ಹಿರೇಕೆರೂರ: ಎತ್ತುಗಳ ಮೈತೊಳೆಯಲು ಹೋಗಿ ನೀರಿನಲ್ಲಿ ಮುಳುಗಿ ಇಬ್ಬರು ಬಾಲಕರ ಸಾವು

Kannadaprabha News   | Asianet News
Published : Jun 30, 2021, 12:06 PM IST
ಹಿರೇಕೆರೂರ: ಎತ್ತುಗಳ ಮೈತೊಳೆಯಲು ಹೋಗಿ ನೀರಿನಲ್ಲಿ ಮುಳುಗಿ ಇಬ್ಬರು ಬಾಲಕರ ಸಾವು

ಸಾರಾಂಶ

* ಹಾವೇರಿ ಜಿಲ್ಲೆಯ ಹಿರೇಕೆರೂರ ತಾಲೂಕಿನ ದೂದಿಹಳ್ಳಿ ಗ್ರಾಮದಲ್ಲಿ ನಡೆದ ಘಟನೆ * ಬಂದಮ್ಮನ ಕೆರೆಗೆ ಎತ್ತುಗಳ ಮೈತೊಳೆಯಲು ಹೋಗಿ ನೀರುಪಾಲಾಗಿದ್ದ ಮಕ್ಕಳು *  ಮುಗಿಲು ಮುಟ್ಟಿದ ಮೃತ ಬಾಲಕರ ಪಾಲಕರ ಆಕ್ರಂದನ   

ಹಿರೇಕೆರೂರ(ಜೂ.30): ಕೆರೆಯಲ್ಲಿ ಎತ್ತುಗಳ ಮೈತೊಳೆಯಲು ಹೋಗಿ ಕಾಲು ಜಾರಿ ಮುಳುಗಿ ಇಬ್ಬರು ಬಾಲಕರು ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆಯ ಹಿರೇಕೆರೂರ ತಾಲೂಕಿನ ದೂದಿಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಅಭಿಷೇಕ ಬಸನಗೌಡ ಹಂಡೋರಿ (14) ಮತ್ತು ಹರೀಶ ಬಸವರಾಜ ಬಾಳಿಕಾಯಿ (13) ಎಂದು ಗುರುತಿಸಲಾಗಿದೆ. 

ಅಥಣಿ: ಕೃಷ್ಣಾ ನದಿಯಲ್ಲಿ ಹಾಸಿಗೆ ತೊಳೆಯಲು ಹೋಗಿ ನೀರು ಪಾಲಾಗಿದ್ದವರ ಶವ ಪತ್ತೆ

ಇಬ್ಬರು ಬಾಲಕರು ಗ್ರಾಮದ ಮಾಸೂರು ರಸ್ತೆಯಲ್ಲಿರುವ ಬಂದಮ್ಮನ ಕೆರೆಗೆ ಎತ್ತುಗಳ ಮೈತೊಳೆಯಲು ಹೋಗಿದ್ದು ಕಾಲು ಜಾರಿ ನಿರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮೃತ ಬಾಲಕರ ಪಾಲಕರ ಆಕ್ರಂದನ ಮುಗಿಲು ಮುಟ್ಟಿತ್ತು. ಬಾಲಕರ ಆಕಸ್ಮಿಕ ಮರಣದಿಂದ ಗ್ರಾಮದಲ್ಲಿ ದುಃಖ ಆವರಿಸಿತ್ತು.
 

PREV
click me!

Recommended Stories

ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
ದ್ವೇಷ ಭಾಷಣ ಪ್ರಕರಣ; ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ಗೆ ನಿರೀಕ್ಷಣಾ ಜಾಮೀನು!