ಸಿದ್ದರಾಮಯ್ಯಗೆ ಸಚಿವ ಎಸ್.ಟಿ.ಸೋಮಶೇಖರ್ ಸವಾಲ್

Kannadaprabha News   | Asianet News
Published : Sep 20, 2020, 11:15 AM IST
ಸಿದ್ದರಾಮಯ್ಯಗೆ ಸಚಿವ ಎಸ್.ಟಿ.ಸೋಮಶೇಖರ್ ಸವಾಲ್

ಸಾರಾಂಶ

ಮಾಜಿ ಸಿಎಂ ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯಗೆ ಸಚಿವ ಎಸ್ ಟಿ ಸೋಮಶೇಖರ್ ಸವಾಲು ಹಾಕಿದ್ದಾರೆ.

ಮೈಸೂರು (ಸೆ.20): ಮೈಸೂರಿನಲ್ಲಿ ವೀರಾವೇಶದಿಂದ ಮಾತನಾಡುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೆ.21ರಿಂದ ಆರಂಭವಾಗಲಿರುವ ಅಧಿವೇಶನದಲ್ಲೂ ಅದೇ ವೀರಾವೇಶ ತೋರಿಸಲಿ ಎಂದು ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌ ಸವಾಲು ಹಾಕಿದ್ದಾರೆ. 

ಸರ್ಕಾರ ಸತ್ತಿದೆ, ಸಚಿವರು ಕೆಲಸ ಮಾಡುತ್ತಿಲ್ಲ, ಇಬ್ಬಿಬ್ಬರು ಸಿಎಂ ಇದ್ದಾರೆ ಎಂಬ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ಸಂಬಂಧ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿ ಸವಾಲು ಹಾಕಿದರು.

ನನ್ನ ಸ್ಥಾನ ಡಿ.ಕೆ.ಶಿವಕುಮಾರ್ ತಪ್ಪಿಸಲ್ಲ : ಯೋಗೇಶ್ವರ್ ...

ದ ಅವರು, ಅವರು ಸದನದಲ್ಲಿ ಮಾತಾಡಲಿ, ಅಷ್ಟೇ ವೀರಾವೇಶದಿಂದ ಉತ್ತರ ನೀಡತಕ್ಕಂತಹ ಶಕ್ತಿ ದೇವರು ನಮಗೂ ಕೂಡ ಕೊಟ್ಟಿದ್ದಾನೆ ಎಂದರು. ವಿರೋಧ ಪಕ್ಷದವರ ಕೆಲಸ ಏನಿದೆ? ವಿರೋಧ ಪಕ್ಷದವರು ವಿರೋಧ ಮಾಡುವುದಕ್ಕೋಸ್ಕರ ಸಿದ್ಧತೆ ಮಾಡಿಕೊಳ್ಳುತ್ತಾರೆ. ನಾವು ಆಡಳಿತ ಪಕ್ಷದವರು ಆಡಳಿತ ಮಾಡುವುದಕ್ಕೋಸ್ಕರ ಸಿದ್ಧತೆ ಮಾಡಿಕೊಳ್ಳುತ್ತೇವೆ ಎಂದು ಅವರು ತಿಳಿಸಿದರು.

PREV
click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!