ಸರ್ಕಾರ ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಬೇಕು. ಈ ಬಗ್ಗೆ ಇನ್ನೊಮ್ಮೆ ಸರ್ಕಾರವನ್ನು ಒತ್ತಾಯಿಸುತ್ತೇನೆ ಎಂದರು.
 

PREV
click me!

Recommended Stories

ಧರ್ಮಸ್ಥಳ ನೂರಾರು ಶವ ಹೂಳಿದ ಕೇಸ್: ಬುರುಡೆ ಗ್ಯಾಂಗ್ ಷಡ್ಯಂತ್ರ ಬಯಲು - SIT ವರದಿಯಲ್ಲಿ ಒಬ್ಬರಿಗೆ ಕ್ಲೀನ್ ಚಿಟ್!
ಚಿಕ್ಕಬಳ್ಳಾಪುರದಲ್ಲಿ ಮಾನವ ಹಕ್ಕುಗಳ ದಿನಾಚರಣೆ: ಸಾವಿರಾರು ಜನರಲ್ಲಿ ನಾಯಕತ್ವ ಬಿತ್ತಿದ ನವಶಕ್ತಿ ನಾಟಕ