ಗಬ್ಬದ ಹಸು ಕಾಲು ಕಡಿದು ಕಸಾಯಿಖಾನೆಗೆ ಸಾಗಿಸಲು ಯತ್ನಿಸಿದ ಪಾಪಿ

Kannadaprabha News   | Asianet News
Published : Apr 20, 2020, 11:53 AM IST
ಗಬ್ಬದ ಹಸು ಕಾಲು ಕಡಿದು ಕಸಾಯಿಖಾನೆಗೆ ಸಾಗಿಸಲು ಯತ್ನಿಸಿದ ಪಾಪಿ

ಸಾರಾಂಶ

ಗಬ್ಬದ ಹಸು ಕಾಲು ಕಡಿದು ಕಾರಿನಲ್ಲಿ ಸಾಗಿಸಲು ಯತ್ನ| ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯಲ್ಲಿ ನಡೆದ ಘಟನೆ| ಹಸುವನ್ನ ಕಸಾಯಿಖಾನೆಗೆ ಸಾಗಿಸಲು ಯತ್ನಿಸಿ ಆರೋಪಿಯನ್ನ ಬಂಧಿಸಿದ ಪೊಲೀಸರು|

ತೀರ್ಥಹಳ್ಳಿ(ಏ.20): ಗಬ್ಬದ ಹಸು ಕಾಲು ಕಡಿದು ಕಾರಿನಲ್ಲಿ ಸಾಗಿಸಲು ಯತ್ನಿಸಿದ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. 

ಕಸಾಯಿಖಾನೆಗೆ ಸಾಗಿಸಲು ಶುಕ್ರವಾರ ರಾತ್ರಿ ಪಟ್ಟಣದ ಬಾಳೇಬೈಲು ಸರ್ಕಾರಿ ಶಾಲೆಯ ಹತ್ತಿರ ಹಸುವಿನ ಕಾಲು ಕಡಿದು ಮಾರುತಿ ರಿಟ್ಜ್‌ ಕಾರಿಗೆ ತುಂಬಿಸಲು ಯತ್ನಿಸಿದ್ದರು.

ಶಿವಮೊಗ್ಗದ ಮೆಗ್ಗಾನ್‌ನಲ್ಲಿ 50 ವೆಂಟಿಲೇಟರ್‌ ಸೌಲಭ್ಯ: ಸಂಸದ B Y ರಾಘವೇಂದ್ರ

ಸಾರ್ವಜನಿಕರು ಸ್ಥಳಕ್ಕೆ ತಕ್ಷಣವೇ ಧಾವಿಸಿದ್ದರಿಂದ ದನದ ಕಾಲು ಕಡಿದವರು ತಮ್ಮ ಕಾರನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದರು. ಸಿದ್ದೇಶ್ವರ ಬಡಾವಣೆಯ ಸಲೀಂ (36)ನನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
 

PREV
click me!

Recommended Stories

ವಿದ್ಯಾರ್ಥಿನಿಯರ ಮೈಮುಟ್ಟಿ ಅಸಭ್ಯ ವರ್ತನೆ; ಪ್ರೌಢಶಾಲೆಗೆ ನುಗ್ಗಿ ಪ್ರಾಂಶುಪಾಲನಿಗೆ ಧರ್ಮದೇಟು ಕೊಟ್ಟ ಗ್ರಾಮಸ್ಥರು!
ಮೈಸೂರು ಏಕತಾ ಮಹಲ್‌ ವಿವಾದ, ಕೋರ್ಟ್ ಮೆಟ್ಟಲೇರಿದ ರಾಜಮಾತೆ ಪ್ರಮೋದಾದೇವಿ!