ತುಮಕೂರು : ಬೀದಿಬದಿ ವ್ಯಾಪಾರಿಗಳಿಗೆ ನಿವೇಶನ ಒದಗಿಸಲು ಮನವಿ

Published : Feb 23, 2024, 10:12 AM IST
ತುಮಕೂರು :  ಬೀದಿಬದಿ ವ್ಯಾಪಾರಿಗಳಿಗೆ ನಿವೇಶನ ಒದಗಿಸಲು ಮನವಿ

ಸಾರಾಂಶ

ಜಿಲ್ಲೆಯ 11 ತಾಲೂಕುಗಳಲ್ಲಿಯೂ ಕಾರ್ಯ ನಿರ್ವಹಿಸುತ್ತಿರುವ 5 ಸಾವಿರಕ್ಕೂ ಹೆಚ್ಚು ಬೀದಿ ಬದಿ ವ್ಯಾಪಾರಿಗಳಿಗೆ ನಿವೇಶನವನ್ನು ಒದಗಿಸುವಂತೆ ವಸತಿ ಮತ್ತು ವಕ್ಫ್ ಸಚಿವ ಜಮೀರ್ ಅಹಮದ್ ಖಾನ್ ಅವರಿಗೆ ತುಮಕೂರು ಜಿಲ್ಲಾ ಫುಟ್‌ಪಾತ್ ವ್ಯಾಪಾರಿಗಳ ಸಂಘ ಸಿಐಟಿಯು ಪದಾಧಿಕಾರಿಗಳು ಮನವಿ ಸಲ್ಲಿಸಿದರು.

ತುಮಕೂರು: ಜಿಲ್ಲೆಯ 11 ತಾಲೂಕುಗಳಲ್ಲಿಯೂ ಕಾರ್ಯ ನಿರ್ವಹಿಸುತ್ತಿರುವ 5 ಸಾವಿರಕ್ಕೂ ಹೆಚ್ಚು ಬೀದಿ ಬದಿ ವ್ಯಾಪಾರಿಗಳಿಗೆ ನಿವೇಶನವನ್ನು ಒದಗಿಸುವಂತೆ ವಸತಿ ಮತ್ತು ವಕ್ಫ್ ಸಚಿವ ಜಮೀರ್ ಅಹಮದ್ ಖಾನ್ ಅವರಿಗೆ ತುಮಕೂರು ಜಿಲ್ಲಾ ಫುಟ್‌ಪಾತ್ ವ್ಯಾಪಾರಿಗಳ ಸಂಘ ಸಿಐಟಿಯು ಪದಾಧಿಕಾರಿಗಳು ಮನವಿ ಸಲ್ಲಿಸಿದರು.

ಸರ್ಕಾರ ಬೀದಿಬದಿ ವ್ಯಾಪಾರಿಗಳಿಗೆ ವಿಧಾನ ಮಂಡಲ ಕಲಾಪ ವೀಕ್ಷಣೆ ಅವಕಾಶ ಕಲ್ಪಿಸಿದ್ದ ಹಿನ್ನೆಲೆಯಲ್ಲಿ ವಿಧಾನಸೌಧಕ್ಕೆ ತೆರಳಿದ್ದ ಫುಟ್‌ಪಾತ್ ವ್ಯಾಪಾರಿ ಸಂಘದ ಪದಾಧಿಕಾರಿಗಳು ಕಲಾಪ ವೀಕ್ಷಣೆ ನಂತರ ಸಚಿವರಿಗೆ ಮನವಿ ಸಲ್ಲಿಸಿ, ಕಡಿಮೆ ವೆಚ್ಚದಲ್ಲಿ ದಿನಬಳಕೆ ವಸ್ತುಗಳನ್ನು ಕಡಿಮೆದರದಲ್ಲಿ ಮಾರಾಟ ಮಾಡುತ್ತಿರುವ ಬೀದಿಬದಿ ವ್ಯಾಪಾರಿಗಳ ಹಿತಾಸಕ್ತಿ ಕಾಪಾಡಲು ಮುಂದಾಗಬೇಕೆಂದು ಮನವಿ ಸಲ್ಲಿಸಿದರು.

ಈ ವೇಳೆ ಕರ್ನಾಟಕ ರಾಜ್ಯ ಬೀದಿಬದಿ ವ್ಯಾಪಾರಿಗಳ ಫೌಂಡೇಶನ್ ಸಿಐಟಿಯುನ ಚಂದ್ರಶೇಖರಮೂರ್ತಿ, ಬಸಮ್ಮ, ಎನ್.ಕೆ. ಸುಬ್ರಮಣ್ಯ, ಸೈಯದ್ ಮುಜೀಬ್, ವಸೀಂಅಕ್ರಂ, ಎಚ್.ಕೆ. ರವಿಕುಮಾರ್‌, ಮುತ್ತುರಾಜು, ತುರುವೇಕೆರೆ ಅಧ್ಯಕ್ಷ ಮಾರುತಿ ಸೇರಿದಂತೆ ಇತರರಿದ್ದರು.

ಸುಗ್ರೀವಾಜ್ಞೆ ಮೂಲಕ ಮುಚ್ಚುವುದು ಲೇಸು

ಬೆಂಗಳೂರು (ಫೆ.15): ನಿವೇಶನ ಹಂಚಿಕೆದಾರರು ಮತ್ತು ಬಿಡಿಎ ರೂಪಿಸಿದ ಬಡಾವಣೆಗಳಿಂದ ಭೂಮಿ ಕಳೆದುಕೊಂಡವರ ಸಂಕಷ್ಟವನ್ನು ಪರಿಗಣಿಸಿ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವನ್ನು ಸುಗ್ರೀವಾಜ್ಞೆ ಮೂಲಕ ಮುಚ್ಚುವುದೇ ಲೇಸು ಎಂದು ಹೈಕೋರ್ಟ್ ಮೌಖಿಕವಾಗಿ ಅಭಿಪ್ರಾಯಪಟ್ಟಿದೆ.

ಸರ್ ಎಂವಿ ಲೇಔಟ್‌ಗೆ ಪರಿಹಾರ ನೀಡದೆ ಬಿಡಿಎ 18 ಗುಂಟೆ ಜಮೀನು ಸ್ವಾಧೀನಪಡಿಸಿಕೊಂಡಿದೆ ಎಂದು ಮುದ್ದೇಗೌಡ ಎಂಬುವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದಿನೇಶ್ ಕುಮಾರ್ ಮತ್ತು ನ್ಯಾಯಮೂರ್ತಿ ಟಿ.ಜಿ.ಶಿವಶಂಕರೇಗೌಡ ಅವರಿದ್ದ ವಿಭಾಗೀಯ ಪೀಠ ಈ ರೀತಿ ಅಭಿಪ್ರಾಯ ಪಟ್ಟಿದೆ.

ಪೆರಿಫೆರಲ್‌ ರಿಂಗ್‌ ರಸ್ತೆ ನಿರ್ಮಾಣಕ್ಕೆ ಬಿಡಿಎಯಿಂದ 3ನೇ ಬಾರಿ ಜಾಗತಿಕ ಟೆಂಡರ್!

ನ್ಯಾಯಾಲಯದ ಮೆಟ್ಟಿಲೇರಿದ್ದ ಬಿಡಿಎ ಆಯುಕ್ತ ಎನ್ .ಜಯರಾಂ ಅವರಿಗೆ ಜಮೀನು ಕಳೆದುಕೊಂಡವರ ಸಂಕಷ್ಟವನ್ನು ವಿವರಿಸಿದ ಮುಖ್ಯ ನ್ಯಾಯಮೂರ್ತಿ, 2003ರಲ್ಲಿ ಯಾವುದೇ ಸ್ವಾಧೀನ ಅಧಿಸೂಚನೆ ಹೊರಡಿಸದೆ ಭೂಮಿಯನ್ನು ಕಬಳಿಸಲಾಗಿದೆ. 2003ರಲ್ಲಿ ತಾನು 18 ಗುಂಟೆಗಳನ್ನು ಕಳೆದುಕೊಂಡಿದ್ದೇನೆ ಎಂದು ಭೂಮಾಲೀಕರು ಹೇಳಿದರೆ, ಬಿಡಿಎ ಕೇವಲ 15 ಗುಂಟೆ ತೆಗೆದುಕೊಂಡಿದೆ ಎಂದು ಹೇಳುತ್ತದೆ.

ಹಾಗಿದ್ದರೆ, ನೀವು ಅವರಿಗೆ ಪರಿಹಾರವನ್ನು ನೀಡಬಹುದಿತ್ತು. ಈಗ 21 ವರ್ಷಗಳ ನಂತರ 2024 ರಲ್ಲಿ, ಬಿಡಿಎ ನಿಖರವಾದ ಭೂಮಿಯನ್ನು ಕಂಡುಹಿಡಿಯಲು ಸಮೀಕ್ಷೆಯನ್ನು ನಡೆಸಲು ಬಯಸಿದೆ. ಹಾಗಿದ್ದಲ್ಲಿ, ಈ ದೇಶದಲ್ಲಿ ಒಬ್ಬ ನಾಗರಿಕ ಏನು ಮಾಡಬಹುದು? ನೀವು (ಕಮಿಷನರ್) ಭೂಮಾಲೀಕರಾಗಿದ್ದರೆ, ನೀವು ಏನು ಮಾಡುತ್ತೀರಿ ಎಂದು ಸಿಜೆ ಜಯರಾಮ್ ಅವರನ್ನು ನ್ಯಾಯಪೀಠ ಪ್ರಶ್ನಿಸಿತು.

ಬಿಡಿಎ ಅಧ್ಯಕ್ಷರಾಗಿ ಮೊದಲು ಈ ಕೆಲಸ ಮಾಡೋದಾಗಿ ಶಪಥ ಮಾಡಿದ ಶಾಸಕ ಎನ್.ಎ.ಹ್ಯಾರಿಸ್!

21 ವರ್ಷ ಅಂದರೆ, ಸರಿ ಸುಮಾರು ಕಾಲು ಶತಮಾನದಷ್ಟು ಸಮಯವನ್ನು ಪರಿಹಾರಕ್ಕಾಗಿ ವ್ಯಕ್ತಿಯೊಬ್ಬರನ್ನು ಬಿಡಿಎ ಅಲೆಯುವಂತೆ ಮಾಡಲಾಗಿದೆ. ಆದರೂ, ಏಕೆ ಪರಿಹಾರ ನೀಡಿಲ್ಲ? ಎಂದು ಪ್ರಶ್ನಿಸಿತು. ಅಷ್ಟೇ ಅಲ್ಲದೆ, ಬಿಡಿಎ ಕಚೇರಿಗಳಲ್ಲಿ ಏನು ನಡೆಯುತ್ತಿದೆ ಎಂಬುದನ್ನು ತಿಳಿಯಲು ಮಾರು ವೇಷದಲ್ಲಿ ಒಮ್ಮೆ ಹೋಗಿ ಪರಿಶೀಲಿಸಿ.‌ ಆಗ ಕಚೇರಿಯಲ್ಲಿ ಏನಾಗುತ್ತಿದೆ ಎಂಬುದು ತಿಳಿಯಲಿದೆ ಎಂದು ಬಿಡಿಎ ಆಯುಕ್ತರಿಗೆ ನ್ಯಾಯಪೀಠ ಸಲಹೆ ನೀಡಿತು.

PREV
Read more Articles on
click me!

Recommended Stories

ಡೆವಿಲ್ ಬ್ಯಾನರ್‌ನಲ್ಲಿ 'ಡಾ.ಅಂಬೇಡ್ಕರ್ ತಲೆಮೇಲೆ ಕೊಲೆ ಆರೋಪಿ' ಕೂರಿಸಿದ ಅಂದಾಭಿಮಾನಿಗಳು!
ರೈಲ್ವೆ ಮೂಲಸೌಕರ್ಯ ಅಭಿವೃದ್ಧಿಪಡಿಸಲು ಮೋದಿಯಿಂದ ಬದ್ಧತೆಯ ಕಾರ್ಯ: ಸಂಸದ ಬಿ.ವೈ.ರಾಘವೇಂದ್ರ