ಉಡುಪಿ: ಪೌರಕಾರ್ಮಿಕರಿಗೆ ರಾಖಿ ಕಟ್ಟಿದ ಬಿಜೆಪಿ ಸದಸ್ಯರು

Published : Aug 17, 2019, 01:19 PM IST
ಉಡುಪಿ: ಪೌರಕಾರ್ಮಿಕರಿಗೆ ರಾಖಿ ಕಟ್ಟಿದ ಬಿಜೆಪಿ ಸದಸ್ಯರು

ಸಾರಾಂಶ

ಉಡುಪಿಯಲ್ಲಿ ರಕ್ಷಾಬಂಧನ ಆಚರಿಸಿದ ಬಿಜೆಪಿ ಮಹಿಳಾ ಮೋರ್ಚಾ ಸದಸ್ಯರು ಪೌರ ಕಾರ್ಮಿಕರಿಗೆ ರಾಖಿ ಕಟ್ಟಿದ್ದಾರೆ. ಮಹಿಳಾ ಮೋರ್ಚಾದ ಸದಸ್ಯೆಯರು ಪೌರ ಕಾರ್ಮಿಕರಿಗೆ ಹಾಗೂ ಸ್ವಚ್ಛತಾ ಸಿಬ್ಬಂದಿಗೆ ರಾಖಿ ಕಟ್ಟಿ ಸಿಹಿ ಹಂಚಿದರು.

ಉಡುಪಿ(ಆ.17): ಬೈಂದೂರಿನಲ್ಲಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಮರವಂತೆಯ ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆ ಘಟಕದಲ್ಲಿ ರಕ್ಷಾ ಬಂಧನ ಕಾರ್ಯಕ್ರಮ ಗುರುವಾರ ನಡೆಯಿತು.

ಬೈಂದೂರಿನ ಬಿಜೆಪಿ ಮಹಿಳಾ ಮೋರ್ಚಾದ ಸದಸ್ಯೆಯರು ಪೌರ ಕಾರ್ಮಿಕರಿಗೆ ಹಾಗೂ ಸ್ವಚ್ಛತಾ ಸಿಬ್ಬಂದಿಗೆ ರಾಖಿ ಕಟ್ಟಿದರು. ನಂತರ ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದರು.

ಮಂಗಳೂರು: ಬೀಟ್‌ ಪೊಲೀಸ್ ಜೊತೆ ಬೀಟ್‌ ನಡೆಸಿದ ಕಮಿಷನರ್‌!

ಬೈಂದೂರು ಮಹಿಳಾ ಮೋರ್ಚಾದ ಅಧ್ಯಕ್ಷೆ ಪ್ರಿಯದರ್ಶಿನಿ ಬೆಸ್ಕೂರು, ಮರವಂತೆ ಪಂಚಾಯತ್‌ ಅಧ್ಯಕ್ಷೆ ಅರ್‌.ಕೆ.ಅನಿತಾ, ಮಹಿಳಾ ಮೋರ್ಚಾದ ಸದಸ್ಯರಾದ ಭಾಗೀರಥಿ ಸುರೇಶ್‌, ಸುನಂದಾ ಗಾಣಿಗ ಮೊದಲಾದವರು ಭಾಗವಹಿಸಿದ್ದರು.

PREV
click me!

Recommended Stories

Jagadish Shettar: ಬೆಳಗಾವಿ, ಕಳಸಾ-ಬಂಡೂರಿ, ರೈಲ್ವೆ ಯೋಜನೆಗಳ ಬಗ್ಗೆ ಸಂಸದ ಶೆಟ್ಟರ್ ನೀಡಿದ ಭರವಸೆ ಏನು?
Hulikal Ghat Landslide: ಹುಲಿಕಲ್ ಘಾಟ್‌ನಲ್ಲಿ ವಾಹನಗಳ ಸಂಚಾರ ಆರಂಭ; ತೀರ್ಥಹಳ್ಳಿ-ಕುಂದಾಪುರ ಸಂಪರ್ಕ ಪುನಾರಂಭ!