ಮಂಡ್ಯ: ಮೈಸೂರು-ಬೆಂಗಳೂರು ಎಕ್ಸಪ್ರೆಸ್‌ವೇನಲ್ಲಿ ಭೀಕರ ಅಪಘಾತ, ಸ್ಥಳದಲ್ಲೇ ಇಬ್ಬರ ದುರ್ಮರಣ

By Girish GoudarFirst Published Jan 14, 2024, 10:48 AM IST
Highlights

ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದ ಶಿಂಷಾ ನದಿ ಬಳಿಯ ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ಮೃತರನ್ನ ಶಂಕರ್ ಹಾಗೂ ಮಹದೇವು ಎಂದು ಗುರುತಿಸಲಾಗಿದೆ. ಮೃತರು ಬೆಂಗಳೂರಿನ ಐಸಿಐಸಿಐ ಬ್ಯಾಂಕ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದರು. 

ಮಂಡ್ಯ(ಜ.14):  ಚಾಲಕನ ನಿಯಂತ್ರಣ ತಪ್ಪಿದ ಕಾರು ಶಿಂಷಾ ನದಿ ಸೇತುವೆ ಮೇಲೆಯೇ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಬಳಿಕ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರ ಸಾವನ್ನಪ್ಪಿ, ಮತ್ತೊಬ್ಬನ ಸ್ಥಿತಿ ಗಂಭೀರವಾದ ಘಟನೆ. ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯಲ್ಲಿ ಇಂದು(ಭಾನುವಾರ) ನಡೆದಿದೆ. 

ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದ ಶಿಂಷಾ ನದಿ ಬಳಿಯ ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ಮೃತರನ್ನ ಶಂಕರ್ ಹಾಗೂ ಮಹದೇವು ಎಂದು ಗುರುತಿಸಲಾಗಿದೆ. ಮೃತರು ಬೆಂಗಳೂರಿನ ಐಸಿಐಸಿಐ ಬ್ಯಾಂಕ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ. 

ತುಮಕೂರು: ದ್ವಿಚಕ್ರವಾಹನಗಳಿಗೆ ಕಾರು ಡಿಕ್ಕಿ, ಇಬ್ಬರು ವಿದ್ಯಾರ್ಥಿಗಳ ಸಾವು

ದುರ್ಘಟನೆಯಲ್ಲಿ ಕಿಶೋರ್‌ ಎಂಬುವರಿಗೆ ಗಂಭೀರವಾದ ಗಾಯವಾದ ಹಿನ್ನಲೆಯಲ್ಲಿ ಮಂಡ್ಯದ ಮಿಮ್ಸ್‌ನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮೂವರು ಮೈಸೂರಿನಿಂದ ಬೆಂಗಳೂರಿಗೆ ತೆರಳಿದ್ದರು. ಮೈಸೂರು ಕಡೆಗೆ ಹೋಗುವ ರಸ್ತೆಗೆ ಹೋಗಿ ಕಾರು ಮಗುಚಿ ಬಿದ್ದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. 

ಡಿಕ್ಕಿಯ ರಭಸಕ್ಕೆ ಮ್ಯಾನೇಜರ್ ಶಂಕರ್ ಹಾಗೂ ಮಹದೇವು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಿಶೋರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ.  ಘಟನಾ ಸ್ಥಳಕ್ಕೆ ಮದ್ದೂರು ಸಂಚಾರಿ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಮದ್ದೂರು ಸಂಚಾರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

click me!