ನಿಡಗುಂದಿ: ದೇವಸ್ಥಾನದ ಹುಂಡಿಗೆ ಕನ್ನ ಹಾಕಿದ ಖದೀಮರು

Published : Feb 09, 2020, 10:02 AM IST
ನಿಡಗುಂದಿ: ದೇವಸ್ಥಾನದ ಹುಂಡಿಗೆ ಕನ್ನ ಹಾಕಿದ ಖದೀಮರು

ಸಾರಾಂಶ

ದೇವಸ್ಥಾನದಲ್ಲಿನ ಹುಂಡಿ ಒಡೆದು ಹಣ ಕಳ್ಳತನ|ನಿಡಗುಂದಿ ಪಟ್ಟಣದಲ್ಲಿ ನಡೆದ ಘಟನೆ| ಶ್ರೀ ಮುದ್ಧೇಶ್ವರ ದೇವಸ್ಥಾನದಲ್ಲಿ ಕಳ್ಳತನ| ಖದೀಮರ ಬಂಧನಕ್ಕೆ ಸ್ಥಳೀಯರ ಆಗ್ರಹ|

ವಿಜಯಪುರ(ಫೆ.09): ಖದೀಮರು ದೇವಸ್ಥಾನದಲ್ಲಿನ ಹುಂಡಿ ಒಡೆದು ಹಣ ಕಳ್ಳತನ ಮಾಡಿದ ಘಟನೆ ವಿಜಯಪುರ ಜಿಲ್ಲೆಯ ನಿಡಗುಂದಿ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಶ್ರೀ ಮುದ್ಧೇಶ್ವರ ದೇವಸ್ಥಾನದಲ್ಲಿ ಕಳ್ಳತನವಾಗಿದೆ. 

ಪ್ರತಿ ವರ್ಷ ಮಾರ್ಚ್‌ನಲ್ಲಿ ಶ್ರೀ ಮುದ್ಧೇಶ್ವರ ಸ್ವಾಮಿಯ ಜಾತ್ರೆ ನಡೆಯುತ್ತದೆ.  ಜಾತ್ರಾ ಸಮೀತಿ ಈ ವೇಳೆ ಹುಂಡಿಯ ಹಣ ತೆಗೆಯುತ್ತಿದ್ದರು. ಆದರೆ ಜಾತ್ರೆಗೆ ಇನ್ನೂ ಒಂದು ತಿಂಗಳು ಬಾಕಿ ಇದೆ. ಅಷ್ಟರಲ್ಲೇ ಕಳ್ಳರು ತಮ್ಮ ಕೈಚೆಳಕ ಮೆರೆದು ಕಳ್ಳತನ ಮಾಡಿದ್ದಾರೆ.

ಶ್ರೀ ಮುದ್ಧೇಶ್ವರ ದೇವಸ್ಥಾನದ ಹುಂಡಿಯಲ್ಲಿ ಪ್ರತಿ ವರ್ಷ ಲಕ್ಷಕ್ಕೂ ಅಧಿಕ ಹಣ ಸಂಗ್ರಹವಾಗುತ್ತಿತ್ತು. ದೇವರ ಹುಂದಿಯಲ್ಲಿನ ದುಡ್ಡು ಕದ್ದ ಆರೋಪಿಗಳನ್ನು ಶೀಘ್ರದಲ್ಲಿಯೇ ಬಂಧಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ. 
 

PREV
click me!

Recommended Stories

ಚಾಮರಾಜನಗರ ಶೂಟೌಟ್‌: ಅರಣ್ಯಾಧಿಕಾರಿ ವಿರುದ್ಧFIR.. ಪ್ರಕರಣದ ಸತ್ಯ ಬಿಚ್ಚಿಟ್ಟ ಐಜಿಪಿ ಬೋರಲಿಂಗಯ್ಯ..!
ಎಲ್ಲವೂ ರಾಯರ ಪವಾಡ: ಸಾವಿನ ದವಡೆಯಿಂದ ಪಾರಾದ MBBS ವಿದ್ಯಾರ್ಥಿನಿ! ವೀಲ್ ಚೇರ್‍‌ನಿಂದ ಎದ್ದು ಓಡಾಡಿದ್ದು ಹೇಗೆ?