ವೀರ್‌ ಸಾವರ್ಕರ್‌ ಫಲಕಕ್ಕೆ ಮಸಿ ಬಳೆದವರು ಅಯೋಗ್ಯರು: ಸಿ.ಟಿ.ರವಿ

Published : May 29, 2024, 06:11 PM IST
ವೀರ್‌ ಸಾವರ್ಕರ್‌ ಫಲಕಕ್ಕೆ ಮಸಿ ಬಳೆದವರು ಅಯೋಗ್ಯರು: ಸಿ.ಟಿ.ರವಿ

ಸಾರಾಂಶ

ಬೆಂಗಳೂರಿನ ಯಲಹಂಕ ಮೇಲ್ಸೇತುವೆಯ ವೀರ್‌ ಸಾವರ್ಕರ್‌ ಫಲಕಕ್ಕೆ ಮಸಿ ಬಳಿದು ಅಪಮಾನಿಸಿರುವುದು ಖಂಡನೀಯ ಸಂಗತಿಯಾಗಿದ್ದು, ಈ ಕೃತ್ಯವನ್ನೆಸಗಿದ ಎನ್‌ಎಸ್‌ಯುಐನವರು ಅಯೋಗ್ಯರಾಗಿದ್ದಾರೆ ಎಂದು ಮಾಜಿ ಸಚಿವ ಸಿ.ಟಿ.ರವಿ ಕಿಡಿಕಾರಿದರು.  

ರಾಯಚೂರು (ಮೇ.29): ಬೆಂಗಳೂರಿನ ಯಲಹಂಕ ಮೇಲ್ಸೇತುವೆಯ ವೀರ್‌ ಸಾವರ್ಕರ್‌ ಫಲಕಕ್ಕೆ ಮಸಿ ಬಳಿದು ಅಪಮಾನಿಸಿರುವುದು ಖಂಡನೀಯ ಸಂಗತಿಯಾಗಿದ್ದು, ಈ ಕೃತ್ಯವನ್ನೆಸಗಿದ ಎನ್‌ಎಸ್‌ಯುಐನವರು ಅಯೋಗ್ಯರಾಗಿದ್ದಾರೆ ಎಂದು ಮಾಜಿ ಸಚಿವ ಸಿ.ಟಿ.ರವಿ ಕಿಡಿಕಾರಿದರು. ನಗರದ ಶಾಸಕರ ನಿವಾಸದಲ್ಲಿ ಮಾತನಾಡಿದ ಅವರು, ಇಂಥಹ ತರಬೇತಿ ಪಡೆದವರು ಯಾವ ದೇಶಭಕ್ತರಾಗುತ್ತಾರೆ. ಇಂಥವರೇ ವಿಧಾನಸೌಧಕ್ಕೆ ಬಂದು ಪಾಕಿಸ್ತಾನಕ್ಕೆ ಜಿಂದಾಬಾದ್‌ ಕೂಗುತ್ತಾರೆ. ವೀರ್‌ ಸಾವರ್ಕರ್ ಮಹಾನ್ ದೇಶ ಭಕ್ತರು ಎನ್ನುವುದು ಇವರಿಗೆ ಗೊತ್ತಿಲ್ಲ. ಸಾವರ್ಕರ್‌ ದೇಶ ಸ್ವಾತಂತ್ರ್ಯಕ್ಕಾಗಿ ಶಿಕ್ಷೆಗೊಳಗಾದವರು, ಅವರ ಇಡೀ ಕುಟುಂಬವೇ ಸ್ವಾತಂತ್ರ್ಯ ಹೋರಾಟದಲ್ಲಿ ಆಹುತಿಯಾಗಿದೆ. 

ಇಂಥಹ ದೇಶಭಕ್ತರ ನಾಮ ಫಲಕಕ್ಕೆ ಮಸಿಬಳಿಯೋದಲ್ಲ ಕಾಂಗ್ರೆಸ್‌ ತನ್ನ ಮುಖಕ್ಕೆ ತಾನು ಮಸಿ ಬಳೆದುಕೊಂಡಂತೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮಂಗಳೂರಿನ ರಸ್ತೆಯಲ್ಲಿ ನಮಾಜ್‌ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಮಂಗಳೂರಿನಲ್ಲಿ ಮಸೀದಿ ಖಾಲಿ ಹೊಡಿಯುತ್ತಿವೆ. ಅದಕ್ಕಾಗಿಯೇ ರಸ್ತೆಗೆ ಬಂದು ನಮಾಜ್‌ ಮಾಡಲಾಗುತ್ತಿದೆ. ಘಟನೆಗೆ ಸಂಬಂಧಿಸಿದಂತೆ ಯಾರ ಮೇಲೆ ಪ್ರಕರಣ ದಾಖಲಾಗಿದೆ. ಎಷ್ಟು ಜನರನ್ನು ಬಂಧಿಸಲಾಗಿದೆ ಎಂದು ಪ್ರಶ್ನಿಸಿದರು. ನಾಳೆ ರಸ್ತೆಯಲ್ಲಿ ಮಂಗಳಾರತಿ ಮಾಡಿದರೆ ಸರಿನಾ? 

ಇದಕ್ಕೇಲ್ಲಾ ಯಾರು ಪ್ರಚೋದನೆ ಕೊಡುತ್ತಿದ್ದಾರೆ. ಸರ್ಕಾರವೇ ಅವರ ಪರವಾಗಿ ಕೆಲಸ ಮಾಡುತ್ತಿದೆ ಎನ್ನುವುದಕ್ಕೆ ಈ ಘಟನೆ ಸಾಕ್ಷಿಯಾಗಿದೆ ಎಂದು ಆರೋಪಿಸಿದರು. ಚನ್ನಗಿರಿಯಲ್ಲಿ ಪೊಲೀಸ್‌ ಠಾಣೆ ಮೇಲೆ ದಾಳಿ ನಡೆಸಲಾಗಿದೆ. ಮುಸ್ಲಿಂ ಸಮಾಜದವರೇ ಯಾಕೆ ಸಾಮೂಹಿಕವಾಗಿ ಹಲ್ಲೆ ನಡೆಸುತ್ತಾರೆ. ಈ ಹಿಂದೆ ಡಿಜೆ ಹಾಗೂ ಕೆಜೆ ಹಳ್ಳಿ ಘಟನೆಗಳು ನಡೆದಿದ್ದವು. ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ನಡೆಯಿತು. ಇದೀಗ ಚನ್ನಗಿರಿಯಲ್ಲಿ ಘಟನೆ ಜರುಗಿದೆ. ಸಾಮೂಹಿಕವಾಗಿಯೇ ಯಾಕೆ ಅವರು ದಾಳಿ ನಡೆಸುತ್ತಾರೆ. 

ಸಚಿವ ಮಧು ಬಂಗಾರಪ್ಪ ಹೇರ್‌ ಕಟಿಂಗ್‌ ಖರ್ಚನ್ನ ಯುವ ಮೋರ್ಚಾದಿಂದ ಕೊಡಿಸುತ್ತೇವೆ: ವಿಜಯೇಂದ್ರ

ಅಂತವರ ವಿರುದ್ಧ ಕ್ರಮ ಕೈಗೊಳ್ಳುವುದಕ್ಕಿಂತ ಮುಂಚೆ ಪೊಲೀಸ್‌ ಸಿಬ್ಬಂದಿ ವಿರುದ್ಧ ಕ್ರಮ ಜರುಗಿಸಿರುವುದು ಎಷ್ಟು ಸರಿ? ಈ ವಿಚಾರವಾಗಿ ಮುಖ್ಯಮಂತ್ರಿಯಾಗಿ ಇನ್ನು ಎಫ್ಐಆರ್‌ ದಾಖಲಾಗಿಲ್ಲ ಎಂದು ಹೇಳುತ್ತಾರೆ ಎಂದು ಟೀಕಿಸಿದರು. ಶಿವಮೊಗ್ಗ ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣ ವಿಚಾರವಾಗಿ ರಾಜ್ಯ ಸರ್ಕಾರದ ಆರಂಭಿಕ ನಡೆ ಅನುಮಾನ ಮೂಡಿಸುತ್ತಿದೆ ಎಂದು ತಿಳಿಸಿದರು. ಈ ವೇಳೆ ಸ್ಥಳೀಯ ಶಾಸಕ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಶಿವರಾಜ ಪಾಟೀಲ್, ಮುಖಂಡ ಕೆ.ಎಂ.ಪಾಟೀಲ್‌ ಸೇರಿ ಅನೇಕರಿದ್ದರು.

PREV
Read more Articles on
click me!

Recommended Stories

ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ
Bengaluru Weather: ರಾಜ್ಯಕ್ಕೆ ಈಶಾನ್ಯ ಮಾರುತ- ದಶಕದ ದಾಖಲೆಯ ಚಳಿಗೆ ಸಿದ್ಧರಾಗಿ; ಬೆಂಗಳೂರು ಸ್ಥಿತಿ ಏನು ನೋಡಿ!