ತುಮಕೂರು: ಬೆಳಕಿನ ಹಬ್ಬದಂದೇ ಆವರಿಸಿದ ಕತ್ತಲು, ಬಾವಿಯಲ್ಲಿ ಈಜಲು ಹೋದ ಇಬ್ಬರು ಯುವಕರ ದುರ್ಮರಣ

Published : Nov 01, 2024, 10:21 PM ISTUpdated : Nov 01, 2024, 10:22 PM IST
ತುಮಕೂರು: ಬೆಳಕಿನ ಹಬ್ಬದಂದೇ ಆವರಿಸಿದ ಕತ್ತಲು, ಬಾವಿಯಲ್ಲಿ ಈಜಲು ಹೋದ ಇಬ್ಬರು ಯುವಕರ ದುರ್ಮರಣ

ಸಾರಾಂಶ

ಗ್ರಾಮಸ್ಥರ ಸಹಕಾರದೊಂದಿಗೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಶವಗಳನ್ನ ಹೊರತೆಗೆದಿದ್ದಾರೆ.  ಶವ ಪರೀಕ್ಷೆಗಾಗಿ ತುಮಕೂರು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 

ತುಮಕೂರು(ನ.01):  ಬಾವಿಯಲ್ಲಿ ಈಜಾಡಲು ಹೋದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಗರದ ಹೊರವಲಯದ ಬೆಳಗುಂಬ ಬಳಿ ಇಂದು(ಶುಕ್ರವಾರ) ನಡೆದಿದೆ. ಯಶವಂತ (17), ಮೊಹಮ್ಮದ್ ಸುಹೇಲ್ (17) ಸಾವನ್ನಪ್ಪಿದ ಯುವಕರು.

ತುಮಕೂರು ಹೊರವಲಯದ ಬೆಳಗುಂಬ ತಾಂಡ್ಯದ ವಾಸಿ ಶ್ರೀನಿವಾಸ್‌ನ ಮಗ ಯಶವಂತ್ ಹಾಗೂ ವಡ್ಡರಹಳ್ಳಿ ಗ್ರಾಮದ ವಾಸಿ ಬಾಬಾ ಜಾನ್‌ನ ಮಗ ಮೊಹಮ್ಮದ್ ಸುಹೇಲ್ ಮಗ.

ಒಂದೊಂದೆ ಗ್ಯಾರಂಟಿ ವಾಪಸ್ ಪಡೆಯಲು ಕಾಂಗ್ರೆಸ್‌ ಪ್ಲ್ಯಾನ್‌: ಕೇಂದ್ರ ಸಚಿವ ಕುಮಾರಸ್ವಾಮಿ

ತುಮಕೂರು ಹೊರವಲಯದ ಬೆಳಗುಂಬ ಗ್ರಾಮದ ಕೃಷ್ಣಪ್ಪ ಅವರಿಗೆ ಸೇರಿದ ಬಾವಿಯಲ್ಲಿ ಈ ದುರ್ಘಟನೆ ಸಂಭವಿಸಿದೆ.  ಗ್ರಾಮಸ್ಥರ ಸಹಕಾರದೊಂದಿಗೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಶವಗಳನ್ನ ಹೊರತೆಗೆದಿದ್ದಾರೆ. ಶವ ಪರೀಕ್ಷೆಗಾಗಿ ತುಮಕೂರು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 

PREV
Read more Articles on
click me!

Recommended Stories

ನಮ್ಮನ್ನು ಗುಲಾಮರನ್ನಾಗಿಸಿ ಹಿಂದೂ ಧರ್ಮ ಸೃಷ್ಟಿಸಿದ್ದು ಬ್ರಾಹ್ಮಣರು: ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿ
ಅಂಕಣ | ರಾಜ್ಯದಲ್ಲಿ ಕಾಂಗ್ರೆಸ್‌ನಿಂದ ಉದ್ಯೋಗದ ನವಯುಗ!