ಪಂಕ್ಚರ್ ಹಾಕುತ್ತಿದ್ದವರ ಮೇಲೆ ಹರಿದ ಲಾರಿ: ಮೂವರ ದುರ್ಮರಣ

Suvarna News   | Asianet News
Published : Jan 22, 2020, 11:15 AM IST
ಪಂಕ್ಚರ್ ಹಾಕುತ್ತಿದ್ದವರ ಮೇಲೆ ಹರಿದ ಲಾರಿ:  ಮೂವರ ದುರ್ಮರಣ

ಸಾರಾಂಶ

ಲಾರಿ ಹರಿದ ಪರಿಣಾಮ ಮೂವರ ಸಾವು|ಬೀದರ್ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 9 ರ ಮಿನಕೇರಾ ಕ್ರಾಸ್ ಬಳಿ ನಡೆದ ಘಟನೆ|ಪ್ಲೈಓವರ್ ಮೇಲೆ ಗೂಡ್ಸ್ ವಾಹನಕ್ಕೆ ಪಂಕ್ಚರ್ ಜೋಡನೆ ಮಾಡುತ್ತಿದ್ದ ವೇಳೆ ಹರಿದ ಲಾರಿ|

ಬೀದರ್[ಜ.22]: ಲಾರಿಯೊಂದು ಹರಿದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ ಘಟನೆ ಬೀದರ್ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 9 ರ ಮಿನಕೇರಾ ಕ್ರಾಸ್ ಬಳಿ ಇಂದು[ಬುಧವಾರ] ಬೆಳಗ್ಗೆ ನಡೆದಿದೆ. ಮೃತರನ್ನು ಅನ್ಸರ್ ಬಸಂತಪೂರ್, ವಿಜಯ ಕುಮಾರ್ ಬಸಂತಪೂರ್, ಇಸ್ಮೈಲ್ ಎಂದು ಗುರುತಿಸಲಾಗಿದೆ. 

ಮೃತರು ಗೂಡ್ಸ್ ವಾಹನದಲ್ಲಿ ಈರುಳ್ಳಿ ತುಂಬಿಕೊಂಡು ಮನ್ನಾ ಖೇಳಿ ಕಡೆಗೆ ಹೊರಟ್ಟಿದ್ದರು. ಮಿನಕೇರಾ ಕ್ರಾಸ್ ಬಳಿ ಗೂಡ್ಸ್  ವಾಹನ ಪಂಕ್ಚರ್ ಆಗಿತ್ತು. ಹೀಗಾಗಿ ಪ್ಲೈಓವರ್ ಮೇಲೆ ಗೂಡ್ಸ್ ವಾಹನಕ್ಕೆ ಪಂಕ್ಚರ್ ಜೋಡನೆ ಮಾಡುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿ ಹರಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಘಟನಾ ಸ್ಥಳಕ್ಕೆ ಬಗದಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

PREV
click me!

Recommended Stories

Bengaluru New Year 2026: ಎಂಜಿ ರೋಡ್ ಬಿಟ್ಟು ಕೋರಮಂಗಲಕ್ಕೆ ಜನಸಾಗರ; ಎಲೆಕ್ಟ್ರಾನಿಕ್ ಸಿಟಿಯಲ್ಲಿ ಮಹಿಳೆ ಜೊತೆ ಟೋಯಿಂಗ್ ಚಾಲಕನ ಕಿರಿಕ್!
ಹೊಸ ವರ್ಷಕ್ಕೆ ಕೆಲವೇ ಹೊತ್ತಲ್ಲಿ ಶಾಕ್! ಕೊಳ್ಳೇಗಾಲದಲ್ಲಿ ಭೀಕರ ಅಗ್ನಿ ಅವಘಡ; ಬೇಕರಿ ಸೇರಿದಂತೆ ಮೂರು ಅಂಗಡಿಗಳು ಭಸ್ಮ!