ಭೇಟಿಗೆ ಸಿಗದ ಶಾ: ಸಚಿವ ಸ್ಥಾನ ಕೊಡೋವರೆಗೂ ಕಾಯ್ತೇವೆ, ನೂತನ ಶಾಸಕರು

Published : Jan 19, 2020, 07:55 AM ISTUpdated : Jan 19, 2020, 08:04 AM IST
ಭೇಟಿಗೆ ಸಿಗದ ಶಾ: ಸಚಿವ ಸ್ಥಾನ ಕೊಡೋವರೆಗೂ ಕಾಯ್ತೇವೆ, ನೂತನ ಶಾಸಕರು

ಸಾರಾಂಶ

ಜಾರಕಿಹೊಳಿ ಟೀಂ ಮುನಿಸು| ಅಸಮಾಧಾನಗೊಂಡ ನೂತನ ಶಾಸಕರು| ನಾನೂ ಸಚಿವ ಸ್ಥಾನದ ಆಕ್ಷಾಂಕಿ. ಅವಕಾಶ ಕೊಡುವ ತನಕ ಕಾಯುತ್ತೇವೆ| ಸಚಿವ ಸ್ಥಾನ ಕೊಡುತ್ತೇವೆ ಎಂದು ಮುಖ್ಯಮಂತ್ರಿ ಭರವಸೆ ನೀಡಿದ್ದು ಕೊಡುವರೆಗೂ ಕಾಯುತ್ತೇವೆ|

ಹುಬ್ಬಳ್ಳಿ(ಜ.19): ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೆ ಉಪಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿ ಸಚಿವ ಸ್ಥಾನದ ನಿರೀಕ್ಷೆಯಲ್ಲಿರುವ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಮತ್ತು ಅವರ ತಂಡಕ್ಕೆ ಹುಬ್ಬಳ್ಳಿಯಲ್ಲಿ ಶನಿವಾರ ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಭೇಟಿ ಸಾಧ್ಯವಾಗದೆ ನಿರಾಶೆಯಾಯಿತು.

ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಶನಿವಾರ ಸಂಜೆ ನಗರದಲ್ಲಿ ನಡೆದ ಜಾಗೃತಿ ಸಮಾವೇಶದಲ್ಲಿ ಭಾಗವಹಿಸಿದ ಬಳಿಕ ಇಲ್ಲಿನ ಡೆನಿಸನ್‌ ಹೋಟೆಲ್‌ನಲ್ಲಿ ತಂಗಿದ್ದ ಅಮಿತ್‌ ಶಾ ಅವರನ್ನು ಭೇಟಿ ಮಾಡಿ ಸಚಿವ ಸ್ಥಾನದ ಕುರಿತು ಚರ್ಚಿಸಲು ಬಂದಿದ್ದ ಶಾಸಕರಾದ ರಮೇಶ ಜಾರಕಿಹೊಳಿ, ಶ್ರೀಮಂತಗೌಡ ಪಾಟೀಲ್‌, ಮಹೇಶ ಕುಮಟಳ್ಳಿ ಅವರಿಗೆ ಶಾ ಭೇಟಿಗೆ ಅವಕಾಶ ಸಿಗದ ಕಾರಣ ಅಸಮಾಧಾನದಿಂದಲೇ ಹೋಟೆಲ್‌ನಿಂದ ಹೊರ ನಡೆದರು.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ರಮೇಶ ಜಾರಕಿಹೊಳಿ, ಅಮಿತ್‌ ಶಾ ಭೇಟಿಯಾಗಲು ಹೋಟೆಲ್‌ಗೆ ಬಂದಿದ್ದೆವು. ಆದರೆ, ಅವಕಾಶ ನೀಡಿಲ್ಲ. ನಿಮಗೆ ಏನು ಬೇಕು ಅದನ್ನೇ ಬರೆದುಕೊಳ್ಳಿ ಎಂದು ಸಿಟ್ಟಿನಿಂದಲೇ ಹೇಳಿ ಕಾರು ಹತ್ತಿದರು. ಶ್ರೀಮಂತ ಪಾಟೀಲ್‌ ಮಾತನಾಡಿ, ನಾನೂ ಸಚಿವ ಸ್ಥಾನದ ಆಕ್ಷಾಂಕಿ. ಅವಕಾಶ ಕೊಡುವ ತನಕ ಕಾಯುತ್ತೇವೆ. ಸಚಿವ ಸ್ಥಾನ ಕೊಡುತ್ತೇವೆ ಎಂದು ಮುಖ್ಯಮಂತ್ರಿ ಭರವಸೆ ನೀಡಿದ್ದು ಕೊಡುವರೆಗೂ ಕಾಯುತ್ತೇವೆ ಎಂದು ತಿಳಿಸಿದರು.

ಇದೇ ವೇಳೆ ಅಮಿತ್‌ ಶಾ ಭೇಟಿಗೆ ಆಗಮಿಸಿದ್ದ ಹಿರೇಕೆರೂರು ಶಾಸಕ ಬಿ.ಸಿ.ಪಾಟೀಲ್‌ ಮಾತನಾಡಿ, ಅಮಿತ್‌ ಶಾ ನಮ್ಮ ಭಾಗಕ್ಕೆ ಮೊದಲು ಬಾರಿಗೆ ಆಗಮಿಸಿದ್ದರಿಂದ ಅವರನ್ನು ಸನ್ಮಾನಿಸಿ ಗೌರವ ಸಲ್ಲಿಸಿದ್ದೇನೆ. ಸಚಿವ ಸ್ಥಾನದ ಕುರಿತು ಚರ್ಚಿಸಿಲ್ಲ ಎಂದು ಸ್ಪಷ್ಟಪಡಿಸಿದರು. 

ಶಾಸಕ ಉಮೇಶ ಕತ್ತಿ ಮಾತನಾಡಿ, ಸಚಿವನಾದರೆ ರಾಜ್ಯಕ್ಕೆ, ಶಾಸಕನಾಗಿಯೇ ಉಳಿದರೆ ಕ್ಷೇತ್ರದ ಕೆಲಸ ಮಾಡುತ್ತೇನೆ. ಯಾರ ಬಳಿಯೂ ಸಚಿವ ಸ್ಥಾನಕ್ಕಾಗಿ ಬೇಡಿಕೆ ಸಲ್ಲಿಸಿಲ್ಲ. ಅಮಿತ್‌ ಶಾ ಬಳಿ ಈ ಕುರಿತು ಪ್ರಸ್ತಾಪವೇ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.
 

PREV
click me!

Recommended Stories

Madhu Bangarappa: ನೀಟ್ ಪರೀಕ್ಷೆಯಿಂದ ಮಕ್ಕಳ ಭವಿಷ್ಯ ಹಾಳು; ರದ್ದು ಮಾಡಿದ್ರೆ ಒಳ್ಳೇದು ಎಂದ ಶಿಕ್ಷಣ ಸಚಿವ
ಕೆಆರ್‌ಎಸ್ ಡ್ಯಾಂನಿಂದ ತಮಿಳುನಾಡಿಗೆ ಹರಿದ ಕಾವೇರಿ ನೀರು; ಸ್ವಾತಂತ್ರ್ಯ ದಿನಾಚರಣೆ ದಿನವೇ ರೈತರ ಪ್ರತಿಭಟನೆ