ಬಳ್ಳಾರಿ: ದನದ ಕೊಟ್ಟಿಗೆಗೆ ಬೆಂಕಿ, ಮೂರು ಹಸುಗಳು ಸಜೀವ ದಹನ

Suvarna News   | Asianet News
Published : Oct 04, 2020, 02:30 PM IST
ಬಳ್ಳಾರಿ: ದನದ ಕೊಟ್ಟಿಗೆಗೆ ಬೆಂಕಿ, ಮೂರು ಹಸುಗಳು ಸಜೀವ ದಹನ

ಸಾರಾಂಶ

ದನದ ಕೊಟ್ಟಿಗೆಗೆ ಬೆಂಕಿ| ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಹುರುಳಿಹಾಳು ಗ್ರಾಮದಲ್ಲಿ ನಡೆದ ಘಟನೆ| 7 ಹಸುಗಳು ಪೈಕಿ ಮೂರು ಹಸುಗಳ ಸಾವು| ಬೆಂಕಿ ನಂದಿಸಿ ಇನ್ನುಳಿದ ಹಸುಗಳನ್ನು ಕಾಪಾಡಿದ ಗ್ರಾಮಸ್ಥರು| 

ಬಳ್ಳಾರಿ(ಅ.04): ದನದ ಕೊಟ್ಟಿಗೆಗೆ ಬೆಂಕಿ ಬಿದ್ದ ಪರಿಣಾಮ ಮೂರು ಹಸುಗಳು ಸಜೀವವಾಗಿ ದಹನವಾದ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಹುರುಳಿಹಾಳು ಗ್ರಾಮದಲ್ಲಿ ನಿನ್ನೆ(ಭಾನುವಾರ) ಮಧ್ಯರಾತ್ರಿ ನಡೆದಿದೆ.

ಸೊಳ್ಳೆ ಕಾಟದಿಂದ ದನಗಳನ್ನ ರಕ್ಷಿಸಲು ಕೊಟ್ಟಿಗೆಯ ಮೂಲೆಯಲ್ಲಿ ಚಿಕ್ಕದಾಗಿ ಬೆಂಕಿ ಹಾಕಲಾಗಿತ್ತು. ಆದರೆ ಮಧ್ಯ ರಾತ್ರಿ ಬೆಂಕಿ ಹೆಚ್ಚಾಗಿ ದನದ ಕೊಟ್ಟಿಗೆಗೆ ಬಿದ್ದು ಈ ಅವಘಡ ಸಂಭವಿದೆ ಎಂದು ತಿಳಿದು ಬಂದಿದೆ.

ಬಳ್ಳಾರಿ: ಪ್ರವಾಹಕ್ಕೆ ಕಿತ್ತು ಹೋದ ಸೇತುವೆ, ಜೆಸಿಬಿ ಮೂಲಕ ಹಳ್ಳ ದಾಟಿದ ಕೂಲಿ ಕಾರ್ಮಿಕರು

ಬೆಂಕಿ ಬಿದ್ದ ದನದ ಕೊಟ್ಟಿಗೆ ರೇವಣ್ಣ ಎಂಬುವರಿಗೆ ಸೇರಿದ್ದು ಎಂದು ತಿಳಿದು ಬಂದಿದೆ. ಬೆಂಕಿ ಬಿದ್ದಾಗ ದನದ ಕೊಟ್ಟಿಗೆಯಲ್ಲಿ 7 ಹಸುಗಳು‌ ಇದ್ದವು ಆ ಪೈಕಿ ಮೂರು ಹಸುಗಳು ಸಜೀವವಾಗಿ ಸುಟ್ಟು ಕರಕಲಾಗಿವೆ. ಗ್ರಾಮಸ್ಥರ ಸಮಯ ಪ್ರಜ್ಞೆಯಿಂದ ಬೆಂಕಿ ನಂದಿಸಿ ಇನ್ನುಳಿದ ಹಸುಗಳನ್ನು ಕಾಪಾಡಿದ್ದಾರೆ. 
 

PREV
click me!

Recommended Stories

'ಕುಡುಕರ ಲಿವರ್‌ಗೆ ಸರ್ಕಾರದ ಗ್ಯಾರಂಟಿ ಕೊಡಿ..' ಅಬಕಾರಿ ಆದಾಯ ಹೆಚ್ಚಿಸಲು ಖತರ್ನಾಕ್‌ ಐಡಿಯಾ ಕೊಟ್ಟ ಬಿಜೆಪಿ MLC
ನೆಲಮಂಗಲದಲ್ಲಿ ಹಸುವಿನ ಕತ್ತು ಕೊಯ್ದು ವಿಕೃತಿ ಮೆರೆದ ಕಳ್ಳರು; ಬೆಚ್ಚಿಬಿದ್ದ ಗ್ರಾಮಸ್ಥರು