Dharwad: ದೂರು ಕೊಟ್ಟವರಿಗೆ ಸಾಬೀತು ಪಡಿಸುವ ಜವಾಬ್ದಾರಿ ಇರುತ್ತದೆ: ಡಿಸಿ ಗುರುದತ್ತ ಹೆಗಡೆ ಸಲಹೆ

By Sathish Kumar KHFirst Published Dec 15, 2022, 7:36 PM IST
Highlights

ಯಾವುದೇ ವ್ಯಕ್ತಿಗೆ ಅನ್ಯಾಯವಾಗಿದ್ದರೆ ನ್ಯಾಯ ಕೊಡಿಸಲು ಸೂಕ್ತ ಕ್ರಮ ಜರುಗಿಸಲಾಗುತ್ತದೆ. ಆದರೆ ದೂರು ಕೊಟ್ಟವರಿಗೆ ಆಗಿರುವ ಅನ್ಯಾಯವನ್ನು ಪೂರಕ ದಾಖಲೆಗಳೊಂದಿಗೆ ಸಾಬೀತು ಪಡಿಸುವ ಜವಾಬ್ದಾರಿಯೂ ಇರುತ್ತದೆ.

ಧಾರವಾಡ (ಡಿ.15): ಯಾವುದೇ ವ್ಯಕ್ತಿಗೆ ಅನ್ಯಾಯವಾಗಿದ್ದರೆ ನ್ಯಾಯ ಕೊಡಿಸಲು ಸೂಕ್ತ ಕ್ರಮ ಜರುಗಿಸಲಾಗುತ್ತದೆ. ಆದರೆ ದೂರು ಕೊಟ್ಟವರಿಗೆ ಆಗಿರುವ ಅನ್ಯಾಯವನ್ನು ಪೂರಕ ದಾಖಲೆಗಳೊಂದಿಗೆ ಸಾಬೀತು ಪಡಿಸುವ ಜವಾಬ್ದಾರಿಯೂ ಇರುತ್ತದೆ ಎಂದು ಜಿಲ್ಲಾ ಪೊಲೀಸ್ ದೂರು ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಜಿಲ್ಲಾ ಪೊಲೀಸ್ ದೂರು ಪ್ರಾಧಿಕಾರದ ಸಭೆ ಅಧ್ಯಕ್ಷತೆ ವಹಿಸಿ, ಪೊಲೀಸ್ ದೂರುಗಳ ಪರಿಶೀಲಿಸಿ, ಮಾತನಾಡಿದರು. ಸಕಾಲಕ್ಕೆ ದೂರು ಸ್ವೀಕರಿಸದ ಅಥವಾ ಯಾವುದೇ ಪೊಲೀಸ್ ಅಧಿಕಾರಿ, ಸಿಬ್ಬಂದಿಯಿಂದ ತೊಂದರೆ ಆಗಿದ್ದರೆ ಬಾಧಿತ ವ್ಯಕ್ತಿಗಳು ದೂರು ಸಲ್ಲಿಸಬಹುದು. ಆದರೆ ದೂರು ಸಂಬಂಧಿತ ದಾಖಲೆ ಸಾಕ್ಷ್ಯಗಳೊಂದಿಗೆ ಅದನ್ನು ಸಾಬೀತುಪಡಿಸುವ ಜವಾಬ್ದಾರಿ ಇರುತ್ತದೆ ಎಂದು ಹೇಳಿದರು.

Latest Videos

Ramanagara: ಕುಮಾರಸ್ವಾಮಿ ಜನ್ಮದಿನ ಪ್ರಯುಕ್ತ ಶ್ರೀನಿವಾಸ ಕಲ್ಯಾಣೋತ್ಸವ ಆಯೋಜನೆ

ಪೊಲೀಸರ ಮೇಲೆ ಜಿಲ್ಲಾಧಿಕಾರಿಗೆ ದೂರುಗಳನ್ನು ನೀಡಿ: ಜಿಲ್ಲೆಯ ಎಲ್ಲ ಪೊಲೀಸ್ ಠಾಣೆಗಳು ಜನಸ್ನೇಹಿಯಾಗಿ ಕೆಲಸ ಮಾಡುತ್ತಿವೆ. ಯಾವುದೇ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಯಿಂದ ತೊಂದರೆ ಉಂಟಾದರೆ ಅಥವಾ ಇಲಾಖೆ ನಿಯಮಗಳ ಪ್ರಕಾರ ಕ್ರಮ ಜರುಗಿಸದಿದ್ದರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಅಥವಾ ಜಿಲ್ಲಾ ಪೊಲೀಸ್ ಪ್ರಾಧಿಕಾರ, ಜಿಲ್ಲಾಧಿಕಾರಿಗಳ ಕಚೇರಿಗೆ ದೂರು ಸಲ್ಲಿಸಬಹುದು. ಇವುಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ಜರುಗಿಸಲಾಗುವುದು. ಜಿಲ್ಲಾ ಪೊಲೀಸ್ ಪ್ರಾಧಿಕಾರಕ್ಕೆ ಸಲ್ಲಿಕೆ ಆಗಿರುವ ದೂರುಗಳ ಕುರಿತು ಪ್ರತಿ ದೂರುದಾರರನ್ನು ಪ್ರತ್ಯೇಕವಾಗಿ ಕರೆದು ಪೊಲೀಸ್ ಪ್ರಾಧಿಕಾರದ ಸದಸ್ಯರ ಮುಂದೆ ವಿವರಣೆ ಪಡೆದು ವಿಚಾರಣೆ ನಡೆಸಿದರು. ಇನ್ನು ದೂರುಗಳಿಗೆ ಸಂಬಂಧಿತ ಸಾಕ್ಷ್ಯ, ದಾಖಲೆಗಳನ್ನು ಪಡೆದರು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳವುದಾಗಿ ತಿಳಿಸಿದರು.

ಈ ಸಭೆಯಲ್ಲಿ ದೂರು ಪ್ರಾಧಿಕಾರದ ಉಪಾಧ್ಯಕರೂ ಆಗಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ್, ಮಹಾನಗರ ಪೊಲೀಸ್ ಆಯುಕ್ತರ ಪ್ರತಿನಿಧಿಯಾಗಿ ಉಪಪೊಲೀಸ್ ಆಯುಕ್ತ ಸಾಹಿಲ್ ಬಾಗ್ಲಾ, ಜಿಲ್ಲಾ ಪೊಲೀಸ್ ದೂರು ಪ್ರಾಧಿಕಾರದ ಸದಸ್ಯರು ಇದ್ದರು.

click me!