ಶೌಚಗೃಹಕ್ಕೆ 20 ರೂ ಕೊಡಲಾಗದೇ ನದಿಗಿಳಿದ ವಿದ್ಯಾರ್ಥಿ ಸಾವು

Published : Nov 05, 2018, 01:19 PM ISTUpdated : Nov 05, 2018, 01:48 PM IST
ಶೌಚಗೃಹಕ್ಕೆ 20 ರೂ ಕೊಡಲಾಗದೇ ನದಿಗಿಳಿದ ವಿದ್ಯಾರ್ಥಿ ಸಾವು

ಸಾರಾಂಶ

ತುಂಗಾನದಿಯಲ್ಲಿ ಮುಳುಗಿ ವಿದ್ಯಾರ್ಥಿ ಸಾವು | ಪ್ರವಾಸಕ್ಕೆಂದು ಬಂದಿದ್ದ ವೇಳೆ ದುರ್ಘಟನೆ | 

ಚಿಕ್ಕಮಗಳೂರು (ನ. 05): ದೇವಾಲಯದ ಶೌಚಗೃಹದಲ್ಲಿ ಸ್ನಾನಕ್ಕೆ 20 ರೂಪಾಯಿ ಕೇಳಿದರೆಂದು ತುಂಗಾ ನದಿಯಲ್ಲಿ ಸ್ನಾನ ಮಾಡುವಾಗ ಪ್ರವಾಸಕ್ಕೆ ಬಂದಿದ್ದ 9 ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರೋ ಘಟನೆ ಶೃಂಗೇರಿ ತಾಲೂಕಿನ ತುಂಗಾ ನದಿಯಲ್ಲಿ ನಡೆದಿದೆ. 

ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಹಲಸೂರು ಪ್ರಿಯದರ್ಶಿನಿ ಪ್ರೌಢಶಾಲೆಯ ತರುಣ್ ಗೌಡ ಮೃತ ವಿದ್ಯಾರ್ಥಿ. ಶಾಲೆಯಿಂದ ಸುಮಾರು 60 ವಿದ್ಯಾರ್ಥಿಗಳು ಶೃಂಗೇರಿಗೆ ಪ್ರವಾಸಕ್ಕೆ ಬಂದಿದ್ದರು. ಈ ವೇಳೆ ಮಕ್ಕಳು ಸ್ನಾನಕ್ಕೆ ಬಂದಾಗ ಶೌಚಗೃಹದವರು ಒಬ್ಬರಿಗೆ 20 ರೂಪಾಯಿ ಕೇಳಿದ್ದಾರೆ.  ಹಣ ಜಾಸ್ತಿಯಾಯಿತೆಂದು ಎಲ್ಲರೂ ತುಂಗಾ ನದಿಗೆ ಸ್ನಾನಕ್ಕೆ ಹೋದಾಗ ಈ ದುರ್ಘಟನೆ ಸಂಭವಿಸಿದೆ. 

ಸ್ಥಳಿಯರು ಹಾಗೂ ಪೊಲೀಸರ ಸಹಕಾರದಿಂದ ಸುಮಾರು ಒಂದು ಗಂಟೆಯ ಬಳಿಕ ವಿದ್ಯಾರ್ಥಿಯ ಮೃತದೇಹವನ್ನ ನೀರಿನಿಂದ ಮೇಲೆತ್ತಿದ್ದಾರೆ. ಶೃಂಗೇರಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
 

PREV
click me!

Recommended Stories

ಅಡಿಕೆ ತೋಟದ ದುರಂತ: ಗೊನೆ ಕೊಯ್ಯುವಾಗ ಆಯತಪ್ಪಿ ಬಿದ್ದ ಕಾರ್ಮಿಕ ಸಾವು
ಕಾಂಗ್ರೆಸ್ ಮುಖಂಡ ಗಣೇಶ್ ಗೌಡ ಕೊಲೆ ರಹಸ್ಯ ರಿವೀಲ್: ಪೊಲೀಸರ ಬಲೆಗೆ ಬಿದ್ದ ಮೂವರು!