ಶಾಲೆಗೆ ಹೋಗೋ ಬಾಲಕ ಅಂದ್ರೆ, ಗೆಳೆಯನೆದುರೇ ಬಾವಿಗೆ ಹಾರಿ ಜೀವಬಿಟ್ಟ 14ರ ಪೋರ ಜಗದೀಶ!

Published : Jan 12, 2026, 01:36 PM IST
Tumakuru Jagadish

ಸಾರಾಂಶ

ತುಮಕೂರಿನ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ, ಶಾಲೆಗೆ ಸರಿಯಾಗಿ ಹೋಗುವಂತೆ ತಂದೆ ಬುದ್ಧಿಮಾತು ಹೇಳಿದ್ದಕ್ಕೆ ಮನನೊಂದ 8ನೇ ತರಗತಿ ವಿದ್ಯಾರ್ಥಿ ಬಾವಿಗೆ ಹಾರಿ ಆತ್ಮ*ಹತ್ಯೆ ಮಾಡಿಕೊಂಡಿದ್ದಾನೆ. ಗೆಳೆಯನನ್ನು ಮುಂದೆ ಕಳುಹಿಸಿ ಈ ಕೃತ್ಯ ಎಸಗಿದ್ದು, ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ತುಮಕೂರು (ಜ.12): 'ಶಾಲೆಗೆ ಹೋಗಿ ಸರಿಯಾಗಿ ಓದು' ಎಂದು ತಂದೆ ಬುದ್ಧಿಮಾತು ಹೇಳಿದ್ದಕ್ಕೆ ಮನನೊಂದ 8ನೇ ತರಗತಿಯ ಬಾಲಕನೊಬ್ಬ ಬಾವಿಗೆ ಹಾರಿ ಆತ್ಮ*ಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಕೆಂಕೆರೆ ಹೋಬಳಿಯಲ್ಲಿ ಸಂಭವಿಸಿದೆ.

ಘಟನೆಯ ವಿವರ

ಮೃತ ಬಾಲಕನನ್ನು ಚೆನ್ನಕಾಟಯ್ಯನ ಗುಡ್ಲು ನಿವಾಸಿ ಜಗದೀಶ್ (14) ಎಂದು ಗುರುತಿಸಲಾಗಿದೆ. ಈತ ಕೆಂಕೆರೆ ಸರ್ಕಾರಿ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದನು. ಕಳೆದ ಕೆಲವು ದಿನಗಳಿಂದ ಜಗದೀಶ್ ತನ್ನ ತಾಯಿಯ ತವರ ಮನೆಗೆ ರಜೆಯ ಮೇಲೆ ಹೋಗಿದ್ದನು. ಶನಿವಾರವಷ್ಟೇ ಊರಿಗೆ ವಾಪಸ್ಸಾಗಿದ್ದ ಈತನಿಗೆ ತಂದೆ ರಮೇಶ್ ಅವರು, 'ಇನ್ನು ಮುಂದೆ ಶಾಲೆ ತಪ್ಪಿಸಬೇಡ, ಪ್ರತಿದಿನ ಶಾಲೆಗೆ ಹೋಗು' ಎಂದು ಬುದ್ಧಿವಾದ ಹೇಳಿ ಶಾಲೆಗೆ ಕಳುಹಿಸಿದ್ದರು.

ಗೆಳೆಯನನ್ನು ಮುಂದೆ ಕಳುಹಿಸಿ ಸಾವು

ತಂದೆಯ ಮಾತಿನಂತೆ ಅಂದು ಶಾಲೆಗೆ ತೆರಳಿದ್ದ ಜಗದೀಶ್, ಶಾಲೆಯ ಅವಧಿ ಮುಗಿದ ಬಳಿಕ ತನ್ನ ಗೆಳೆಯನೊಂದಿಗೆ ಮನೆಗೆ ಹಿಂತಿರುಗುತ್ತಿದ್ದನು. ಗೊಲ್ಲರಹಟ್ಟಿ ಸಮೀಪದ ಬಾವಿಯ ಬಳಿ ಬಂದಾಗ, ಜಗದೀಶ್ ತನ್ನ ಗೆಳೆಯನಿಗೆ 'ನೀನು ಮುಂದೆ ಹೋಗು, ನಾನು ಬರುತ್ತೇನೆ' ಎಂದು ಹೇಳಿ ಆತನನ್ನು ಕಳುಹಿಸಿದ್ದಾನೆ. ಗೆಳೆಯ ಕಣ್ಣ ಮರೆಯಾಗುತ್ತಿದ್ದಂತೆ ತನ್ನ ಚಪ್ಪಲಿ ಮತ್ತು ಶಾಲಾ ಬ್ಯಾಗ್‌ ಅನ್ನು ಬಾವಿಯ ಪಕ್ಕದಲ್ಲೇ ಇಟ್ಟು ಬಾವಿಗೆ ಹಾರಿ ಪ್ರಾಣ ಬಿಟ್ಟಿದ್ದಾನೆ. ಶನಿವಾರ ಮಧ್ಯಾಹ್ನ ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬಾಲಕ ಮನೆಗೆ ಬಾರದಿದ್ದಾಗ ಪೋಷಕರು ಹುಡುಕಾಟ ನಡೆಸಿದ್ದು, ಬಾವಿಯ ಪಕ್ಕದಲ್ಲಿ ಬ್ಯಾಗ್ ಮತ್ತು ಚಪ್ಪಲಿ ಕಂಡುಬಂದಾಗ ವಿಷಯ ತಿಳಿದು ಆತಂಕಗೊಂಡಿದ್ದಾರೆ.

ಪೊಲೀಸ್ ತನಿಖೆ

ಸ್ಥಳಕ್ಕೆ ಭೇಟಿ ನೀಡಿದ ಹುಳಿಯಾರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮೃತದೇಹವನ್ನು ಹೊರತೆಗೆದಿದ್ದಾರೆ. ಕೇವಲ ಶಾಲೆಗೆ ಹೋಗುವಂತೆ ಹೇಳಿದ್ದಕ್ಕೇ ಬಾಲಕ ಇಷ್ಟು ದೊಡ್ಡ ನಿರ್ಧಾರ ಕೈಗೊಂಡನೆ ಅಥವಾ ಬೇರೆ ಏನಾದರೂ ಕಾರಣಗಳಿವೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಕೆಲಸ ಮಾಡಿ ಜೀವನ ಕಟ್ಟಿಕೊಳ್ಳಬೇಕಿದ್ದ ಬಾಲಕ ಸಣ್ಣ ವಿಚಾರಕ್ಕೆ ಬಾರದ ಲೋಕಕ್ಕೆ ಪಯಣಿಸಿರುವುದು ಗ್ರಾಮಸ್ಥರಲ್ಲಿ ಶೋಕ ಸಾಗರ ಮೂಡಿಸಿದೆ.

PREV
Read more Articles on
click me!

Recommended Stories

ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಚುನಾವಣೆ ಜೂನ್ 30ರೊಳಗೆ ಮುಗಿಸಿ: ಸುಪ್ರೀಂ ಕೋರ್ಟ್ ಖಡಕ್ ಆದೇಶ!
ಲಕ್ಕುಂಡಿಯಲ್ಲಿ ಸಿಕ್ಕ ಚಿನ್ನ ನಿಧಿಯಲ್ಲ ಎಂದ ಪುರಾತತ್ವ ಇಲಾಖೆ, ಕುಟುಂಬಕ್ಕೆ ಸಂಕಷ್ಟ! ಬಂಗಾರ ಮರಳಿಸುವಂತೆ ಊರವರ ಆಗ್ರಹ