ದಿನದೊಳಗೆ ಉಡುಪಿ ಜಿಲ್ಲೆಯಲ್ಲಿ ಎಸ್ಪಿ ಬದಲು!

Kannadaprabha News   | Asianet News
Published : Jan 02, 2020, 08:43 AM IST
ದಿನದೊಳಗೆ ಉಡುಪಿ ಜಿಲ್ಲೆಯಲ್ಲಿ ಎಸ್ಪಿ ಬದಲು!

ಸಾರಾಂಶ

ರಾಜ್ಯದ ಗೃಹಸಚಿವರೇ ಉಸ್ತುವಾರಿಯಾಗಿರುವ ಉಡುಪಿ ಜಿಲ್ಲೆಯಲ್ಲಿ ಒಂದೇ ದಿನದಲ್ಲಿ ಎಸ್ಪಿ ಅವರ ವರ್ಗಾವಣೆಯನ್ನು ರದ್ದುಗೊಳಿಸುವ ಗೃಹ ಇಲಾಖೆಯ ಆದೇಶ ಅಚ್ಚರಿಗೆ ಕಾರಣವಾಗಿದೆ.

ಉಡುಪಿ(ಜ.02): ಉಡುಪಿಯ ಹೊಸ ಎಸ್ಪಿಯಾಗಿ ಕಲಬುರ್ಗಿ ಎಎಸ್ಪಿ ಅಕ್ಷಯ್‌ ಹಾಕೆ ಮಚ್ಚಿಂದ್ರ ಅವರ ವರ್ಗಾವಣೆಯನ್ನು ರದ್ದುಗೊಳಿಸಿ, ಅವರ ಬದಲಿಗೆ, ಬೆಂಗಳೂರು ನಗರ ಉಪಾಯುಕ್ತ (ಆಡಳಿತ)ರಾಗಿರುವ ಎನ್‌.ವಿಷ್ಣುವರ್ಧನ್‌ ಅವರನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಲಾಗಿದೆ.

ರಾಜ್ಯದ ಗೃಹಸಚಿವರೇ ಉಸ್ತುವಾರಿಯಾಗಿರುವ ಉಡುಪಿ ಜಿಲ್ಲೆಯಲ್ಲಿ ಒಂದೇ ದಿನದಲ್ಲಿ ಎಸ್ಪಿ ಅವರ ವರ್ಗಾವಣೆಯನ್ನು ರದ್ದುಗೊಳಿಸುವ ಗೃಹ ಇಲಾಖೆಯ ಆದೇಶ ಅಚ್ಚರಿಗೆ ಕಾರಣವಾಗಿದೆ.

ಪಂಪ್‌ವೆಲ್‌ ಮೇಲ್ಸೇತುವೆ ಕಾಮಗಾರಿ ಮುಗಿಯಲು ಕನಿಷ್ಠ 3 ತಿಂಗಳು..!

ಕಳೆದ ಫೆಬ್ರವರಿ ತಿಂಗಳಲ್ಲಿ ನಿಷಾ ಜೇಮ್ಸ್‌ ಅವರು ಉಡುಪಿಯ ಎಸ್ಪಿಯಾಗಿ ಬಂದಿದ್ದರು. ಆದರೆ ವರ್ಷ ಕಳೆಯುವದೊಳಗೆ ಅವರನ್ನು ವರ್ಗಾವಣೆ ಮಾಡಿ, ಮಂಗಳವಾರ ಅವರ ಜಾಗಕ್ಕೆ ಅಕ್ಷಯ್‌ ಹಾಕೆ ಮಚ್ಚಿಂದ್ರ ಅವರನ್ನು ಆದೇಶಿಸಲಾಗಿತ್ತು. ಅವರು ಉಡುಪಿಗೆ ಬಂದು ಅಧಿಕಾರ ಸ್ವೀಕಾರಕ್ಕೆ ಮೊದಲೇ ಅವರನ್ನು ಕಾರ್ಕಳದ ನಕ್ಸಲ್‌ ನಿಗ್ರಹ ಪಡೆಗೆ ಎಸ್ಪಿಯಾಗಿ ವರ್ಗ ಮಾಡಲಾಗಿದೆ.

ಉಡುಪಿ ಎಸ್ಪಿಯಾಗಿ ವಿಷ್ಣುವರ್ಧನ್‌ ಅವರನ್ನು ವರ್ಗಗೊಳಿಸಲಾಗಿದೆ. 2015ನೇ ಬ್ಯಾಚಿನ ಅಧಿಕಾರಿಯಾಗಿರುವ ಅವರು ಈ ಹಿಂದೆ ಕಾರ್ಕಳದ ಎಎಸ್ಪಿಯಾಗಿ ಸೇವೆ ಸಲ್ಲಿಸಿದ್ದರು.

ವಿದೇಶದಿಂದ ಬಂದ ಮೇಸೇಜ್‌ಗಳಿಂದ ಮಂಗಳೂರಲ್ಲಿ ಗಲಭೆ..?

PREV
click me!

Recommended Stories

ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್‌ಗೆ ಜೀವಭಯ? ಗುಪ್ತಚರ ವರದಿಯಲ್ಲಿ ಶಾಕಿಂಗ್ ಮಾಹಿತಿ
Karnataka SIR: ಮುರಾ ಗ್ರಾಮ ಮರ, ಟ್ರೀ ಬರೆದು ಎಡವಟ್ಟು, ಎಸ್‌ಐಆರ್ ಕನ್ನಡಲ್ಲೇ ನಡೆಸಲು ಕರವೇ ಆಗ್ರಹ