ಮಗನೂ ತಿರುಗಿ ನೋಡಲಿಲ್ಲ ತಾಯಿ ಶವ : ತಹಸೀಲ್ದಾರ್-ಮುಸ್ಲಿಂ ತಂಡದಿಂದ ಅಂತ್ಯಕ್ರಿಯೆ

Kannadaprabha News   | Asianet News
Published : May 12, 2021, 10:49 AM ISTUpdated : May 12, 2021, 11:32 AM IST
ಮಗನೂ ತಿರುಗಿ ನೋಡಲಿಲ್ಲ ತಾಯಿ ಶವ : ತಹಸೀಲ್ದಾರ್-ಮುಸ್ಲಿಂ ತಂಡದಿಂದ ಅಂತ್ಯಕ್ರಿಯೆ

ಸಾರಾಂಶ

ಕೋವಿಡ್ ಸೋಂಕಿತೆ ಶವ ಸಂಸ್ಕಾರ ನೆರವೇರಿಸಿದ ತಹಸೀಲ್ದಾರ್ ಮಗನೂ ಬರಲಿಲ್ಲ ಅಂತಿಮ ವಿಧಿವಿಧಾನಕ್ಕೆ ತುಮಕೂರಿನಲ್ಲಿ ತಹಸೀಲ್ದಾರ್ - ಮುಸ್ಲಿಂ ತಂಡದಿಂದ ಅಂತಿಮ ಸಂಸ್ಕಾರ

 ತುಮಕೂರು (ಮೇ.12): ಕೋವಿಡ್‌ನಿಂದ ಮನೆಯಲ್ಲೇ ಸಾವನ್ನಪ್ಪಿದ ಮಹಿಳೆಯ ಅಂತ್ಯಸಂಸ್ಕಾರವನ್ನು ತುಮಕೂರು ತಹಸೀಲ್ದಾರ್ ಮೋಹನ್ ಕುಮಾರ್‌ ಹಾಗೂ ಕಂದಾಯಾಧಿಕಾರಿ ಅವರನ್ನು ಒಳಗೊಂಡ ತಂಡ ಮಾಡುವ ಮೂಲಕ ಮಾನವೀಯತೆ ಮೆರೆದಿದೆ. 

ತಾಲೂಕಿನ ಕುಪ್ಪೂರಿನ ಮೃತ ಮಹಿಳೆಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿತ್ತು. ನಂತರ ವೈದ್ಯರ ಸಲಹೆ ಮೇರೆಗೆ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಆರೋಗ್ಯ ಸುಧಾರಿಸದೇ ಮೃತಪಟ್ಟಿದ್ದಾರೆ. 

ತುಮಕೂರು : ಕಾರ್‌ ಹೆಡ್ ಲೈಟ್ ಹಾಕೊಂಡು ಮುಕ್ತಿಧಾಮದಲ್ಲಿ ಮಹಿಳೆಯ ಅಂತ್ಯಕ್ರಿಯೆ ..

ಮೃತ ಮಹಿಳೆಯ ಅಂತ್ಯಸಂಸ್ಕಾರವನ್ನು ಮಾಡಲು ಯಾರೂ ಮುಂದೆ ಬಾರದೆ ಇರುವುದರಿಂದ ತಹಸೀಲ್ದಾರ್ ಮೋಹನ್ ಕುಮಾರ್ ಕಂದಾಯಾಧಿಕಾರಿಗಳು ಗ್ರಾಮಲೆಕ್ಕಿಗರು  ತೆರಳಿ ಅಂತ್ಯಸಂಸ್ಕಾರ ಮಾಡಿದ್ದಾರೆ.  

ಕುಪ್ಪೂರು ಮಹಿಳೆ ಕೋವಿಡ್‌ನಿಂದ ಸಾವನ್ನಪ್ಪಿದ್ದರಿಂದ ಮಗನಾಗಲಿ, ಗ್ರಾಮಸ್ಥರಾಗಲಿ ಅಂತ್ಯಸಂಸ್ಕಾರ ಮಾಡಲು ಹಿಂದೇಟು ಹಾಕಿದ್ದು  ಅಧಿಕಾರಿಗಳೇ ನೆರವೇರಿಸಿದ್ದಾರೆ. 

ಆದರೆ ಮಗ, ಗ್ರಾಮಸ್ಥರು ಯಾರೂ ಅಂತ್ಯಸಂಸ್ಕಾರಕ್ಕೆ ಬರಲಿಲ್ಲ. ಕೋವಿಡ್‌ನಿಂದ ಮೃತಪಟ್ಟವರ ಅಂತ್ಯಸಂಸ್ಕಾರ ನೆರವೇರಿಸುತ್ತಿರುವ ಜಹೀರ್‌ ಅವರ ಸಹಾಯ ಪಡೆದುಕೊಂಡು ಅಂತ್ಯ ಸಂಸ್ಕಾರ ಮಾಡಲಾಗಿದೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

PREV
click me!

Recommended Stories

Dharwad Love Jihad Case: ಲವ್ ಜಿಹಾದ್‌ಗೆ ಹೆದರಿ ಬಾಲಕಿ ಸಾವು; ಪ್ರತಿಭಟನೆ ಮಾಡಿದ ಬಜರಂಗದಳ ನಾಯಕನ ಮೇಲೆ ಕೇಸ್!
Karnataka Police: ಶಾಸಕರ ಶಿಫಾರಸಿಲ್ಲದೆ ಇನ್ನು ಪೊಲೀಸ್ ವರ್ಗಾವಣೆ? ಗೃಹ ಇಲಾಖೆ ಮಹತ್ವದ ಬದಲಾವಣೆ!