ಮಂಗಳೂರು: ಸಿಟಿ ಬಸ್‌ಗಳಲ್ಲಿ ತುಳು ಲಿಪಿ..!

Kannadaprabha News   | Asianet News
Published : Jan 10, 2020, 03:15 PM IST
ಮಂಗಳೂರು: ಸಿಟಿ ಬಸ್‌ಗಳಲ್ಲಿ ತುಳು ಲಿಪಿ..!

ಸಾರಾಂಶ

ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸಬೇಕು ಎನ್ನುವುದು ಹಲವು ವರ್ಷಗಳ ಬೇಡಿಕೆ. ಸಿಟಿ ಬಸ್‌ ಮಾಲೀಕರ ಸಂಘದ ಅಧ್ಯಕ್ಷ ದಿಲ್‌ರಾಜ್‌ ಆಳ್ವ ಅವರ ಮಾಲೀಕತ್ವದ ಗಣೇಶ್‌ ಪ್ರಸಾದ್‌ (ರೂಟ್‌ ನಂ: 27 ) ಎಂಬ ಬಸ್‌ ಇದೀಗ ತುಳುಪಿಲಿಯೊಂದಿಗೆ ಎಲ್ಲರನ್ನು ಆಕರ್ಷಿಸುತ್ತಿದೆ.

ಮಂಗಳೂರು(ಜ.10): ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸಬೇಕು ಎನ್ನುವುದು ಹಲವು ವರ್ಷಗಳ ಬೇಡಿಕೆ. ಈ ನಿಟ್ಟಿನಲ್ಲಿ ಇದೀಗ ನಗರದಲ್ಲಿ ಓಡುವ ಸಿಟಿ ಬಸ್‌ನಲ್ಲೂ ಬೆಂಬಲ ವ್ಯಕ್ತವಾಗಿದ್ದು, ಇದಕ್ಕೆ ಎಲ್ಲೆಡೆಯಿಂದ ಪ್ರಶಂಸೆ ಕೇಳಿಬರುತ್ತಿದೆ.

ಸಿಟಿ ಬಸ್‌ ಮಾಲೀಕರ ಸಂಘದ ಅಧ್ಯಕ್ಷ ದಿಲ್‌ರಾಜ್‌ ಆಳ್ವ ಅವರ ಮಾಲೀಕತ್ವದ ಗಣೇಶ್‌ ಪ್ರಸಾದ್‌ (ರೂಟ್‌ ನಂ: 27 ) ಎಂಬ ಬಸ್‌ ಇದೀಗ ತುಳುಪಿಲಿಯೊಂದಿಗೆ ಎಲ್ಲರನ್ನು ಆಕರ್ಷಿಸುತ್ತಿದೆ. ಸ್ಟೇಟ್‌ಬ್ಯಾಂಕ್‌ ಬಸ್‌ ನಿಲ್ದಾಣದಿಂದ ಅತ್ತಾವರ ಮೂಲಕ ಮಂಗಳಾದೇವಿಗೆ ತೆರಳುವ ಈ ಬಸ್‌ಗೆ ಪೈಂಟಿಂಗ್‌ ಮಾಡುವ ಸಮಯದಲ್ಲಿ ಬಸ್‌ನ ಎರಡೂ ಬದಿಗಳಲ್ಲಿ ಬಸ್‌ನ ಹೆಸರು ಅಥವಾ ರೂಟ್‌ ಬರೆಯುವ ಬದಲಿಗೆ ಅ ದಿಂದ ಅಃ ವರೆಗಿನ ತುಳು ಲಿಪಿ ಬರೆದು, ಪಕ್ಕದಲ್ಲಿಯೇ ಹ್ಯಾಶ್‌ ಟ್ಯಾಗ್‌ ಮುಖೇನ #TuluTo8thSchedule #TuluofficialInKA-KL ಎಂದು ಬರೆಸಲಾಗಿದೆ.

ಜಾಲತಾಣಗಳಲ್ಲಿ ವೈರಲ್‌:

ಕೆಲವು ದಿನಗಳಿಂದ ಬಸ್‌ಗೆ ಪೈಂಟಿಂಗ್‌ ಮಾಡಲಾಗಿದ್ದು, ಈಗ ಪೂರ್ಣಗೊಂಡಿದೆ. ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಈ ಬಸ್‌ ಖ್ಯಾತಿ ಪಡೆಯುತ್ತಿದೆ. ಈ ರೀತಿಯ ತುಳು ಭಾಷಾಭಿಮಾನಕ್ಕೆ ಅನೇಕ ಮಂದಿ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಅಂದಹಾಗೆ, ದಿಲ್‌ರಾಜ್‌ ಆಳ್ವ ಅವರ ಬಳಿ ಇದೇ ಸದ್ಯ ಐದು ಸಿಟಿ ಬಸ್‌ ಇದ್ದು, ತಮ್ಮ ಮಾಲೀಕತ್ವದ ಬಸ್‌ಗಳಿಗೆ ಈ ಹಿಂದೆಯೂ ವಿಶೇಷ ಪರಿಕಲ್ಪನೆಯಲ್ಲಿ ಪೈಂಟಿಂಗ್‌ ಮಾಡಿದ್ದರು. ‘ಸ್ವಚ್ಛ ಭಾರತ’, ‘ಸೇವ್‌ ವಾಟರ್‌’ ಸಹಿತ ವಿವಿಧ ಪರಿಕಲ್ಪನೆಯಡಿಯಲ್ಲಿ ಈ ಹಿಂದೆಯೂ ಬಸ್‌ಗಳಲ್ಲಿ ಪೈಂಟಿಂಗ್‌ ಮೂಡಿ ಬಂದಿತ್ತು. ಇದೀಗ ತುಳು ಭಾಷೆಗೆ ಬೆಂಬಲ ನೀಡುವ ನಿಟ್ಟಿನಲ್ಲಿ ಈ ರೀತಿ ಬರೆಸಲಾಗಿದೆ. ಇದರೊಂದಿಗೆ ತುಳು ಭಾಷೆಗೆ ಅಧಿಕೃತ ಸ್ಥಾಮಮಾನಕ್ಕೆ ಬೆಂಬಲ ನೀಡಿದಂತಾಗಿದೆ.

ತುಮಕೂರು: ಚಿರತೆ ದಾಳಿಗೆ 3 ಬಲಿ, 40 ಕಡೆ ಬೋನಿಟ್ಟರೂ ನೋ ಯೂಸ್..!

ತುಳು ಭಾಷೆ 8ನೇ ಪರಿಚ್ಛೇದಕ್ಕೆ ಸೇರ್ಪಡೆಯಾಗಬೇಕು. ಜೊತೆಗೆ ಜನತೆಗೆ ತುಳು ಲಿಪಿಯ ಪರಿಚಯವಾಗಬೇಕು. ಅದೇ ಕಾರಣಕ್ಕೆ ಬಸ್‌ನಲ್ಲಿ ಈ ರೀತಿ ಬರೆಸಲಾಗಿದೆ. ಈ ಹಿಂದೆ ನೀರಿನ ಮಹತ್ವ ಸಾರುವ ಬರೆಹ, ಸ್ವಚ್ಛ ಭಾರತ ಬರೆಹಗಳನ್ನು ಬರೆಸಲಾಗಿತ್ತು ಎಂದು ಬಸ್ ಮಾಲೀಕ ದಿಲ್‌ರಾಜ್‌ ಆಳ್ವ ತಿಳಿಸಿದ್ದಾರೆ.

PREV
click me!

Recommended Stories

ಪಂಚಮಸಾಲಿ ಟ್ರಸ್ಟ್‌ಗಳ ವಿರುದ್ಧ ಸ್ಫೋಟಕ ಆರೋಪ ಮಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್
ಒಂದು ವರ್ಷದೊಳಗೆ ಹೊಸ ಬಸ್ ನಿಲ್ದಾಣ ಕಾಮಗಾರಿ ಪೂರ್ಣ: ಶಾಸಕ ಜನಾರ್ದನ ರೆಡ್ಡಿ