ಮಸ್ಕಿ: ತುತ್ತಿನ ಚೀಲ ತುಂಬಿಸಿಕೊಳ್ಳಲು ಹೈದರಾಬಾದ್‌ನಿಂದ ಬಂದಿದ್ದ ಇಬ್ಬರು ಯುವಕರ ಸಾವು

Kannadaprabha News   | Asianet News
Published : Oct 30, 2020, 03:35 PM IST
ಮಸ್ಕಿ: ತುತ್ತಿನ ಚೀಲ ತುಂಬಿಸಿಕೊಳ್ಳಲು ಹೈದರಾಬಾದ್‌ನಿಂದ ಬಂದಿದ್ದ ಇಬ್ಬರು ಯುವಕರ ಸಾವು

ಸಾರಾಂಶ

ಮದುವೆ ಕಾರ್ಯಕ್ರಮಕ್ಕೆ ದೀಪಾಲಂಕಾರ ಕೆಲಸ ಮಾಡಲು ಹೈದ್ರಾಬಾದ್‌ನಿಂದ ಬಂದಿದ್ದ ಇಬ್ಬರು ಯುವಕರ ಸಾವು| ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಶಂಕರನಗರ ಕ್ಯಾಂಪ್‌ ಹತ್ತಿರ ನಡೆದ ಘಟನೆ| ಕವಿತಾಳ ಠಾಣೆ ಪೊಲೀಸರು ಹಾಗೂ ಅಗ್ನಿ ಶಾಮಕ ಇಲಾಖೆ ಸಿಬ್ಬಂದಿಯಿಂದ ಶೋಧ ಕಾರ್ಯ|   

ಮಸ್ಕಿ(ಅ.30): ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಶಂಕರನಗರ ಕ್ಯಾಂಪ್‌ ಹತ್ತಿರ 62ನೇ ತುಂಗಭದ್ರಾ ಉಪ ಕಾಲುವೆಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರು ಪಾಲಾಗಿರುವ ಘಟನೆ ಗುರುವಾರ ಜರುಗಿದೆ. 

ಸಮೀಪದ ಶಂಕರನಗರ ಕ್ಯಾಂಪ್‌ನಲ್ಲಿ ಮದುವೆ ಕಾರ್ಯಕ್ರಮಕ್ಕೆ ದೀಪಾಲಂಕಾರ (ಎಲೆಕ್ಟ್ರಿಕಲ್‌) ಕೆಲಸ ಮಾಡಲು ಹೈದ್ರಾಬಾದ್‌ನಿಂದ ಬಂದಿದ್ದ ದಯಾ (18) ಮತ್ತು ಶಿವ (19) ಇಬ್ಬರು ಯುವಕರು ಈಜಾಡಲು 62ನೇ ಉಪ ಕಾಲುವೆ ಹೋಗಿದ್ದರು. ಆದರೆ ಕಾಲುವೆಯಲ್ಲಿ ಮೊದಲು ಒಬ್ಬ ಯುವಕ ನೀರಿನ ಆಳ ಗೊತ್ತಾಗದೆ ಇಳಿದ ನಂತರ ಕಾಲುವೆಯಲ್ಲಿ ಮುಳುಗುತ್ತಿರುವುದನ್ನು ಕಂಡು ಇನ್ನೊಬ್ಬ ಯುವಕ ಆತನ ರಕ್ಷಣೆ ಮಾಡಲು ಕಾಲುವೆಗೆ ಇಳಿದಿದ್ದಾನೆ. 

ಅಚಿವರ್ಸ್‌ ಬುಕ್‌ ಆಫ್‌ ರೆಕಾರ್ಡ್ಸ್‌ನಲ್ಲಿ ಸ್ಥಾನ ಪಡೆದ ಸಿಂಧನೂರಿನ ಬಾಲೆ

ಆದರೆ ಇಬ್ಬರೂ ಕಾಲುವೆಯ ನೀರಿನಲ್ಲಿ ನಾಪತ್ತೆಯಾಗಿದ್ದು. ಸ್ಥಳಕ್ಕೆ ಕವಿತಾಳ ಠಾಣೆ ಪೊಲೀಸರು ಹಾಗೂ ಅಗ್ನಿ ಶಾಮಕ ಇಲಾಖೆ ಸಿಬ್ಬಂದಿಗಳು ಧಾವಿಸಿ ಶೋಧ ಕಾರ್ಯ ನಡೆಸುತ್ತಿದ್ದಾರೆ.
 

PREV
click me!

Recommended Stories

ವಿಧಾನಸಭೆಯಲ್ಲಿ ಸಿಎಂ ಕುರ್ಚಿಯದ್ದೇ ಗುದ್ದಾಟ: ಬೈರತಿ 'ಕಿಂಗ್ ಅಲೈವ್' ಅಂದಿದ್ದು ಯಾಕೆ? ಆರ್ ಅಶೋಕ್, ಬೈರತಿ ವಾಕ್ಸಮರ!
Video: ಚಲಿಸುವ BMTC ಬಸ್ಸಲ್ಲಿ ಸ್ಟೇರಿಂಗ್ ಹಿಡಿದು ಡ್ರೈವರ್‌ಗಳ ಕಿತ್ತಾಟ; ಪ್ರಯಾಣಿಕರಿಗೆ ಪ್ರಾಣ ಸಂಕಟ!