ರಾಯಚೂರು: ಬೈಕ್ ಸ್ಕಿಡ್ ಆಗಿ ಬಿದ್ದು ಇಬ್ಬರ ದುರ್ಮರಣ

Suvarna News   | Asianet News
Published : Oct 15, 2021, 12:09 PM IST
ರಾಯಚೂರು: ಬೈಕ್ ಸ್ಕಿಡ್ ಆಗಿ ಬಿದ್ದು ಇಬ್ಬರ ದುರ್ಮರಣ

ಸಾರಾಂಶ

*   ರಾಯಚೂರು ತಾಲೂಕಿನ ನಲ್ಲಬಂಡಾ ಕ್ರಾಸ್ ಬಳಿ ನಡೆದ ಘಟನೆ *   ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪೊಲೀಸರು *   ಈ ಸಂಬಂಧ ಯರಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ರಾಯಚೂರು(ಅ.15):  ರಾಜ್ಯದಲ್ಲಿ ದಸರಾ(Dasara) ಹಬ್ಬದ ಸಂಭ್ರಮದ ಮಧ್ಯೆ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಹೌದು, ಬೈಕ್(Bike) ಸ್ಕಿಡ್ ಆಗಿ ಬಿದ್ದು ಇಬ್ಬರು ಮೃತಪಟ್ಟ(Death) ಘಟನೆ ತಾಲೂಕಿನ ನಲ್ಲಬಂಡಾ ಕ್ರಾಸ್ ಬಳಿ ಇಂದು(ಶುಕ್ರವಾರ) ನಡೆದಿದೆ.  ಅಪಘಾತದಲ್ಲಿ(Accident) ದೀಪಕ್ (22) , ಹುಸೇನ್ (23) ಎಂಬುವರೇ ಸಾವನ್ನಪ್ಪಿದ್ದ ದುರ್ದೈವಿಗಳಾಗಿದ್ದಾರೆ. 

ಮೃತರು ರಾಯಚೂರು(Raichur) ನಗರದ ತಿಮ್ಮಪೂರ ಪೇಟೆ ನಿವಾಸಿಗಳಾಗಿದ್ದಾರೆ ಎಂದು ತಿಳಿದು ಬಂದಿದೆ.  ಅಣ್ಣನನ್ನ ಬೈಕ್‌ನಲ್ಲಿ ಕರೆದುಕೊಂಡು ಬರಲು ಹೋದ ಸಂದರ್ಭದಲ್ಲಿ ದುರ್ಘಟನೆ ಸಂಭವಿಸಿದೆ. 

ಆಂಬುಲೆನ್ಸ್ ಏರುವಾಗ ಗಾಯಾಳು, ಶಿವಮೊಗ್ಗಕ್ಕೆ ಬಂದಾಗ ಸದ್ದಿಲ್ಲದೆ 3 ಜನ ಜೂಟ್!

ಘಟನಾ ಸ್ಥಳಕ್ಕೆ ಯರಗೇರಾ ಠಾಣೆಯ ಪೊಲೀಸರು(Police) ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಮೃತದೇಹಗಳನ್ನ(Deadbody) ರಾಯಚೂರಿನ ರಿಮ್ಸ್(RIMS) ಆಸ್ಪತ್ರೆಗೆ ‌ರವಾನೆ ಮಾಡಲಾಗಿದೆ. ಈ ಸಂಬಂಧ ಯರಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

PREV
click me!

Recommended Stories

ಗೃಹ ಲಕ್ಷ್ಮೀ ಅಡಿ 1.24 ಕೋಟಿ ಸ್ತ್ರೀಯರಿಗೆ ₹1.54 ಕೋಟಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಬೆಂಗಳೂರು : ಹೊಸ ಮಾರ್ಗಗಳಿಗೆ ಬರಲಿವೆ ಚಾಲಕ ರಹಿತ ರೈಲು