ದೇಶದ ಶ್ರೀಮಂತರಿಗೆ ಸಂಪತ್ತಿನ ತೆರಿಗೆ ವಿಧಿಸುವುದು ಅಗತ್ಯ

Kannadaprabha News   | Asianet News
Published : Jun 11, 2020, 07:55 AM IST
ದೇಶದ ಶ್ರೀಮಂತರಿಗೆ ಸಂಪತ್ತಿನ ತೆರಿಗೆ ವಿಧಿಸುವುದು ಅಗತ್ಯ

ಸಾರಾಂಶ

ಕೊರೋನಾ ವೈರಸ್‌ ಮಹಾಮಾರಿಯಿಂದ ದೇಶದ ಶೇ.40 ಬಡಜನರಿಗೆ ಕೆಲಸವಿಲ್ಲದಂತಾಗಿದೆ. ಹಾಗಾಗಿ ಶ್ರೀಮಂತರ ಮೇಲೆ ಸಂಪತ್ತಿನ ತೆರಿಗೆ ವಿ​ಧಿಸುವುದರ ಮೂಲಕ ಬಡವರಿಗೆ ಹಂಚಬೇಕು ಎಂದು  ಹಿರಿಯ ವಕೀಲರಾದ ಬಿ.ಜಿ. ಶಿವಮೂರ್ತಿ ಅಭಿಪ್ರಾಯಪಟ್ಟಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ಶಿವಮೊಗ್ಗ(ಜೂ.11): ಹೆಂಡ, ಕುರಿ-ಕೋಳಿ ಸಾಲ ಬೇಡ, ಹೋಬಳಿಗೊಂದು ವಸತಿ ಶಾಲೆ ಕೊಡಿ ಎಂದು ಪ್ರೊ. ಬಿ.ಕೃಷ್ಣಪ್ಪನವರು ಹೋರಾಟ ನಡೆಸಿದರು ಎಂದು ಉಪನ್ಯಾಸಕರಾದ ಡಾ. ಸೋಮಶೇಖರ್‌ ಶಿಮೊಗ್ಗಿ ಅವರು ಹೇಳಿದರು.

ನಗರದ ಡಿಎಸ್‌ಎಸ್‌ ಜಿಲ್ಲಾ ಕಾರ್ಯಾಲಯದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ ವಾದ) ಆಯೋಜಿಸಿದ್ದ ಪ್ರೊ. ಬಿ.ಕೃಷ್ಣಪ್ಪನವರ 82ನೇ ಜನ್ಮದಿನದ ಪ್ರಯುಕ್ತ ಕೊರೋನಾ ಎದುರಿಸಲು ದೇಶದ ಶೇ.1 ಅತೀ ಶ್ರೀಮಂತರ ಮೇಲೆ ಶೇ.2 ಸಂಪತ್ತು ತೆರಿಗೆ ವಿ​ಧಿಸುವ ಕುರಿತು ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಈ ನೆಲದ ದಲಿತರಿಗೆ ಉಳಲು ಭೂಮಿ, ನೆಲೆಸಲು ಸೂರು, ಸಮಾಜದ ಮುಖ್ಯ ವಾಹಿನಿಗೆ ದಲಿತರು ಬರಲು, ವಿದ್ಯಾವಂತರಾಗಲು ಹೋಬಳಿಗೊಂದು ವಸತಿ ಶಾಲೆಯನ್ನು ಮಂಜೂರು ಮಾಡಿ. ಹೆಂಡ, ಕುರಿ-ಕೋಳಿ ಸಾಲ ಕೊಟ್ಟು ಕಾಯಂ ಸಾಲಗರಾರನ್ನಾಗಿ ಮಾಡಬೇಡಿ ಎಂದು ಪ್ರೊ. ಬಿ.ಕೃಷ್ಣಪ್ಪನವರು ಹೇಳುತ್ತಿದ್ದರು ಎಂದು ತಿಳಿಸಿದರು.

ಕಸಬಾ ಏತ ನೀರಾವರಿಗೆ ಶೀಘ್ರ ಚಾಲನೆ

ಸಮಾರಂಭ ಉದ್ಘಾಟಿಸಿ ಮಾತನಾಡಿದ ಹಿರಿಯ ವಕೀಲರಾದ ಬಿ.ಜಿ. ಶಿವಮೂರ್ತಿ, ಕೊರೋನಾ ವೈರಸ್‌ ಮಹಾಮಾರಿಯಿಂದ ದೇಶದ ಶೇ.40 ಬಡಜನರಿಗೆ ಕೆಲಸವಿಲ್ಲದಂತಾಗಿದೆ. ಹಾಗಾಗಿ ಶ್ರೀಮಂತರ ಮೇಲೆ ಸಂಪತ್ತಿನ ತೆರಿಗೆ ವಿ​ಧಿಸುವುದರ ಮೂಲಕ ಸಂಗ್ರಹವಾದ ಹಣದಿಂದ ದೇಶದ ಕೊರೊನಾದಿಂದ ನೊಂದ ಬಡವರಿಗೆ ಕೇಂದ್ರ ಸರ್ಕಾರ ನೆರವಾಗುವುದರ ಮೂಲಕ ದೇಶದ ಆರ್ಥಿಕ ಸ್ಥಿತಿಯನ್ನು ನಿಭಾಯಿಸಬೇಕೆಂದು ಆಶಯ ವ್ಯಕ್ತಪಡಿಸಿದರು.

ಅಧ್ಯಕ್ಷತೆಯನ್ನು ಜಿಲ್ಲಾ ಪ್ರಧಾನ ಸಂಚಾಲಕರಾದ ಟಿ.ಎಚ್‌. ಹಾಲೇಶಪ್ಪ ವಹಿಸಿದ್ದರು, ಸಭೆಯಲ್ಲಿ ಜಿಲ್ಲಾ ಸಂ. ಸಂಚಾಲಕರಾದ ರೇವಪ್ಪ ಹೊಸಕೊಪ್ಪ, ಪಳಲಿರಾಜ್‌, ಮಂಜುನಾಥ್‌ ಎಂ., ಎಂ.ಆರ್‌. ಶಿವಕುಮಾರ್‌, ಎ.ಡಿ. ಆನಂದ್‌, ಜಗ್ಗು, ರಥನ್‌ ಜ್ಯೋತಿ ಮೊದಲಾದವರು ಉಪಸ್ಥಿತರಿದ್ದರು.
 

PREV
click me!

Recommended Stories

ತುಮಕೂರಿನಲ್ಲಿ ಉದ್ಯಮಿಗೆ ಲಂಚಕ್ಕೆ ಬೇಡಿಕೆ; ಇಬ್ಬರು ಭ್ರಷ್ಟ ಅಧಿಕಾರಿಗಳು ಲೋಕಾಯುಕ್ತ ಬಲೆಗೆ!
ಮಂಡ್ಯಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ರಾಜಕೀಯ ಹೊಸ ದಾಳ ಉರುಳಿಸಿದ ದಳಪತಿ!