ಶಿವಮೊಗ್ಗ: ತೊಟ್ಟಿಗೆ ಬಿದ್ದು ಮೂರು ವರ್ಷದ ಮಗು ಸಾವು

Published : Nov 17, 2024, 05:03 AM IST
ಶಿವಮೊಗ್ಗ: ತೊಟ್ಟಿಗೆ ಬಿದ್ದು ಮೂರು ವರ್ಷದ ಮಗು ಸಾವು

ಸಾರಾಂಶ

ಕುಟುಂಬಸ್ಥರು ಆಸ್ಪತ್ರೆ ಸಿಬ್ಬಂದಿ ಅವರ ನಿರ್ಲಕ್ಷ್ಯದಿಂದ ಮಗು ಸಾವು ಎಂದು ಆರೋಪಿಸಿದ್ದಾರೆ. ಸ್ಥಳಕ್ಕೆ ಶಿಕಾರಿಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಶಿವಮೊಗ್ಗ(ನ.17):   ಶಿಕಾರಿಪುರ ತಾಲೂಕಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಆಸ್ಪತ್ರೆಯಲ್ಲಿ ಮೂರು ವರ್ಷದ ಮಗು ತೊಟ್ಟಿಗೆ ಬಿದ್ದು ಸಾವನಪ್ಪಿದ ಘಟನೆ ಶುಕ್ರವಾರ ಸಂಜೆ ನಡೆದಿದೆ. ಮತ್ತಿಕೋಟೆಯ ನಿವಾಸಿ ಇಮ್ರಾನ್ ಎಂಬುವರಿಗೆ ಸೇರಿದ ಅಯಾನ್ ಎಂಬ ಮೂರು ವರ್ಷದ ಮಗು ಆಸ್ಪತ್ರೆಯ ತೊಟ್ಟಿಯಲ್ಲಿ ಶವವಾಗಿ ಪತ್ತೆಯಾಗಿದೆ. ತೆರೆದ ನೆಲದ ತೊಟ್ಟಿಯಲ್ಲಿ ಮಗು ಬಿದ್ದು ಸಾವನ್ನಪ್ಪಿದ್ದು, ಈ ಬಗ್ಗೆ ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. 

ಶಿಕಾರಿಪುರ ತಾಲೂಕಿನ ಮತ್ತಿಕೋಟೆ ಗ್ರಾಮದ ನಿವಾಸಿ ಇಮ್ರಾನ್ ಎಂಬುವರ ಪುತ್ರ ಮಹಮ್ಮದ್ ಐಯಾನ್ ತಂದೆಯ ಸಂಬಂಧಿಕರು ಆಸ್ಪತ್ರೆಗೆ ದಾಖಲಾಗಿದ್ದರು. ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಮ್ರಾನ್ ಸಂಬಂಧಿಯನ್ನ ವಿಚಾರಿಸಲು ಕುಟುಂಬದವರ ಜೊತೆ ಆಸ್ಪತ್ರೆಗೆ ಆಗಮಿಸಿದ್ದ ಅಯಾನ್ ಆಸ್ಪತ್ರೆ ಒಳಗಡೆಯಿಂದ ಆಟವಾಡುತ್ತಾ ಹೊರಗೆ ಬಂದ ತೊಟ್ಟಿಗೆ ಬಿದ್ದಿರಬಹುದು ಎಂದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. 

ಬುಡಕಟ್ಟು ಜನರೇ ಸಾಮಾಜಿಕವಾಗಿ ಸಬಲರಾಗಿ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಕುಟುಂಬಸ್ಥರು ಆಸ್ಪತ್ರೆ ಸಿಬ್ಬಂದಿ ಅವರ ನಿರ್ಲಕ್ಷ್ಯದಿಂದ ಮಗು ಸಾವು ಎಂದು ಆರೋಪಿಸಿದ್ದಾರೆ. ಸ್ಥಳಕ್ಕೆ ಶಿಕಾರಿಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

PREV
Read more Articles on
click me!

Recommended Stories

ಸಂಕ್ರಾಂತಿ ದಿನ ನಮ್ಮ ಮೆಟ್ರೋಗೆ ಮತ್ತೊಂದು ರೈಲು ಸೇರ್ಪಡೆ, ಪ್ರಯಾಣಿಕರಿಗೆ ಗುಡ್ ನ್ಯೂಸ್
ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಂಪರ್ ಆಫರ್: ಜ. 15 ರಿಂದ ಜಾರಿಗೆ ಬರಲಿದೆ 'QR Code' ಆಧಾರಿತ ಅನ್ಲಿಮಿಟೆಡ್ ಪಾಸ್!