ಅಮ್ಮ ಬೇಕು ಎಂದ ಮಗುವಿನ ಬೆನ್ನಿಗೆ ಬರೆ ಹಾಕಿದ ಹುಬ್ಬಳ್ಳಿ ಶಿಕ್ಷಕಿ

Published : Aug 29, 2018, 06:21 PM ISTUpdated : Sep 09, 2018, 10:14 PM IST
ಅಮ್ಮ ಬೇಕು ಎಂದ ಮಗುವಿನ ಬೆನ್ನಿಗೆ ಬರೆ ಹಾಕಿದ ಹುಬ್ಬಳ್ಳಿ ಶಿಕ್ಷಕಿ

ಸಾರಾಂಶ

ನರ್ಸರಿ ಶಾಲೆಗೆ ಹೋಗಿದ್ದ ಮಗು ಅಮ್ಮ ಬೇಕು ಎಂದು ಹಠ ಮಾಡಿತ್ತು. ಒಂದು ಚೂರು ರಚ್ಚೆ ಹಿಡಿದಿತ್ತು. ಆ ಮಗುವನ್ನು ಸಮಾಧಾನಪಡಿಸಿ, ಸಂತೈಸಬೇಕಿದ್ದ ನರ್ಸರಿ ಶಿಕ್ಷಕಿ ಮಾಡಿದ್ದು ಮಾತ್ರ ಅಮಾನವೀಯ ಕೆಲಸ. ಏನೂ ಅರಿಯದ ಮುಗ್ಧ ಮಗುವಿನ ಬೆನ್ನಿಗೆ ಬರೆ ಹಾಕಿದ್ದಾಳೆ.

ಹುಬ್ಬಳ್ಳಿ[ಆ.29]  ಅಮ್ಮ ಬೇಕು ಎಂದು ಹಠ ಹಿಡಿದಿದ್ದ ನಾಲ್ಕು ವರ್ಷದ ಬಾಲಕನ ಬೆನ್ನು ಊದಿಕೊಂಡಿದೆ. ನರ್ಸರಿ ಶಿಕ್ಷಕಿ ಬರೆ ಹಾಕಿದ್ದಾಳೆ. ಹೆಗ್ಗೇರಿ ಪ್ರದೇಶದ ಬಾಲಾಜಿ ನರ್ಸರಿ ಶಾಲೆಯಲ್ಲಿ ಪ್ರಕರಣ ನಡೆದಿದೆ. 

ಅಮ್ಮ ಬೇಕು ಎಂದು ಹಠ ಮಾಡಿದ್ದಕ್ಕೆ ಶಾಲೆಯ ಶಿಕ್ಷಕ ಹಾಗೂ ಆಯಾ ನನ್ನ ಮಗನ ಬೆನ್ನ ಮೇಲೆ ಬರೆ ಎಳೆದಿದ್ದಾರೆ ಎಂದು ಬಾಲಕನ ತಾಯಿ ಕಾವೇರಿ ಆರೋಪ ಮಾಡಿದ್ದಾರೆ. ಆದರೆ ಆರೋಪವನ್ನು ಶಿಕ್ಷಕ ಸತೀಶ್ ನಾಯ್ಡು ಹಾಗೂ ಆಯಾ ಅಲ್ಲಗಳೆದಿದ್ದಾರೆ.

ಬಾಲಕನ ತಾಯಿ ಕಾವೇರಿ ಶಿಕ್ಷಕ ಸತೀಶ್ ಹಾಗೂ ಆಯಾ ಮೇಲೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

PREV
click me!

Recommended Stories

BREAKING: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಪುತ್ರನ ಕಾರ್ಖಾನೆಗೆ ಮಶಿನ್ ತರುವಾಗ ದುರಂತ; ವಿದ್ಯುತ್ ಸ್ಪರ್ಶಿಸಿ ಯುವಕ ಸಾವು
ಪಲ್ಲವಿ ಕಗ್ಗಲ್ ದುರಂತ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ನೇಮಕಾತಿ ವಿಳಂಬದ ಸುದ್ದಿ ಸುಳ್ಳು ಎಂದ ಕಮಿಷನರ್!