ಪ್ರವಾಸಿ ತಾಣವಾಗಿ ಇತಿಹಾಸ ಪ್ರಸಿದ್ದ ತಲಕಾಯಲಬೆಟ್ಟ: ಸಚಿವ ಮುನಿಯಪ್ಪ ಭರವಸೆ

By Kannadaprabha NewsFirst Published Aug 12, 2024, 11:39 PM IST
Highlights

ತಾಲೂಕಿನ ಇತಿಹಾಸ ಪ್ರಸಿದ್ದ ತಲಕಾಯಲ ಬೆಟ್ಟದಲ್ಲಿ ಭೂನೀಳಾ ಸಮೇತ ಶ್ರೀ ವೆಂಕಟರಮಣಸ್ವಾಮಿಯ ದೇವಾಲಯದ ನವೀಕರಣ ಮಾಡಲು ಈಗಾಗಲೇ ದೇವಸ್ಥಾನದ ಸಮಿತಿ ತಯಾರಿ ನಡೆದಿದೆ. ಮುಂದಿನ ದಿನಗಳಲ್ಲಿ ಶ್ರೀಕ್ಷೇತ್ರವನ್ನು ಪ್ರವಾಸಿ ತಾಣವಾಗಿ ಮಾಡಲು ಕ್ರಮ ವಹಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.

ಶಿಡ್ಲಘಟ್ಟ (ಆ.12): ತಾಲೂಕಿನ ಇತಿಹಾಸ ಪ್ರಸಿದ್ದ ತಲಕಾಯಲ ಬೆಟ್ಟದಲ್ಲಿ ಭೂನೀಳಾ ಸಮೇತ ಶ್ರೀ ವೆಂಕಟರಮಣಸ್ವಾಮಿಯ ದೇವಾಲಯದ ನವೀಕರಣ ಮಾಡಲು ಈಗಾಗಲೇ ದೇವಸ್ಥಾನದ ಸಮಿತಿ ತಯಾರಿ ನಡೆದಿದೆ. ಮುಂದಿನ ದಿನಗಳಲ್ಲಿ ಶ್ರೀಕ್ಷೇತ್ರವನ್ನು ಪ್ರವಾಸಿ ತಾಣವಾಗಿ ಮಾಡಲು ಕ್ರಮ ವಹಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.

ತಾಲೂಕಿನ ತಲಕಾಯಲ ಬೆಟ್ಟ ಗ್ರಾಮದಲ್ಲಿ ಶ್ರಾವಣ ಮಾಸದ ಮೊಲನೇ ಶನಿವಾರ ಇತಿಹಾಸ ಪ್ರಸಿದ್ಧ ಭೂನೀಳಾ ಸಮೇತ ಶ್ರೀ ವೆಂಕಟರಮಣಸ್ವಾಮಿಯ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಮಾತನಾಡಿದ ಅವರು, ದೇವಾಲಯಕ್ಕೆ ದಿನದಂದ ದಿನಕ್ಕೆ ಭಕ್ತಾದಿಗಳು ಹೆಚ್ಚಾಗುತ್ತಿರುವುದರಿಂದ ಇಲ್ಲಿನ ದೇವಸ್ಥಾನದ ನಕ್ಷೆ ಮತ್ತು ಅಂದಾಜು ವೆಚ್ಚವನ್ನು ಸರ್ಕಾರದ ಗಮನಕ್ಕೆ ತಂದಿದ್ದೇನೆ ಎಂದರು.

Latest Videos

ಪ್ರವಾಸಿ ತಾಣಕ್ಕೆ ಬೇಡಿಕೆ: ದೇವಸ್ಥಾನ ಸಂಪೂರ್ಣ ಅಭಿವೃದ್ಧಿ ಕೆಲಸ ಆದ ನಂತರ ಎರಡನೇ ಹಂತದಲ್ಲಿ ಅದರ ಬಗ್ಗೆ ಗಮನ ನೀಡಲಾಗುವುದು. ಮೊದಲು ದೇವಸ್ಥಾನ ಕಾಮಗಾರಿ ಪ್ರಾರಂಭವಾಗಲಿ. ದೇವಸ್ಥಾನಕ್ಕೆ ಸಂಬಂಧಿಸಿದ ಸ್ಥಳ ಸುಮಾರು 100 ಎಕರೆ ಇದೆ. ಅದರಲ್ಲಿ ಉತ್ತಮವಾದ ಪ್ರವಾಸಿ ತಾಣವನ್ನು ನಿರ್ಮಿಸಿ ಪ್ರವಾಸಿಗರು ಉಳಿದುಕೊಂಡು ಬೆಳಗಿನ ಜಾವ ಪೂಜೆ ಸಲ್ಲಿಸಲು ಅವಕಾಶ ಮಾಡಿಕೊಟ್ಟು, ಎರಡನೇ ಹಂತದಲ್ಲಿ ಆ ಕಾರ್ಯ ಪ್ರಾರಂಭಿಸೋಣ ಎಂದರು.

ಗರ್ಭಿಣಿಯರು, ಬಾಣಂತಿಯರಿಗೆ ವಿತರಿಸಿದ ಅಂಗನವಾಡಿ ಬೆಲ್ಲದ ಪೊಟ್ಟಣದಲ್ಲಿ ಸತ್ತ ಇಲಿ ಪತ್ತೆ

ಈ ಸಂದರ್ಭದಲ್ಲಿ ತಹಸೀಲ್ದಾರ್ ಬಿ.ಎನ್ ಸ್ವಾಮಿ, ದೇವಾಲಯದ ಅಧ್ಯಕ್ಷ ಡಿ.ಪಿ. ನಾಗರಾಜ್ , ರಾಯಪ್ಪನಹಳ್ಳಿ ಅಶ್ವತ್ ನಾರಾಯಣರೆಡ್ಡಿ, ಶ್ರೀನಿವಾಸರೆಡ್ಡಿ, ರಾಧಮ್ಮ , ಗೋಪಾಲ ರೆಡ್ಡಿ, ಎಂ.ಪಿ ರವಿ,ಮಂಜುಳ ಪಾಂಡುರಂಗ, ಡಿ.ವಿ ಶ್ರೀರಂಗಪ್ಪ, ಸಾದಲಿ ಗೋವಿಂದರಾಜು, ಸೀತಾರಾಮ್, ಗ್ಯಾಸ್ ದ್ಯಾವಪ್ಪ , ಶ್ರೀನಿವಾಸ್, ಎನ್ ಟಿ.ಆರ್ ನರಸಿಂಹ ಆಹಾರ ಇಲಾಖೆಯ ಅಧಿಕಾರಿಗಳು, ಮತ್ತಿತರರು ಪೂಜೆಯಲ್ಲಿ ಪಾಲ್ಗೊಂಡಿದ್ದರು.

click me!