ಹಗರಿಬೊಮ್ಮನಹಳ್ಳಿ: ತೆಪ್ಪ ಮಗುಚಿ ಮದು​ಮಗ ಸೇರಿ ಇಬ್ಬರ ದುರ್ಮರಣ

Kannadaprabha News   | Asianet News
Published : Jun 08, 2020, 08:23 AM IST
ಹಗರಿಬೊಮ್ಮನಹಳ್ಳಿ: ತೆಪ್ಪ ಮಗುಚಿ ಮದು​ಮಗ ಸೇರಿ ಇಬ್ಬರ ದುರ್ಮರಣ

ಸಾರಾಂಶ

ತೆಪ್ಪ ಮಗುಚಿ ನೀರುಪಾಲಾದ ಇಬ್ಬರು ಯುವಕರು|ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ತುಂಗಭದ್ರಾ ಹಿನ್ನೀರಿನಲ್ಲಿ ನಡೆದ ಘಟನೆ| ತೆಪ್ಪದಲ್ಲಿ ಬೈಕ್‌ ಹಾಕಿಕೊಂಡು ನದಿ ದಾಟುತ್ತಿದ್ದಾಗ ಆಯತಪ್ಪಿ ತೆಪ್ಪ ಮಗುಚಿ ಬಿದ್ದು ನಡೆದ ದುರ್ಘಟನೆ| 

ಹಗರಿಬೊಮ್ಮನಹಳ್ಳಿ(ಜೂ.08): ಸ್ನೇಹಿತನ ಜೊತೆ ತನ್ನ ಮದುವೆಯ ಆಮಂತ್ರಣ ಪತ್ರಿಕೆ ನೀಡಲು ತೆರಳುತ್ತಿದ್ದಾಗ ತೆಪ್ಪ ಮಗುಚಿ ಇಬ್ಬರೂ ನೀರುಪಾಲಾದ ಘಟನೆ ಭಾನುವಾರ ಬಳ್ಳಾರಿಯ ಹಗರಿಬೊಮ್ಮನಹಳ್ಳಿ ತಾಲೂಕಿನ ತುಂಗಭದ್ರಾ ಹಿನ್ನೀರಿನಲ್ಲಿ ನಡೆದಿದೆ. 

ಮೃತರನ್ನ ಫಕ್ರುದ್ಧೀನ್‌(28) ಹಾಗೂ ಹೊನ್ನೂರ್‌ಸಾಬ್‌(18) ಎಂದು ಗುರುತಿಸಲಾಗಿದೆ. 

ಕಂಪ್ಲಿ: ಹೆಂಡ್ತಿ ಕೊಲೆಗೈದ ಆರೋಪ, ನೇಣಿಗೆ ಶರಣಾದ ಗಂಡ

ತಾಲೂಕಿನ ಸೀಗೇನಹಳ್ಳಿ 1ನೇ ಕಾಲೋನಿಯ ಯುವಕ ಫಕ್ರುದ್ಧೀನ್‌(28) ವಿವಾಹ ಜೂ.14ರಂದು ನಿಗ​ದಿ​ಯಾ​ಗಿ​ತ್ತು. ಈ ಹಿನ್ನೆಲೆಯಲ್ಲಿ ಆಹ್ವಾನ ಪತ್ರಿಕೆಗಳನ್ನು ಸಂಬಂಧಿಗಳಿಗೆ ಕೊಡಲು ಸ್ನೇಹಿತ ಹೊನ್ನೂರ್‌ಸಾಬ್‌(18)ನ ಜತೆಗೆ ಕರೆದುಕೊಂಡು ತೆಪ್ಪದಲ್ಲಿ ಬೈಕ್‌ ಹಾಕಿಕೊಂಡು ನದಿ ದಾಟುತ್ತಿದ್ದಾಗ ಆಯತಪ್ಪಿ ತೆಪ್ಪ ಮಗುಚಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
 

PREV
click me!

Recommended Stories

ಸರ್ಕಾರ ಮೌನ, ದೇವ್ರೇ ಗತಿ ಎಂದು ನಾಯಿ ಹಾವಳಿಯಿಂದ ಮುಕ್ತಿ ಕೋರಿ ಬೆಂಗಳೂರಿಗರ ವಿಶೇಷ ಪೂಜೆ
ಕೊಲ್ಲಾಪುರ ಜ್ಯೋತಿಬಾ ದೇಗುಲದ ಅರ್ಚಕರಿಂದ ಹಲ್ಲೆ; ದೇವರ ಮುಂದೆ ಒಡೆಯುವ 'ತೆಂಗಿನಕಾಯಿ' ಭಕ್ತರ ತಲೆಗೆ ಹೊಡೆದರು!