ರಂಗ ಚಟುವಟಿಕೆ ಶಿಕ್ಷಣದ ಭಾಗವಾಗಬೇಕು : ನಟಿ

Published : Oct 02, 2023, 07:00 AM IST
 ರಂಗ ಚಟುವಟಿಕೆ ಶಿಕ್ಷಣದ ಭಾಗವಾಗಬೇಕು : ನಟಿ

ಸಾರಾಂಶ

ರಂಗ ಚಟುವಟಿಕೆ ಶಿಕ್ಷಣದ ಭಾಗವಾಗಬೇಕು ಎಂದು ನಟಿ ನಿಖಿಲಾ ಅಭಿಪ್ರಾಯಪಟ್ಟರು.

 ಮೈಸೂರು :  ರಂಗ ಚಟುವಟಿಕೆ ಶಿಕ್ಷಣದ ಭಾಗವಾಗಬೇಕು ಎಂದು ನಟಿ ನಿಖಿಲಾ ಅಭಿಪ್ರಾಯಪಟ್ಟರು.

ನೈಪುಣ್ಯ ಸ್ಕೂಲ್ ಆಫ್ ಎಕ್ಸಲೆನ್ಸ್ ಆಯೋಜಿಸಿದ್ದ ನೈಪುಣ್ಯ ದಸರಾ ಚಿತ್ರಕಲಾ ಪ್ರಶಸ್ತಿ ಪ್ರದಾನ ಮತ್ತು ಬಹುಮಾನ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಪ್ರತಿಯೊಂದು ಮಗುವಿನಲ್ಲೂ ಸಾಧಕ ಶಕ್ತಿ ಇದ್ದೇ ಇರುತ್ತದೆ. ಈ ನಿಟ್ಟಿನಲ್ಲಿ ಮಗುವಿನ ಆಸಕ್ತಿ ವಲಯ ಗುರುತಿಸಿ ಉತ್ತೇಜಿಸುವುದು ಪೋಷಕರು ಹಾಗೂ ಶಿಕ್ಷಣ ಸಂಸ್ಥೆಗಳ ಜವಾಬ್ದಾರಿ. ಇದು ಪರಸ್ಪರ ಸಹಕಾರದಿಂದ ಈಡೇರಿಸಿದರೆ ಮಾತ್ರ ಅರ್ಥಪೂರ್ಣ ನೈಜ ಶಿಕ್ಷಣ ಮಗುವಿಗೆ ದೊರಕಿಸಿ ಕೊಡಲು ಸಾಧ್ಯ ಎಂದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಎಂ.ಡಿ. ಸುದರ್ಶನ್ ಮಾತನಾಡಿ, ನೈಪುಣ್ಯ ಶಾಲೆಯು ಏರ್ಪಡಿಸಿದ್ದ ಅಂತರ ಶಾಲಾ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತಾರದ ವಿದ್ಯಾರ್ಥಿಗಳು ಆತ್ಮವಿಶ್ವಾಸ ಹೆಚ್ಚಿಸಿಕೊಳ್ಳಬೇಕು. ಬಹುಮಾನ ಬಾರದ ವಿದ್ಯಾರ್ಥಿಗಳು ಗೆಲುವಿನ ಛಲ ಮೂಡಿಸಿಕೊಳ್ಳಬೇಕು ಎಂದರು.

ಸಂಸ್ಥೆ ಅಧ್ಯಕ್ಷ ಆರ್. ರಘು ಅಧ್ಯಕ್ಷತೆ ವಹಿಸಿದ್ದರು. ಪ್ರಾಂಶುಪಾಲೆ ಶೋಭಿತಾ ಎಸ್. ಆರಾಧ್ಯ ಇದ್ದರು.

ಬಡವರ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ

ಬೆಂಗಳೂರು (ಸೆ.30): ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ಪ್ರಗತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪರಿಶೀಲಿಸಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಇಲಾಖೆಯ ಸಚಿವರುಗಳು ಮತ್ತು ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆಯ ಸಭೆ ನಡೆಸಿದ ಸಿಎಂ, ಶುಚಿ ಸಂಭ್ರಮ ಕಿಟ್ ತರಿಸಿ ಅದರಲ್ಲಿದ್ದ ಟೂತ್ ಬ್ರಷ್, ಪೇಸ್ಟ್, ಸೋಪು ಮತ್ತು ಕೊಬ್ಬರಿ ಎಣ್ಣೆಯ ಗುಣ ಮಟ್ಟದ ಬಗ್ಗೆ ಗರಂ ಆದರು. 

ಕಿಟ್ ನಲ್ಲಿನ ವಸ್ತುಗಳ ತೂಕದ ಪ್ರಮಾಣ ಮತ್ತು ಗುಣಮಟ್ಟ ಹೆಚ್ಚಿಸಲು ಖಡಕ್ ಸೂಚನೆ ನೀಡಿದರು.  ಐಸೆಕ್ ಮತ್ತು ಐಐಎಸ್ಸಿಯಿಂದ ಶಿಕ್ಷಕರ ಮೌಲ್ಯಮಾಪನ ನಡೆಸಲು ತೀರ್ಮಾನ ಮಾಡಿದರು. ಬಡವರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯಬೇಕು;  ದಡ್ಡರನ್ನು ಜಾಣರನ್ನಾಗಿ ಮಾಡಬೇಕು ಎಂದು ಕಿವಿಮಾತು ಹೇಳಿದರು.

ಸಿದ್ದು ಗ್ಯಾರಂಟಿ ಗುಂಗಿನಲ್ಲಿದ್ದಾರೆ, ಡಿಕೆಶಿಗೆ ನೀರಾವರಿ ಜ್ಞಾನವಿಲ್ಲ: ಸಿ.ಪಿ.ಯೋಗೇಶ್ವರ್

ಸಭೆಯ ಮುಖ್ಯಾಂಶಗಳು: ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಇಲಾಖೆಗಳ ವಸತಿ ನಿಲಯಗಳ 5,48,000 ಮಕ್ಕಳಿಗೆ  ವಿದ್ಯಾರ್ಥಿಗಳಿಗೆ ಟೂತ್ ಪೇಸ್ಟ್ , ಬ್ರಶ್, ಕೊಬ್ಬರಿ ಎಣ್ಣೆ, ಮೈ ಸೋಪು, ಬಟ್ಟೆ ಸೋಪು ಒಳಗೊಂಡ 93 ರೂ.ಗಳ ಕಿಟ್ ಗಂಡುಮಕ್ಕಳಿಗೆ ಹಾಗೂ  ಹೆಣ್ಣು ಮಕ್ಕಳಿಗೆ 135 ರೂ.ಗಳ ವೆಚ್ಚದಲ್ಲಿ ಶುಚಿ ಸಂಭ್ರಮ ಕಿಟ್ ನೀಡಲು ಟೆಂಡರ್ ಕರೆಯಲು ಸಭೆಯಲ್ಲಿ ಒಪ್ಪಿಗೆ ನೀಡಲಾಯಿತು. ಕಿಟ್ ಗಳ ವಿತರಣೆಗೆ  ವರ್ಷಕ್ಕೆ 90 ಕೋಟಿ ರೂ.ಗಳ ವೆಚ್ಚವಾಗಲಿದೆ. ಕಿಟ್ ನಲ್ಲಿನ ವಸ್ತುಗಳ ಗುಣಮಟ್ಟ ಹೆಚ್ಚಿಸಲು ಸೂಚನೆ ನೀಡಿದರು. 

75 ಗ್ರಾಂಗಳ ಬದಲಿಗೆ 125 ಗ್ರಾಂ ಗಳ  ಸೋಪು ಒದಗಿಸುವಂತೆ ಹಾಗೂ ಇದರಲ್ಲಿ ಕೇವಲ ಶೇ 5 ರಷ್ಟು ಮಾತ್ರ ಲಾಭ ಇಟ್ಟುಕೊಳ್ಳಬೇಕೆಂದು ಮೈಸೂರು  ಸೋಪ್ಸ್ ಅಂಡ್ ಡಿಟರ್ಜೆಂಟ್ಸ್  ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಿಗೆ  ಮುಖ್ಯಮಂತ್ರಿಗಳು ಸ್ಪಷ್ಟ ಮಾತುಗಳಲ್ಲಿ ಎಚ್ಚರಿಸಿದರು. ಟೂತ್ ಪೇಸ್ಟ್ ಪ್ರಮಾಣವನ್ನು ಹೆಚ್ಚಿಸುವಂತೆ ಹಾಗೂ ಹಲ್ಲುಜ್ಜುವ ಬ್ರಶ್ ಗಳ ಗುಣಮಟ್ಟ ಸೇರಿದಂತೆ ಇತರೆ ಗುಣಮಟ್ಟದ ವಸ್ತುಗಳನ್ನು ಮಕ್ಕಳಿಗೆ  ಒದಗಿಸುವಂತೆ ಸಿಎಂ ಸೂಚನೆ ನೀಡಿದರು. 

ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್: ಎಸ್.ಸಿ.ಎಸ್.ಪಿ/ ಟಿ. ಎಸ್.ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ವಿದ್ಯಾರ್ಥಿಗಳಿಗೆ ಪಿ.ಜಿ, ಪಿಹೆಚ್ ಡಿ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಖರೀದಿಸಲು ತೀರ್ಮಾನಿಸಲಾಯಿತು.

ಹೋಬಳಿಗೊಂದರಂತೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಶಾಲೆ ಇರಬೇಕು 178 ಹೋಬಳಿಗಳಲ್ಲಿ ಕ್ರೈಸ್ ಶಾಲೆಗಳಿಲ್ಲ. ಕೆಲವು  ಹೋಬಳಿಗಳಲ್ಲಿ 3-4 ಶಾಲೆಗಳಿವೆ... ಕಸಬಾ ಹೋಬಳಿ ತೆಗೆದರೆ 134  ಶಾಲೆಗಳನ್ನು ತೆರೆಯಬೇಕಿದೆ. ಸ್ವಂತ ಕಟ್ಟಡ ಇಲ್ಲದ ಶಾಲೆಗಳಿದ್ದರೆ , ಅದೇ ಕ್ಷೇತ್ರದ ಮತ್ತೊಂದು ಹೋಬಳಿಗೆ ಶಾಲೆಯನ್ನು ಸ್ಥಳಾಂತರ ಮಾಡುವಂತೆ ಸೂಚಿಸಿದರು.

PREV
Read more Articles on
click me!

Recommended Stories

ಗೃಹ ಲಕ್ಷ್ಮೀ ಅಡಿ 1.24 ಕೋಟಿ ಸ್ತ್ರೀಯರಿಗೆ ₹1.54 ಕೋಟಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಬೆಂಗಳೂರು : ಹೊಸ ಮಾರ್ಗಗಳಿಗೆ ಬರಲಿವೆ ಚಾಲಕ ರಹಿತ ರೈಲು