Life Threat: ಮುಖಂಡನ ವಿರುದ್ದ ಪ್ರಮೋದ್ ಮುತಾಲಿಕ್ ದೂರು

Kannadaprabha News   | Asianet News
Published : Nov 20, 2021, 11:49 AM ISTUpdated : Nov 20, 2021, 12:00 PM IST
Life Threat: ಮುಖಂಡನ ವಿರುದ್ದ ಪ್ರಮೋದ್ ಮುತಾಲಿಕ್ ದೂರು

ಸಾರಾಂಶ

ಶ್ರೀರಾಮ ಸೇನೆ ಸಂಸ್ಥಾಪಕ, ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್‌ ಮುತಾಲಿಕ್‌ಗೆ ಕೊಲೆ ಬೆದರಿಕೆ   ಎಸ್‌ಡಿಪಿಐ ಕಾರ್ಯದರ್ಶಿ ಸೈಯದ್‌ ಅಷ್ಫಕ್‌ ವಿರುದ್ಧ ಇಲ್ಲಿನ ಆರ್‌ಎಂಸಿ ಯಾರ್ಡ್‌ ಪೊಲೀಸ್‌ ಠಾಣೆಯಲ್ಲಿ ದೂರು  ಮೋದ್‌ ಮುತಾಲಿಕ್‌ ಅವರ ಹೆಣವನ್ನು ಕೆಡವುತ್ತೇವೆ. ಯಾರಾದರೂ ಹಿಂದುಗಳು ಹೆಣವನ್ನು ತೆಗೆದುಕೊಂಡು ಹೋಗಲು ಬನ್ನಿ ಎಂದಿದ್ದ ಅಷ್ಪಕ್

ದಾವಣಗೆರೆ (ನ.20) : ಶ್ರೀರಾಮ ಸೇನೆ (Shrirama sena) ಸಂಸ್ಥಾಪಕ, ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್‌ ಮುತಾಲಿಕ್‌ಗೆ (Pramod Muthalik) ಕೊಲೆ ಬೆದರಿಕೆ (Murder Threat) ಹಾಕಿದ ಆರೋಪದ ಮೇಲೆ ಎಸ್‌ಡಿಪಿಐ (SDPI) ಕಾರ್ಯದರ್ಶಿ ಸೈಯದ್‌ ಅಷ್ಫಕ್‌ ವಿರುದ್ಧ ಇಲ್ಲಿನ ಆರ್‌ಎಂಸಿ ಯಾರ್ಡ್‌ ಪೊಲೀಸ್‌ ಠಾಣೆಯಲ್ಲಿ (Police station) ದೂರು ದಾಖಲಾಗಿದೆ. ನಗರದಲ್ಲಿ ನ.12ರಂದು ನಡೆದ ನಡೆದ ಪ್ರತಿಭಟನೆ ವೇಳೆ ಎಸ್‌ಡಿಪಿಐ ಜಂಟಿ ಕಾರ್ಯದರ್ಶಿ ಎಸ್‌.ಎಂ.ಆರ್‌.ಸೈಯದ್‌ ಅಷ್ಫಕ್‌, ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯ ಕ್ಷ ಪ್ರಮೋದ್‌ ಮುತಾಲಿಕ್‌ ಅವರ ಹೆಣವನ್ನು ಕೆಡವುತ್ತೇವೆ. ಯಾರಾದರೂ ಹಿಂದುಗಳು ಹೆಣವನ್ನು ತೆಗೆದುಕೊಂಡು ಹೋಗಲು ಬನ್ನಿ. ತಯಾರಿದ್ದರೆ ಬನ್ನಿ ಎಂದು ಮಾಧ್ಯಮಗಳ ಮುಖಾಂತರ ಹಿಂದುಗಳ ಭಾವನೆ ಕೆರಳಿಸುವಂತಹ ಹೇಳಿಕೆ ನೀಡಿದ್ದ ಬಗ್ಗೆ ದೂರಿನಲ್ಲಿ ಆರೋಪಿಸಲಾಗಿದೆ.

ಎಸ್‌ಡಿಪಿಐನ (SDPI) ಜಂಟಿ ಕಾರ್ಯದರ್ಶಿ ಸೈಯದ್‌ ಅಷ್ಫಕ್‌ ಹೇಳಿಕೆಗಳಿಂದ ಹಿಂದುಗಳ (Hindu) ಮನಸ್ಸಿಗೆ ಘಾಸಿ ಉಂಟಾಗಿದೆ. ತಕ್ಷಣವೇ ಆ ವ್ಯಕ್ತಿ ಬಂಧಿಸಿ, ಸೂಕ್ತ ಕಾನೂನು ಕ್ರಮ ಜರು ಗಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಬೇಕಾದೀತು ಎಂದು ಎಚ್ಚರಿಕೆ ನೀಡಲಾಗಿದೆ.

 ಪ್ರಮೋದ್‌ ಮುತಾಲಿಕ್‌ಗೆ ಪ್ರಾಣ ಬೆದರಿಕೆ ಹಾಕಿರುವ ಹಾಗೂ ಹಿಂದುಗಳ ಭಾವನೆ ಕೆರಳಿಸುವಂತಹ ಹೇಳಿಕೆ ನೀಡಿದ ವ್ಯಕ್ತಿ ವಿರುದ್ಧ ಕ್ರಮ ಕೈಗೊಂಡು, ನ್ಯಾಯ ಕೊಡಿಸುವಂತೆ ಹಿಂದು ಮಹಾಸಭಾ ಸಮಿತಿಯ ಉಮೇಶ ಕತ್ತಿ ದಾವಣಗೆರೆ (Davanagere) ಆರ್‌ಎಂಸಿ ಯಾರ್ಡ್‌ ಪೊಲೀಸ್‌ ಠಾಣೆಗೆ ನೀಡಿದ ದೂರಿನಲ್ಲಿ ಮನವಿ ಮಾಡಿದ್ದಾರೆ.

ಬಿಜೆಪಿ ಕಲಬೆರಕೆ ಆಗಿದೆ : ಮುತಾಲಿಕ್ ಕಿಡಿ :  ಬಿಜೆಪಿ (BJP) ಈಗ ಕಲಬೆರಕೆ ಪಕ್ಷವಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​​ಗೆ DK Shivakumar) ಡಿಎನ್​ಎ ಪರೀಕ್ಷೆ (DNA Test) ಮಾಡಿಬೇಕು ಎಂದು ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ (Pramod Muthalik) ವಾಗ್ದಾಳಿ ನಡೆಸಿದರು.

 ಬಿಜೆಪಿಗೆ 60-70 ಪ್ರತಿಶತ ಕಾಂಗ್ರೆಸ್, ಜೆಡಿಎಸ್ ಪಕ್ಷದಿಂದ ಬಂದಿದ್ದಾರೆ‌, ಕಮ್ಯುನಿಸ್ಟರು ಬಂದಿದ್ದಾರೆ. 30-40 % ಮಾತ್ರ ಬಿಜೆಪಿಯವರು ಇದ್ದಾರೆ‌. ಕಾಂಗ್ರೆಸ್ ನವರಿಗೆ ಹಿಂದುತ್ವ ಇಲ್ಲ, ಅವರಿಗೆ ಬರೀ ಲೂಟಿ ಮಾಡಬೇಕು ಅನ್ನೋದಿದೆ. ಇಲ್ಲಿವರೆಗೆ ಕಾಂಗ್ರೆಸ್ ನವರು ಟೆರರಿಸ್ಟ್ ಗಳನ್ನೇ ಬೆಳೆಸಿದ್ದಾರೆ‌. ಅಂತವರು ಇಂದು ಬಿಜೆಪಿಯಲ್ಲಿದ್ದಾರೆ‌ ಎಂದು ಕಿಡಿಕಾರಿದರು. 

'ರಾಜ್ಯ ಬಿಜೆಪಿ SC ಮೋರ್ಚಾ ಅಧ್ಯಕ್ಷರೇ ಕುಟಂಬ ಸಮೇತ ಹಿಂದೂ ಧರ್ಮದಿಂದ ಮತಾಂತರ'

ಅವರಿಗೆ ಹಿಂದುತ್ವ ಧರ್ಮ ದೇಶ,ಸಂಸ್ಕೃತಿ, ಮಾನ ಮರ್ಯಾದೆ ಏನು ಇಲ್ಲ. ಬಿಜೆಪಿ ಇಂದು ಓರಿಜಿನಲ್ ಬಿಜೆಪಿ ಆಗಿ ಉಳಿದಿಲ್ಲ ಎಂದ ಮುತಾಲಿಕ್​​ ಅಸಮಾಧಾನ ವ್ಯಕ್ತಪಡಿಸಿದರು.

ಪುನೀತ್ ರಾಜ್​ಕುಮಾರ್​ಗೆ ಪದ್ಮಶ್ರೀ
ನಟ ಪುನೀತ್ ರಾಜ್‌ಕುಮಾರ್‌ಗೆ ಪದ್ಮಶ್ರೀ ನೀಡಬೇಕು. ಪುನೀತ್ (Puneeth) ಸಿನಿಮಾಗಳಲ್ಲಿ ಸಮಾಜಕ್ಕೆ ಮೆಸೇಜ್ ನೀಡ್ತಿದ್ರು. ಹೀಗಾಗಿ ನಟ ಪುನೀತ್‌ಗೆ ಪದ್ಮಶ್ರೀ ನೀಡಬೇಕು ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಗ್ರಹಿಸಿದರು.

ಮತಾಂತರದ ಬಗ್ಗೆ ಮುತಾಲಿಕೆ ಕಿಡಿ
ಮತಾಂತರದ ವಿಚಾರವಾಗಿ ಮಾತನಾಡಿದ ಅವರು, ಹೊಸದುರ್ಗದ ಎಂಎಲ್‌ಎ ಗೂಳಿಹಟ್ಟಿ ಶೇಖರ್ ವಿಧಾನಸಭೆಯಲ್ಲಿ ಮತಾಂತರ ವಿಚಾರವನ್ನು ಚರ್ಚೆಗೆ ತಂದರು. ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಅವರ ತಾಯಿಯೇ ಮತಾಂತರ ಆಗಿದ್ದರ ಬಗ್ಗೆ ಅವರು ವಿವರಿಸಿದರು. ನಮ್ಮ ದೇಶದ 99% ಕ್ರಿಶ್ಚಿಯನ್ನರು ಮತಾಂತರ ಆದವರು. ಒತ್ತಾಯ, ಆಸೆ-ಆಮಿಷಗಳಿಂದ ಮತಾಂತರ ಆಗಿದ್ದಾರೆ ಎಂದರು. 

ಮತಾಂತರದ ಹಾವಳಿ ವಿಪರೀತ ಆಗಿದೆ. ಲಂಬಾಣಿ ತಾಂಡಾಗಳಿಗೆ ಪಾದ್ರಿಗಳು ನುಗ್ಗುತ್ತಿದ್ದಾರೆ. ಅವರನ್ನು ಗೋವಾಕ್ಕೆ ಕರೆದುಕೊಂಡು ಹೋಗ್ತಾರೆ, ಅಲ್ಲಿ ಮತಾಂತರ ಮಾಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

ನವೆಂಬರ್​ 12ರಂದು ಸಿಎಂ ಬಳಿ ಹೋಗುತ್ತೇವೆ. ಮತಾಂತರ ನಿಷೇಧ ಕಾಯ್ದೆ ಜಾರಿ ಮಾಡಬೇಕೆಂದು ಒತ್ತಾಯ ಮಾಡುತ್ತೇವೆ. ನೂರಕ್ಕೂ ಹೆಚ್ಚು ಪೂಜ್ಯರಿಂದ ಮನವಿ ಸಲ್ಲಿಸುತ್ತೇವೆ. ನಿಮ್ಮ(ಕ್ರಿಶ್ಚಿಯನ್ ಮಿಷನರಿಗಳು) ಶಾಲೆ ಸಂಘ ಸಂಸ್ಥೆ ಕೊನೆಗೆ ಮತಾಂತರದಲ್ಲೇ ಮುಕ್ತಾಯವಾಗುತ್ತವೆ. ಶಿಕ್ಷಣ ನೀಡೋದು, ಆರೋಗ್ಯ ಸೇವೆ ಎಲ್ಲವೂ ಬೂಟಾಟಿಕೆ ಎಂದು ಪ್ರಮೋದ ಮುತಾಲಿಕ್ ಕಿಡಿಕಾರಿದರು.

ರಾಜ್ಯ ಸರ್ಕಾರದ ವಿರುದ್ಧ ಕೆಂಡಾಮಂಡಲ
ರಾಜ್ಯದಲ್ಲಿ ದೇವಸ್ಥಾನ (Temple) ಒಡೆದ ವಿಚಾರ‌ವಾಗಿ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. ಹಿಂದುತ್ವದ ಹೆಸರಲ್ಲಿ ಅಧಿಕಾರಕ್ಕೆ ಬಂದ ಪಕ್ಷದಿಂದಲೇ ದೇವಸ್ಥಾನ ಒಡೆಯಲಾಗುತ್ತಿದೆ. ಇದಕ್ಕಾಗಿ ಸಿಟ್ಟಿದೆ, ಬೇಸರವಿದೆ. ನಾವು ಈ ಬಗ್ಗೆ ಕೈ ಕಟ್ಟಿ ಕೂತಿಲ್ಲ, ಆಂದೋಲನ ಮಾಡುತ್ತೇವೆ. ಸುಪ್ರೀಂ ಕೋರ್ಟ್ ಆದೇಶ ಅಂತ ಇವರು ಹಿಂದೂ ದೇವಸ್ಥಾನ ಒಡೆದರು. ಮಸೀದಿಯಲ್ಲಿನ ಮೈಕ್ ತೆರವುಗೊಳಿಸಬೇಕೆಂದು ಕೂಡ ಸುಪ್ರೀಂ ಕೋರ್ಟ್ ಆದೇಶವಿದೆ. ರಾಜ್ಯ ಸರಕಾರ ಯಾಕೆ ತೆಗೆಯೋದಿಲ್ಲ. ನಾವು ಈಗ ಮಸೀದಿ ಮೈಕ್ ತೆರವುಗೊಳಿಸುವಂತೆ ಹೋರಾಟ ಮಾಡುತ್ತಿದ್ದೇವೆ‌. ಮುಂದೆ ದೊಡ್ಡ ಪ್ರಮಾಣದಲ್ಲಿ ಧರಣಿ ಮಾಡುವವರಿದ್ದೇವೆ. ನೀವು ತೆಗೆಯುತ್ತೀರೋ ಇಲ್ಲ ನಾವು ತೆಗೆಯೋಣವೆ ಎಂದು ಹೋರಾಟ ಮಾಡುತ್ತೇವೆ ಎಂದರು.

ಡಿಕೆಶಿಯ ಡಿಎನ್‌ಎ ಟೆಸ್ಟ್ ಮಾಡಿಸಬೇಕು 
ಡಿಕೆಶಿ ತಮ್ಮ ಕ್ಷೇತ್ರದಲ್ಲಿ 52 ಅಡಿ ಏಸು ಕ್ರಿಸ್ತನ ಪುತ್ಥಳಿ ಕೂರಿಸೋದಕ್ಕೆ ಹೊರಟ, ಆಮೂಲಕ ಸೋನಿಯಾ ಗಾಂಧಿ (Sonia Gandhi) ಮೆಚ್ಚಿಸಲು ಯತ್ನಿಸಿದರು. ಡಿಜೆ ಹಳ್ಳಿ ಕೆಜೆ ಹಳ್ಳಿ ಗಲಾಟೆಯಾದಾಗ ಇದೇ ಡಿಕೆಶಿ ನಾವೆಲ್ಲ ಬರ್ದರ್ಸ್ ಆಯಂಡ್ ಸಿಸ್ಟರ್ಸ್ ಅಂದ್ರು. ಡಿಕೆಶಿಯ ಡಿಎನ್‌ಎ ಟೆಸ್ಟ್ ಮಾಡಿಸಬೇಕು. ಎಲ್ಲೋ ಅದು ಮಿಕ್ಸ್ ಆದಂಗೆ ಕಾಣಿಸ್ತಿದೆ ಎಂದು ವ್ಯಂಗ್ಯವಾಡಿದರು. ಡಿಕೆಶಿಯವರೇ ದೇಶ ನೋಡಿ ಮೊದಲು, ದೇಶ ಉಳಿದರೆ ನೀವು ಕೆಪಿಸಿಸಿ ಅಧ್ಯಕ್ಷರಾಗಿರುತ್ತೀರಿ. ಇಲ್ಲದೆ ಹೋದರೆ ನೀವು ಇಟಲಿಗೆ ಹೋಗಬೇಕಾಗುತ್ತದೆ ಎಂದು ವ್ಯಂಗ್ಯವಾಡಿದರು.

PREV
click me!

Recommended Stories

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
'ಕುಡುಕರ ಲಿವರ್‌ಗೆ ಸರ್ಕಾರದ ಗ್ಯಾರಂಟಿ ಕೊಡಿ..' ಅಬಕಾರಿ ಆದಾಯ ಹೆಚ್ಚಿಸಲು ಖತರ್ನಾಕ್‌ ಐಡಿಯಾ ಕೊಟ್ಟ ಬಿಜೆಪಿ MLC