ಕೊಪ್ಪಳ: ಗವಿಸಿದ್ದೇಶ್ವರ ಜಾತ್ರೆಗೆ ತೆರಳಿದ್ದ ಬೈಕ್‌ ಅಪಘಾತ, ಇಬ್ಬರು ಯುವಕರ ಸಾವು

Kannadaprabha News   | Asianet News
Published : Feb 01, 2021, 10:50 AM IST
ಕೊಪ್ಪಳ: ಗವಿಸಿದ್ದೇಶ್ವರ ಜಾತ್ರೆಗೆ ತೆರಳಿದ್ದ ಬೈಕ್‌ ಅಪಘಾತ, ಇಬ್ಬರು ಯುವಕರ ಸಾವು

ಸಾರಾಂಶ

ಬೈಕ್‌-ಲಾರಿ ನಡುವೆ ಅಪಘಾತ: ಇಬ್ಬರ ಸಾವು| ಕೊಪ್ಪಳ ತಾಲೂಕಿನ ಕೋಳೂರು ಕ್ರಾಸ್‌ ಬಳಿ ನಡೆದ ಘಟನೆ| ಜಾತ್ರೆಗೆಂದು ಕುಕನೂರಿನಿಂದ ಕೊಪ್ಪಳಕ್ಕೆ ಆಗಮಿಸಿದ್ದ ಯುವಕರು| ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಕೊಪ್ಪಳ ಗ್ರಾಮೀಣ ಪೊಲೀಸ್‌ ಠಾಣೆಯ ಪೊಲೀಸರು| 

ಕೊಪ್ಪಳ(ಫೆ.01): ತಾಲೂಕಿನ ಕೋಳೂರು ಕ್ರಾಸ್‌ ಬಳಿ ಲಾರಿ-ಬೈಕ್‌ ನಡುವೆ ನಡೆದ ಅಪಘಾತದಲ್ಲಿ ಇಬ್ಬರು ಮೃತಪಟ್ಟ ಘಟನೆ ಭಾನುವಾರ ಸಂಭ​ವಿ​ಸಿದೆ. ಮೃತರನ್ನು ಕುಕನೂರು ಪಟ್ಟಣದ ಗಣೇಶ (21) ಹಾಗೂ ರಾಧಿಕಾ (19) ಎಂದು ಗುರುತಿಸಲಾಗಿದೆ. 

ಇವರು ಜಾತ್ರೆಗೆಂದು ಕೊಪ್ಪಳಕ್ಕೆ ಆಗಮಿಸಿದ್ದರು. ಆದರೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಲಾರಿಗೆ ಡಿಕ್ಕಿ ಹೊಡೆ​ದು ಇಬ್ಬರು ಸ್ಥಳದಲ್ಲಿಯೇ ಮೃತ​ಪ​ಟ್ಟಿ​ದ್ದಾರೆ.

ಹೊಸಪೇಟೆ: ಬೈಕ್‌ನಿಂದ ಬಿದ್ದು ಕೊಪ್ಪಳದ ಯುವಕರಿಬ್ಬರ ದುರ್ಮರಣ

ದುರ್ಘಟನೆ ನಡೆದ ಸ್ಥಳಕ್ಕೆ ಕೊಪ್ಪಳ ಗ್ರಾಮೀಣ ಪೊಲೀಸ್‌ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.


 

PREV
click me!

Recommended Stories

ಭದ್ರಾವತಿಯಲ್ಲಿ ದಂಪತಿಗಳ ಅನುಮಾನಾಸ್ಪದ ಸಾವು: ವೈದ್ಯರು ನೀಡಿದ ಇಂಜೆಕ್ಷನ್ ಪ್ರಾಣಕ್ಕೆ ಕುತ್ತು ತಂದಿತೇ?
ಮೈಸೂರು-ಕೇರಳ ನಡುವೆ 'ನಕಲಿ ಲೈಸೆನ್ಸ್' ಮಾಫಿಯಾ: ಆರ್‌ಟಿಒ ಅಧಿಕಾರಿಗಳ ಅಮಾನತು; ವಿಜಿಲೆನ್ಸ್ ತನಿಖೆಗೆ ಶಿಫಾರಸು!