ಗುಡ್ಡಕ್ಕೆ‌ ಗುದ್ದಿದ ಕಾರು: ಮೂರು ಸಾವು, ಏಳು ಮಂದಿ ಗಂಭೀರ

Published : Nov 13, 2018, 11:47 AM IST
ಗುಡ್ಡಕ್ಕೆ‌ ಗುದ್ದಿದ ಕಾರು: ಮೂರು ಸಾವು, ಏಳು ಮಂದಿ ಗಂಭೀರ

ಸಾರಾಂಶ

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಆರೋಲ್ಲಿ ಕ್ರಾಸ್ ಬಳಿ ಈ ದುರ್ಘಟನೆ ನಡೆದಿದೆ. ಫಾತೀಮಾ(65), ರುಬಿಯಾ(45) ಹಾಗೂ ಚಾಬು ಸಾಬ್ ಮೃತರೆಂದು ಗುರುತಿಸಲಾಗಿದೆ. ಇವರೆಲ್ಲರೂ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಗ್ರಾಮದವರಾಗಿದ್ದು, ಗೋವಾಕ್ಕೆ ಮದುವೆಗೆಂದು ತೆರಳಿ ವಾಪಾಸ್ ಊರಿಗೆ ಹೋಗುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

ಹೊನ್ನಾವರ[ನ.13]: ಕಾರೊಂದು ಗುಡ್ಡಕ್ಕೆ ಗುದ್ದಿದ ಪರಿಣಾಮವಾಗಿ ಮೂವರು ಸ್ಥಳದಲ್ಲೇ ಸಾವನಪ್ಪಿದ್ದು, ಏಳು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಹೊನ್ನಾವರದಲ್ಲಿ ನಡೆದಿದೆ.

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಆರೋಲ್ಲಿ ಕ್ರಾಸ್ ಬಳಿ ಈ ದುರ್ಘಟನೆ ನಡೆದಿದೆ. ಫಾತೀಮಾ(65), ರುಬಿಯಾ(45) ಹಾಗೂ ಚಾಬು ಸಾಬ್ ಮೃತರೆಂದು ಗುರುತಿಸಲಾಗಿದೆ. ಇವರೆಲ್ಲರೂ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಗ್ರಾಮದವರಾಗಿದ್ದು, ಗೋವಾಕ್ಕೆ ಮದುವೆಗೆಂದು ತೆರಳಿ ವಾಪಾಸ್ ಊರಿಗೆ ಹೋಗುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

ಅಪಘಾತದಲ್ಲಿ ಏಳು ಮಂದಿಗೆ ಗಂಭೀರ ಗಾಯಗಳಾಗಿದ್ದು, ಇವರೆಲ್ಲರನ್ನೂ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

PREV
click me!

Recommended Stories

ಗಲ್ಫ್ ರಾಷ್ಟ್ರಗಳಲ್ಲಿ ಯುದ್ಧ: ಭಟ್ಕಳದಲ್ಲಿ ಮಧ್ಯರಾತ್ರಿಯಿಂದಲೇ ಪೆಟ್ರೋಲ್‌ ಬಂಕ್‌ನಲ್ಲಿ ಕ್ಯೂ ನಿಂತ ವಾಹನ ಸವಾರರು!
ಮದ್ಯದ ಮತ್ತಿನಲ್ಲಿ ನಾಡ ಬಂದೂಕಿನಿಂದ ಗುಂಡು ಹೊಡೆದುಕೊಂಡು ಶಿರಸಿ ಯುವಕ ಸಾವು