ಮಂಡ್ಯ: ನಾಲೆಯಲ್ಲಿ ಈಜಲು ಹೋದ ಇಬ್ಬರು ನೀರುಪಾಲು

Suvarna News   | Asianet News
Published : Apr 22, 2021, 02:38 PM IST
ಮಂಡ್ಯ: ನಾಲೆಯಲ್ಲಿ ಈಜಲು ಹೋದ ಇಬ್ಬರು ನೀರುಪಾಲು

ಸಾರಾಂಶ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ನಾರ್ತ್ ಬ್ಯಾಂಕ್ ಬಳಿ ನಡೆದ ಘಟನೆ| ಕೆಆರ್‌ಎಸ್ ಸಮೀಪದ ಶ್ರೀ ಕಾಳಮ್ಮ ದೇವಸ್ಥಾನಕ್ಕೆ ಪೂಜೆಗೆಂದು ಬಂದಿದ್ದ ಯುವಕರು| ಈ ಸಂಬಂಧ ಕೆಆರ್‌ಎಸ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು| 

ಮಂಡ್ಯ(ಏ.22): ವಿಶ್ವೇಶ್ವರಯ್ಯ ನಾಲೆಯಲ್ಲಿ ಈಜಲು ಹೋದ ಯುವಕರಿಬ್ಬರು ನೀರು ಪಾಲಾದ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ನಾರ್ತ್ ಬ್ಯಾಂಕ್ ಬಳಿ ಇಂದು(ಗುರುವಾರ) ನಡೆದಿದೆ.

ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಮಲ್ಲಿನಾಥಪುರದ ಬಸವೇಗೌಡ ಮತ್ತು ಜವರೇಗೌಡ ನೀರುಪಾಲಾದ ಯುವಕರಾಗಿದ್ದಾರೆ ಎಂದು ತಿಳಿದು ಬಂದಿದೆ.

ಕೈ-ಜೆಡಿಎಸ್ ದೋಸ್ತಿಗೆ ಬಂಪರ್ : ಬಿಜೆಪಿಗೆ ಮುಖಭಂಗ-'ಕಣ್ಮರೆ ಖಚಿತ'

ಕೆಆರ್‌ಎಸ್ ಸಮೀಪದ ಶ್ರೀ ಕಾಳಮ್ಮ ದೇವಸ್ಥಾನಕ್ಕೆ ಪೂಜೆಗೆಂದು ಬಂದಿದ್ದ ಯುವಕರು ವಿಶ್ವೇಶ್ವರಯ್ಯ ನಾಲೆಯಲ್ಲಿ ಈಜಲು ತೆರಳಿದ್ದ ಸಮಯದಲ್ಲಿ ಈ ದುರ್ಘಟನೆ ಸಂಭವಿಸಿದೆ. ನಾಲೆಯಲ್ಲಿ 2500 ಕ್ಯೂಸೆಕ್ ನೀರು ಹರಿಯುತ್ತಿರುವುದನ್ನು ಗಮನಿಸದೆ ನೀರಿಗಿಳಿದ ವೇಳೆ ಇಬ್ಬರೂ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಮೃತ ಯುವಕರಲ್ಲಿ ಓರ್ವನ ಶವ ಪತ್ತೆಯಾಗಿದ್ದು ಮತ್ತೊಬ್ಬನ ಶವಕ್ಕಾಗಿ ಹುಡುಕಾಟ ನಡೆದಿದ. ಈ ಸಂಬಂಧ ಕೆಆರ್‌ಎಸ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
 

PREV
click me!

Recommended Stories

ಬೆಂಗಳೂರು ಜನರಿಗೆ ಹೊಟ್ಟೆತುಂಬಾ ಬಿರಿಯಾನಿ ಬಾಡೂಟ ಕೊಟ್ಟ ಕುಟುಂಬ ಸಾಲದ ಸುಳಿಗೆ ಸಿಲುಕಿ ಆತ್ಮ*ಹತ್ಯೆ!
ಗಡೀಪಾರು ಸಂಕಷ್ಟದಲ್ಲಿ Mahesh Shetty Timarodi: ಎಸಿ ಕೋರ್ಟ್‌ಗೆ ಹಾಜರಾಗುವ ಮುನ್ನ ಮಹಾಲಿಂಗೇಶ್ವರ ದೇಗುಲದಲ್ಲಿ ಪ್ರಾರ್ಥನೆ