ಖಾಸಗಿ-ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಮೂರು ಸಾವು

Published : Aug 16, 2019, 04:36 PM IST
ಖಾಸಗಿ-ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಮೂರು ಸಾವು

ಸಾರಾಂಶ

ತುಮಕೂರು ಬಳಿ ಶಿರಾದಲ್ಲಿ ನಡೆದ ಅಪಘಾತದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗೆ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಈ ಅವಘಡದಲ್ಲಿ ಮೂವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.

ತುಮಕೂರು: ಹಿಂಬದಿಯಿಂದ ಕೆಎಸ್ಆರ್‌ಟಿಸಿ ಬಸ್‌ಗೆ ಖಾಸಗಿ ಬಸ್ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲಿಯೇ ಮೂವರು ಮೃತಪಟ್ಟಿದ್ದು, ಆರು ಮಂದಿಗೆ ಗಾಯಗಳಾಗಿವೆ. ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಬಳಿ ಈ ಘಟನೆ ನಡೆದಿದೆ.ಗಾಯಗೊಂಡವರನ್ನು ಶಿರಾ ಆಸ್ಪತ್ರೆಗೆ ರವಾನಿಸಲಾಗಿದೆ. 

ಚಿತ್ರದುರ್ಗದಿಂದ ಬೆಂಗಳೂರಿನತ್ತ ಬರುತ್ತಿದ್ದಾಗ ಈ ಅವಘಡ ಮುಂಜಾನೆ ಸಂಭವಿಸಿದೆ. ಖಾಸಗಿ ಬಸ್‌ನಲ್ಲಿದ್ದ ಇಬ್ಬರು ಹಾಗೂ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿದ್ದ ಒಬ್ಬರು ಮೃತಪಟ್ಟಿದ್ದಾರೆ. ಕಳ್ಳಂಬೆಳ್ಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಉತ್ತರ ಕನ್ನಡ ಜಿಲ್ಲೆಯ  ಎಸ್ಪಿ ಅವರು ಚಾಲಕರಾದ ರಮೇಶ್ ಅವರು ಜಿಲ್ಲೆಗೆ ಹಂಚಿಕೆಯಾದ ಹೊಸ ಜೀಪ್ ತರಲು ಬೆಂಗಳೂರಿಗೆ ಬಸ್‌ನಲ್ಲಿ ತೆರಳಿದ್ದರು. 

PREV
click me!

Recommended Stories

ತುಮಕೂರಿನಲ್ಲಿ ಹೃದಯವಿದ್ರಾವಕ ಘಟನೆ, ಕೋತಿ ಉಳಿಸಲು ಹೋಗಿ ಪ್ರಾಣ ಬಿಟ್ಟ ಆಟೋ ಚಾಲಕ!
Kunigal hotel fire: ಹೆದ್ದಾರಿ ಬದಿಯ ಹೋಟೆಲ್‌ಗೆ ಬೆಂಕಿ, ನೋಡನೋಡುತ್ತಿದ್ದಂತೆ ಇಡೀ ಕಟ್ಟಡವೇ ಸುಟ್ಟು ಕರಕಲು!