ರಾಮುಲು ಖಾತೆ ಬದಲು ಹಿಂದಿದೆಯಾ ಮಾಸ್ಟರ್ ಪ್ಲಾನ್ : ಶೀಘ್ರ ಟಾಪ್ ಪೋಸ್ಟ್

By Kannadaprabha NewsFirst Published Nov 1, 2020, 8:39 AM IST
Highlights

ಇತ್ತೀಚೆಗಷ್ಟೇ ಶ್ರೀ ರಾಮುಲು ಅವರ ಖಾತೆಯಲ್ಲಿ ಬದಲಾವಣೆ ಮಾಡಲಾಗಿದ್ದು ಇದರ ಹಿಂದೆ ಇದೆಯಾ ಮಾಸ್ಟರ್ ಪ್ಲಾನ್ 

ಬಳ್ಳಾರಿ (ನ.01): ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಅವರು ಉಪಮುಖ್ಯಮಂತ್ರಿ ಆಗಬೇಕೆಂಬುದು ಎಲ್ಲರ ಕನಸು. ಈ ಕನಸು ಆದಷ್ಟುಬೇಗ ಈಡೇರಲಿದೆ ಎಂದು ಶಾಸಕ ಜಿ.ಸೋಮಶೇಖರ ರೆಡ್ಡಿ ಹೇಳಿದ್ದಾರೆ.

ನಗರದಲ್ಲಿ ಶನಿವಾರ ಸುದ್ದಿಗಾರರ ಜತೆಗೆ ಮಾತನಾಡಿ, ಶ್ರೀರಾಮುಲು ಅವರು ಉಪ ಮುಖ್ಯಮಂತ್ರಿ ಆಗಬೇಕೆಂಬುದು ಬಹುದಿನಗಳ ಬೇಡಿಕೆ. 
ಆದಷ್ಟುಬೇಗ ಈ ಬೇಡಿಕೆ ಈಡೇರಲಿದೆ. ಈ ಕುರಿತು ಪಕ್ಷದ ಹೈಕಮಾಂಡ್‌ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದರು. 

ಶ್ರೀರಾಮುಲು ಗುಡ್ ನ್ಯೂಸ್ : ಉಚಿತ ಆಫರ್..?

ಸಿಎಂ ಬದಲಾವಣೆ ಇಲ್ಲ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಪ್ರಶ್ನೆಯೇ ಇಲ್ಲ. ಆ ರೀತಿಯ ಯಾವುದೇ ಎಂದು ಸೋಮಶೇಖರ ರೆಡ್ಡಿ ಇದೇ ವೇಳೆ ಸ್ಪಷ್ಟಪಡಿಸಿದ್ದಾರೆ. ಮುಂದಿನ ಮೂರು ವರ್ಷ ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದರು.

click me!