ಹೊಸಪೇಟೆ: ಬೀದಿ ನಾಯಿಗಳಿಗೆ ಆಹಾರವಾದ ನವಜಾತ ಶಿಶು..!

Published : May 30, 2020, 10:31 AM IST
ಹೊಸಪೇಟೆ: ಬೀದಿ ನಾಯಿಗಳಿಗೆ ಆಹಾರವಾದ ನವಜಾತ ಶಿಶು..!

ಸಾರಾಂಶ

ನಾಯಿ ಕಚ್ಚಿ ನವಜಾತ ಶಿಶು ಸಾವು| ಬಳ್ಳಾರಿ ಜಿಲ್ಲೆ ಹೊಸಪೇಟೆ ನಗರದಲ್ಲಿ ನಡೆದ ಘಟನೆ| ಮಗುವಿನ ಎಡಕಾಲು ಮತ್ತು ಬಲಗೈ ತಿಂದು ಹಾಕಿದ ನಾಯಿಗಳು| ವಾರಸುದಾರರು ಇಲ್ಲದ ಕಾರಣ ಮಗುವಿನ ಅಂತ್ಯಕ್ರಿಯೆ ನೆರೆವೇರಿಸಿದ ನಗರಸಭೆ ಸಿಬ್ಬಂದಿ|

ಹೊಸಪೇಟೆ(ಮೇ.30): ಇಲ್ಲಿನ ಹಂಪಿ ರಸ್ತೆಯಲ್ಲಿ ಬರುವ ಅನಂತಶನಯಗುಡಿ ರೈಲ್ವೆ ವಸತಿ ಗೃಹಗಳಿಗೆ ತೆರಳುವ ಮಾರ್ಗ ಮಧ್ಯದ ಚರಂಡಿ ಸಮೀಪ ಬಿಸಾಡಿದ ನವಜಾತ ಹೆಣ್ಣು ಶಿಶು ಮೇಲೆ ನಾಯಿಗಳು ದಾಳಿ ನಡೆಸಿ ಕೊಂದು ಹಾಕಿರುವ ಹೃದಯ ವಿದ್ರಾವಕ ಘಟನೆ ಗುರುವಾರ ನಗರದಲ್ಲಿ ಬೆಳಕಿಗೆ ಬಂದಿದೆ.

ಹುಟ್ಟಿದ ಹೆಣ್ಣು ಮಗುವಿನ ಹೊಕ್ಕಳು ಬಳ್ಳಿ ಸಮೇತ ಇರುವಂತಹ ಮಗುವನ್ನು ದಾರಿಯ ಪಕ್ಕದ ಚರಂಡಿ ಬಳಿ ಬಿಸಾಡಿ ಹೋಗಿರುವುದರಿಂದ ನಾಯಿಗಳು ಮಗುವಿನ ಎಡಕಾಲು ಮತ್ತು ಬಲಗೈ ತಿಂದಿವೆ. ದಾರಿಯಲ್ಲಿ ಹೋಗುವ ವ್ಯಕ್ತಿಯೊಬ್ಬರು ಮಗುವನ್ನು ನೋಡಿ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ನಂತರ ಪೊಲೀಸರು ಮಗುವಿನ ಮೃತದೇಹವನ್ನು ಇಲ್ಲಿನ ನೂರು ಹಾಸಿಗೆ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ.

ಕೂಡ್ಲಿಗಿಯಲ್ಲಿ ಮಧ್ಯರಾತ್ರಿ ಕರಡಿ ಪ್ರತ್ಯಕ್ಷ, ಸಿಸಿ ಟಿವಿಯಲ್ಲಿ ಸೆರೆ, ಜನರ ಆತಂಕ

ಆಸ್ಪತ್ರೆಯಲ್ಲಿ ಮಗುವನ್ನು ಮರಣೋತ್ತರ ಶವಪರೀಕ್ಷೆ ನಡೆಸಿದ್ದಾರೆ. ಮಗುವನ್ನು ವಾರಸುದಾರರು ಇಲ್ಲದ ಕಾರಣ ನಗರಸಭೆ ಸಿಬ್ಬಂದಿ ಅಂತ್ಯಕ್ರಿಯೆ ನೆರೆವೇರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಹೊಸಪೇಟೆ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

PREV
click me!

Recommended Stories

ತಹಸೀಲ್ದಾರ್ ಅವಮಾನಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ ನಡೆಗೆ ಮಾಜಿ ಸಚಿವ ಹರತಾಳು ಹಾಲಪ್ಪ ಆಕ್ರೋಶ!
Shivamogga: ದುರ್ಯೋಧನನ ರೀತಿ ಸರೋವರದಲ್ಲಿ ಅಡಗಿಕೊಳ್ಳಲು ಯತ್ನಿಸಿದ ಕ್ರಿಮಿನಲ್‌ನನ್ನು ಬಂಧಿಸಿದ ಭದ್ರಾವತಿ ಪೊಲೀಸ್‌