ಎರಡೇ ತಾಸಲ್ಲಿ ಬೆಂಗಳೂರಿಂದ ಮೈಸೂರಿಗೆ ಹೋಗಿ..!

Published : Jan 26, 2023, 07:50 AM IST
ಎರಡೇ ತಾಸಲ್ಲಿ ಬೆಂಗಳೂರಿಂದ ಮೈಸೂರಿಗೆ ಹೋಗಿ..!

ಸಾರಾಂಶ

119 ಕಿ.ಮೀ. ಉದ್ದದ ಈ ಹೆದ್ದಾರಿಯಲ್ಲಿ ಈವರೆಗೆ ರಾಮನಗರ, ಚನ್ನಪಟ್ಟಣ, ಮದ್ದೂರು, ಶ್ರೀರಂಗಪಟ್ಟಣ ಬೈಪಾಸ್‌ ರಸ್ತೆ ಸಂಚಾರಕ್ಕೆ ಮುಕ್ತವಾಗಿತ್ತು. ಆದರೆ, ಮಂಡ್ಯ ಬೈಪಾಸ್‌ ರಸ್ತೆ ಕಾಮಗಾರಿ ಮಾತ್ರ ಬಾಕಿ ಉಳಿದಿತ್ತು. ಇದೀಗ ಈ ಬೈಪಾಸ್‌ ಕೂಡ ಸಂಚಾರಕ್ಕೆ ಮುಕ್ತವಾಗಿದ್ದರಿಂದ ಈ ಹೆದ್ದಾರಿಯಲ್ಲಿ ವಾಹನ ಸಂಚಾರ ಬಹುತೇಕ ಸಲೀಸಾದಂತಾಗಿದೆ.

ಮಂಡ್ಯ(ಜ.26): ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಇದೀಗ ಬಹುತೇಕ ಸಂಚಾರಕ್ಕೆ ಮುಕ್ತವಾದಂತಾಗಿದೆ. ಹಲವು ಸಮಯದಿಂದ ಬಾಕಿ ಉಳಿದಿದ್ದ ಮಂಡ್ಯ ಬೈಪಾಸ್‌ ರಸ್ತೆ ಕೂಡ ಬುಧವಾರ ಸಂಜೆಯಿಂದ ವಾಹನ ಸಂಚಾರಕ್ಕೆ ಮುಕ್ತವಾಗಿದ್ದು, ಕೇವಲ ಒಂದೂವರೆಯಿಂದ 2 ಗಂಟೆಯಲ್ಲಿ ಬೆಂಗಳೂರಿಂದ ಮೈಸೂರು ತಲುಪುವುದು ಸಾಧ್ಯವಾಗಲಿದೆ.

ಐದು ಬೈಪಾಸ್‌ ರಸ್ತೆಗಳು: 

119 ಕಿ.ಮೀ. ಉದ್ದದ ಈ ಹೆದ್ದಾರಿಯಲ್ಲಿ ಈವರೆಗೆ ರಾಮನಗರ, ಚನ್ನಪಟ್ಟಣ, ಮದ್ದೂರು, ಶ್ರೀರಂಗಪಟ್ಟಣ ಬೈಪಾಸ್‌ ರಸ್ತೆ ಸಂಚಾರಕ್ಕೆ ಮುಕ್ತವಾಗಿತ್ತು. ಆದರೆ, ಮಂಡ್ಯ ಬೈಪಾಸ್‌ ರಸ್ತೆ ಕಾಮಗಾರಿ ಮಾತ್ರ ಬಾಕಿ ಉಳಿದಿತ್ತು. ಇದೀಗ ಈ ಬೈಪಾಸ್‌ ಕೂಡ ಸಂಚಾರಕ್ಕೆ ಮುಕ್ತವಾಗಿದ್ದರಿಂದ ಈ ಹೆದ್ದಾರಿಯಲ್ಲಿ ವಾಹನ ಸಂಚಾರ ಬಹುತೇಕ ಸಲೀಸಾದಂತಾಗಿದೆ.

ಬೆಂಗಳೂರು-ಮೈಸೂರು ದಶಪಥ ರಸ್ತೆಗೆ ದೇವೇಗೌಡರ ಹೆಸರು: ಕೇಂದ್ರ ಸಚಿವ ಗಡ್ಕರಿ ಭೇಟಿಯಾಗಿ ಮನವಿ ಸಲ್ಲಿಸಿದ ಶರವಣ

ಫೆಬ್ರವರಿ ಅಂತ್ಯದಲ್ಲಿ ಉದ್ಘಾಟನೆ: ಫೆಬ್ರವರಿ ಅಂತ್ಯದಲ್ಲಿ ಈ ರಸ್ತೆಯನ್ನು ಪ್ರಧಾನಿ ಮೋದಿ ಅವರೇ ಉದ್ಘಾಟಿಸಲಿದ್ದು, ಈ ಹಿನ್ನೆಲೆಯಲ್ಲಿ ಈಗಾಗಲೇ ಬಾಕಿ ಉಳಿದಿರುವ ಕೆಲಸ-ಕಾರ್ಯಗಳು ಬಿರುಸಿನಿಂದ ಸಾಗಿವೆ. ಬೆಂಗಳೂರು-ಮೈಸೂರು ನಡುವೆ ಈ ಹಿಂದೆ ಮೂರು ತಾಸಿಗೂ ಹೆಚ್ಚು ಸಮಯ ಬೇಕಿತ್ತು. ಆದರೆ, ಇದೀಗ ನಿರ್ಮಿಸಲಾಗಿರುವ ದಶಪಥ ಹೆದ್ದಾರಿಯಿಂದಾಗಿ ವಾಹನ ಸವಾರರಿಗೆ ಸುಮಾರು ಒಂದರಿಂದ ಒಂದೂವರೆ ಗಂಟೆಗಳಷ್ಟುಸಮಯ ಉಳಿತಾಯವಾಗಲಿದೆ.

ಸಣ್ಣ ಪುಟ್ಟ ಕಾಮಗಾರಿ ಬಾಕಿ:

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ಯೋಜನೆ ಅಡಿ ಪ್ಯಾಕೇಜ್‌ 1ರಲ್ಲಿ ಬೆಂಗಳೂರಿನಿಂದ ನಿಡಘಟ್ಟವರೆಗೆ ಬೆಂಗಳೂರು ನಗರದಲ್ಲಿ 3 ಕಿರುಸೇತುವೆ, ರಾಮನಗರ-12 ಕಿರುಸೇತುವೆ, 4 ಬೃಹತ್‌ ಸೇತುವೆ, 31 ಅಂಡರ್‌ಪಾಸ್‌, ಮಂಡ್ಯ-2 ಕಿರುಸೇತುವೆ-1 ಅಂಡರ್‌ಪಾಸ್‌, ನಿಡಘಟ್ಟದಿಂದ ಮೈಸೂರು ವಿಭಾಗದವರೆಗೆ ಮಂಡ್ಯ ಜಿಲ್ಲೆಯಲ್ಲಿ 23 ಕಿರುಸೇತುವೆ, 5 ಬೃಹತ್‌ ಸೇತುವೆ, 43 ಅಂಡರ್‌ಪಾಸ್‌, ಮೈಸೂರು ಜಿಲ್ಲೆಯಲ್ಲಿ 2 ಕಿರುಸೇತುವೆ, 2 ಅಂಡರ್‌ಪಾಸ್‌ಗಳನ್ನು ನಿರ್ಮಾಣ ಮಾಡಲಾಗಿದೆ.

ರಸ್ತೆ ದುರಸ್ತಿ ಮಾಡದಿದ್ದರೆ ಮನೆ ಮುಂದೆ ಪ್ರತಿಭಟನೆ: ಶಾಸಕ ಪುಟ್ಟರಾಜು ಎಚ್ಚರಿಕೆ

ಮಂಡ್ಯ ನಗರದ ಉಮ್ಮಡಹಳ್ಳಿ ಬಳಿ ಮಂಡ್ಯ ನಗರ ಪ್ರವೇಶಿಸಲು ಹಾಗೂ ಇಂಡುವಾಳು ಬಳಿ ನಿರ್ಗಮಿಸಲು ಅವಕಾಶ ಕಲ್ಪಿಸಲಾಗಿದೆ. ಪ್ಯಾಕೇಜ್‌ 1ರ ಬೆಂಗಳೂರು-ನಿಡಘಟ್ಟಭಾಗದ ಹೆದ್ದಾರಿ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಪ್ಯಾಕೇಜ್‌ 2ರ ನಿಡಘಟ್ಟ-ಮೈಸೂರು ಭಾಗದ ಹೆದ್ದಾರಿ ಕಾಮಗಾರಿ ಫೆ.27ರೊಳಗೆ ಪೂರ್ಣಗೊಳ್ಳಲಿದೆ ಎಂದು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದಾರೆ.

ಮಂಡ್ಯ ನಗರದಲ್ಲಿ ವಾಹನ ದಟ್ಟಣೆ ಇಳಿಕೆ

ಈ ಹಿಂದೆ ಬೆಂಗಳೂರಿನಿಂದ ಹೋಗುತ್ತಿದ್ದ ವಾಹನಗಳು ಮಂಡ್ಯ ನಗರವಾಗಿಯೇ ಸಾಗಬೇಕಿತ್ತು. ಆದರೆ, ಇದೀಗ ಹೊಸ ದಶಪಥ ಹೆದ್ದಾರಿಯಿಂದಾಗಿ ವಾಹನ ಸವಾರರು ಮಂಡ್ಯಕ್ಕೆ ಹೋಗದೆ ಬೈಪಾಸ್‌ ರಸ್ತೆ ಮೂಲಕ ಮೈಸೂರಿಗೆ ತೆರಳಬಹುದಾಗಿದೆ. ಇದರಿಂದ ಮಂಡ್ಯ ನಗರದಲ್ಲಿ ಆಗುತ್ತಿದ್ದ ವಾಹನ ದಟ್ಟಣೆ ಕಡಿಮೆಯಾಗಲಿದೆ.

PREV
Read more Articles on
click me!

Recommended Stories

ದ್ವೇಷ ಭಾಷಣ ಪ್ರಕರಣ; ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ಗೆ ನಿರೀಕ್ಷಣಾ ಜಾಮೀನು!
Uttara Kannada: ಆಸ್ಪತ್ರೆಗೆ ಹೋಗಿದ್ದ ಗರ್ಭಿಣಿ ಹುಟ್ಟುಹಬ್ಬದಂದೇ ಸಾವು; ಹೊಟ್ಟೆಯಲ್ಲೇ ಅಸುನೀಗದ ಮಗು!