ದೇವಾಲಯದ ಆವರಣ ಅಸ್ತವ್ಯಸ್ತ : ನಾಗ ವಿಗ್ರಹದ ಕೆಳಗಿತ್ತಾ ನಿಧಿ?

Kannadaprabha News   | Asianet News
Published : Dec 15, 2019, 12:27 PM IST
ದೇವಾಲಯದ ಆವರಣ ಅಸ್ತವ್ಯಸ್ತ : ನಾಗ ವಿಗ್ರಹದ ಕೆಳಗಿತ್ತಾ ನಿಧಿ?

ಸಾರಾಂಶ

ಆ ದೇಗುಲದ ನಾಗರ ವಿಗ್ರಹದ ಕೆಳಗಿತ್ತಾ ಪ್ರಾಚೀನ ನಿಧಿ, ಇದರಿಂದಾಗಿಯೇ ದೇವಾಲಯದ ಆವರಣ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಏನಿದು ವಿಚಾರ? 

ಚಿತ್ರದುರ್ಗ [ಡಿ.15]:  ದೇಗುಲದಲ್ಲಿ ಭೂಮಿಯನ್ನು ಅಗೆದು ನಾಗರ ವಿಗ್ರಹವನ್ನು ವಿರೂಪಗೊಳಿಸಿದ ಘಟನೆ ಚಿತ್ರದುರ್ಗದಲ್ಲಾಗಿದೆ. 

ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಕ್ಯಾತನಮಳೆ ಗ್ರಾಮದ ಮಹಾಲಿಂಗೇಶ್ವರ ದೇಗುಲದಲ್ಲಿ ನಿಧಿಗಾಗಿ ನೆಲವನ್ನು ಅಗೆದಿದ್ದು, ನಾಗ ದೇವರ ವಿಗ್ರಹ ವಿರೂಪಗೊಳಿಸಲಾಗಿದೆ. 

ರಾತ್ರಿ ವೇಳೆ ಸ್ಥಳದಲ್ಲಿ ನಿಧಿಗಳ್ಳರು ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದ್ದು, ದೇಗುಲದ ಆವರವನ್ನು ಸಂಪೂರ್ಣವಾಗಿ ಅಸ್ತವ್ಯಸ್ತ ಮಾಡಲಾಗಿದೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ದೇಗುಲದ ಆವರಣವನ್ನು ಅಗೆದ ಸಂಬಂಧ ಇದೀಗ ಇಲ್ಲಿನ ಅಬ್ಬಿನಹೊಳೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. 

ಈ ಹಿಂದೆಯೂ ಅನೇಕ ದೇಗುಲಗಳಲ್ಲಿ ಹುಂಡಿಗಳನ್ನು ಒಡೆದು ಕಳ್ಳತನವನ್ನೂ ಕೂಡ ಮಾಡಲಾಗಿತ್ತು. ಇದೀಗ ನಿಧಿಯ ಆಸೆಗಾಗಿ ದೇವಾಲಯದ ಆವರಣವನ್ನು ಕಿತ್ತು ಹಾಕಲಾಗಿದೆ.

PREV
click me!

Recommended Stories

ಗಮನಿಸಿ, ಮಂಗಳೂರು-ಚೆನ್ನೈ ಎಗ್ಮೋರ್ ವಿಶೇಷ ರೈಲು ಓಡಾಟ ವಿಸ್ತರಣೆ, ಈ ಎಲ್ಲಾ ನಿಲ್ದಾಣಗಳಲ್ಲಿ ನಿಲುಗಡೆ ಇದೆ
ಚಿತ್ರದುರ್ಗ ಹಳಿ ಮೇಲೆ ಕೆಟ್ಟು ನಿಂತ ಹುಬ್ಬಳ್ಳಿ-ಬೆಂಗಳೂರು ರೈಲು, ಟಾಟಾನಗರ ಎಕ್ಸ್‌ಪ್ರೆಸ್ ರೈಲು ಕೂಡ ಸ್ಥಗಿತ!