ಖಾಸಗಿ-ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಮೂರು ಸಾವು

Published : Aug 16, 2019, 04:36 PM IST
ಖಾಸಗಿ-ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಮೂರು ಸಾವು

ಸಾರಾಂಶ

ತುಮಕೂರು ಬಳಿ ಶಿರಾದಲ್ಲಿ ನಡೆದ ಅಪಘಾತದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗೆ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಈ ಅವಘಡದಲ್ಲಿ ಮೂವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.

ತುಮಕೂರು: ಹಿಂಬದಿಯಿಂದ ಕೆಎಸ್ಆರ್‌ಟಿಸಿ ಬಸ್‌ಗೆ ಖಾಸಗಿ ಬಸ್ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲಿಯೇ ಮೂವರು ಮೃತಪಟ್ಟಿದ್ದು, ಆರು ಮಂದಿಗೆ ಗಾಯಗಳಾಗಿವೆ. ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಬಳಿ ಈ ಘಟನೆ ನಡೆದಿದೆ.ಗಾಯಗೊಂಡವರನ್ನು ಶಿರಾ ಆಸ್ಪತ್ರೆಗೆ ರವಾನಿಸಲಾಗಿದೆ. 

ಚಿತ್ರದುರ್ಗದಿಂದ ಬೆಂಗಳೂರಿನತ್ತ ಬರುತ್ತಿದ್ದಾಗ ಈ ಅವಘಡ ಮುಂಜಾನೆ ಸಂಭವಿಸಿದೆ. ಖಾಸಗಿ ಬಸ್‌ನಲ್ಲಿದ್ದ ಇಬ್ಬರು ಹಾಗೂ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿದ್ದ ಒಬ್ಬರು ಮೃತಪಟ್ಟಿದ್ದಾರೆ. ಕಳ್ಳಂಬೆಳ್ಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಉತ್ತರ ಕನ್ನಡ ಜಿಲ್ಲೆಯ  ಎಸ್ಪಿ ಅವರು ಚಾಲಕರಾದ ರಮೇಶ್ ಅವರು ಜಿಲ್ಲೆಗೆ ಹಂಚಿಕೆಯಾದ ಹೊಸ ಜೀಪ್ ತರಲು ಬೆಂಗಳೂರಿಗೆ ಬಸ್‌ನಲ್ಲಿ ತೆರಳಿದ್ದರು. 

PREV
click me!

Recommended Stories

ಮಧುಗಿರಿ: ಕದ್ದ ಎಟಿಎಂ ಭಾರ ಇದೆ ಎಂದು ರಸ್ತೆಯಲ್ಲೇ ಬಿಟ್ಟು ಹೋದರು
ಡೆಡ್ಲಿ ರಾಟ್‌ವೀಲರ್ ನಾಯಿಗಳ ದಾಳಿಗೆ ಮಹಿಳೆ ದುರ್ಮರಣ; ಮೂವರು ಮಕ್ಕಳು ಅನಾಥ