ಬೆಂಗಳೂರು: ರಂಜಾನ್ ಹಬ್ಬಕ್ಕೆ ಹೊಸ ಚಪ್ಪಲಿ ಖರೀದಿಗಾಗಿ ಬೈಕ್‌ನಲ್ಲಿ ಹೊರಟವರು ಅಪಘಾತಕ್ಕೆ ಬಲಿ..!

Published : Apr 11, 2024, 08:37 AM IST
ಬೆಂಗಳೂರು: ರಂಜಾನ್ ಹಬ್ಬಕ್ಕೆ ಹೊಸ ಚಪ್ಪಲಿ ಖರೀದಿಗಾಗಿ ಬೈಕ್‌ನಲ್ಲಿ ಹೊರಟವರು ಅಪಘಾತಕ್ಕೆ ಬಲಿ..!

ಸಾರಾಂಶ

ರಂಜಾನ್ ಹಬ್ಬದ ನಿಮಿತ್ತ ಹೊಸ ಚಪ್ಪಲಿಗಳ ಖರೀದಿಗೆ ಈ ಮೂವರು ಸ್ನೇಹಿತರು ಬೈಕ್‌ನಲ್ಲಿ ತ್ರಿಬಲ್‌ ರೈಡಿಂಗ್ ಹೋಗುವಾಗ ಈ ಘಟನೆ ನಡೆದಿದೆ.

ಬೆಂಗಳೂರು(ಏ.11):  ಬೈಕ್‌ಗೆ ಸರಕು ಸಾಗಾಣಿಕೆ ಆಟೋ ಡಿಕ್ಕಿಯಾಗಿ ಇಬ್ಬರು ಯುವಕರು ಮೃತಪಟ್ಟು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಪೀಣ್ಯ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಅಂದ್ರಹಳ್ಳಿ ನಿವಾಸಿಗಳಾದ ಫಾರೂಕ್ (18) ಹಾಗೂ ಅಬ್ರಾಹಂ ಅಹಮ್ಮದ್‌ (18) ಮೃತ ದುರ್ದೈವಿಗಳು. ಈ ಘಟನೆಯಲ್ಲಿ ಮೃತನ ಸ್ನೇಹಿತ ಸಿದ್ದಿಕ್‌ ತೀವ್ರವಾಗಿ ಗಾಯಗೊಂಡು, ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಆತ ಚಿಕಿತ್ಸೆ ಪಡೆಯುತ್ತಿದ್ದಾನೆ. ಈ ಅಪಘಾತದ ಬಳಿಕ ವಾಹನ ಬಿಟ್ಟು ಪರಾರಿ ಆಗಿರುವ ಚಾಲಕನಿಗೆ ಹುಡುಕಾಟ ನಡೆದಿದೆ. ರಂಜಾನ್ ಹಬ್ಬದ ನಿಮಿತ್ತ ಹೊಸ ಚಪ್ಪಲಿಗಳ ಖರೀದಿಗೆ ಈ ಮೂವರು ಸ್ನೇಹಿತರು ಬೈಕ್‌ನಲ್ಲಿ ತ್ರಿಬಲ್‌ ರೈಡಿಂಗ್ ಹೋಗುವಾಗ ಈ ಘಟನೆ ನಡೆದಿದೆ.

ಕಾರು-ಬೈಕ್ ನಡುವೆ ಭೀಕರ ಅಪಘಾತ; ಯುಗಾದಿ ಹಬ್ಬದಂದೇ ಹೆಡ್‌ಕಾನ್ಸ್‌ಟೇಬಲ್ ದುರ್ಮರಣ!

ಗುಜರಿ ಅಂಗಡಿಯಲ್ಲಿ ಫಾರೂಕ್ ಹಾಗೂ ಅಬ್ರಾಹಂ ಕೆಲಸ ಮಾಡುತ್ತಿದ್ದರು. ಗಾಯಾಳು ಸಿದ್ದಿಕ್‌ ಪಿಯುಸಿ ಓದುತ್ತಿದ್ದಾನೆ. ರಂಜಾನ್ ನಿಮಿತ್ತ ಉಪವಾಸ ಮುಗಿಸಿ ಮಂಗಳವಾರ ರಾತ್ರಿ ಹೊಸ ಚಪ್ಪಲಿಗೆ ಖರೀದಿಗೆ ಅಂದ್ರಹಳ್ಳಿ ಮುಖ್ಯರಸ್ತೆ ಮೂಲಕ ಪೀಣ್ಯ 2ನೇ ಹಂತಕ್ಕೆ ರಾತ್ರಿ 11 ಗಂಟೆಯಲ್ಲಿ ಈ ಮೂವರು ಗೆಳೆಯರು ತೆರಳುತ್ತಿದ್ದರು. ಅದೇ ವೇಳೆ ಎದುರಿಗೆ ಬಂದ ಟಾಟಾ ಏಸ್‌ ಆಟೋ ಚಾಲಕ ನಿಯಂತ್ರಣ ತಪ್ಪಿ ಬೈಕ್‌ಗೆ ಗುದ್ದಿಸಿದ್ದಾನೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡು ಫಾರೂಕ್ ಹಾಗೂ ಅಬ್ರಾಹಂ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

PREV
Read more Articles on
click me!

Recommended Stories

ಕಾರವಾರ ಕರಾವಳಿಯಲ್ಲಿ ಸಾಂಪ್ರದಾಯಿಕ ಬೇಟೆಗೆ ಬಿದ್ದ ಬಂಗಾರ! ರಾಶಿ ರಾಶಿ ಮೀನು ನೋಡಿ ಮೀನುಗಾರರು ಫುಲ್ ಖುಷ್!
Bengaluru ಬೀದಿ ಬದಿ ವ್ಯಾಪಾರಕ್ಕೆ ಸರ್ಕಾರದ ಮಾಸ್ಟರ್ ಪ್ಲಾನ್, ಕನ್ನಡಿಗರು ಓಕೆ! ಹಿಂದಿಗರು ಯಾಕೆ?