ರಾಯಚೂರಲ್ಲಿ ಸುರಿದ ಅಕಾಲಿಕ ಮಳೆ; ಸಿಡಿಲು ಬಡಿದು ಯುವಕ ಸಾವು

Published : Apr 14, 2024, 03:27 PM IST
ರಾಯಚೂರಲ್ಲಿ ಸುರಿದ ಅಕಾಲಿಕ ಮಳೆ; ಸಿಡಿಲು ಬಡಿದು ಯುವಕ ಸಾವು

ಸಾರಾಂಶ

ರಣ ಬಿಸಿಲಿಗೆ ಕಂಗೆಟ್ಟಿದ್ದ ರಾಯಚೂರು ಜಿಲ್ಲೆಯಲ್ಲಿ ನಿನ್ನೆಯಿಂದ ಸುರಿಯುತ್ತಿರುವ ಮೊದಲ ಮಳೆಗೆ ಸುಡುವ ನೆಲ ತಂಪಾಗಿ ಜನರು ಸಂತಸಗೊಂಡಿದ್ದಾರೆ. ಕೆಲವೆಡೆ  ಕೆಲವೆಡೆ ಭೀಕರ ಬಿರುಗಾಳಿ ಗುಡುಗು ಮಿಂಚು ಸಿಡಿಲು ಸಹಿತ ಮಳೆಯಾಗಿದ್ದು, ಸಾವು ನೋವು ಸಂಭವಿಸುವಂತೆ ಮಾಡಿದೆ.

ರಾಯಚೂರು (ಏ.14): ರಣ ಬಿಸಿಲಿಗೆ ಕಂಗೆಟ್ಟಿದ್ದ ರಾಯಚೂರು ಜಿಲ್ಲೆಯಲ್ಲಿ ನಿನ್ನೆಯಿಂದ ಸುರಿಯುತ್ತಿರುವ ಮೊದಲ ಮಳೆಗೆ ಸುಡುವ ನೆಲ ತಂಪಾಗಿ ಜನರು ಸಂತಸಗೊಂಡಿದ್ದಾರೆ. ಕೆಲವೆಡೆ  ಕೆಲವೆಡೆ ಭೀಕರ ಬಿರುಗಾಳಿ ಗುಡುಗು ಮಿಂಚು ಸಿಡಿಲು ಸಹಿತ ಮಳೆಯಾಗಿದ್ದು, ಸಾವು ನೋವು ಸಂಭವಿಸುವಂತೆ ಮಾಡಿದೆ.

ಸಿಂಧನೂರು ತಾಲೂಕಿನ ಮಲ್ಲಾಪುರ ಕ್ಯಾಂಪ್‌ನಲ್ಲಿ ಸುರಿದಿರುವ ಅಕಾಲಿಕ ಮಳೆ. ಮಳೆಯಲ್ಲಿ ಜಮೀನಿಗೆ ಹೋಗಿದ್ದ ವೇಳೆ ಸಿಡಿಲು ಬಡಿದು ಅಮರಾಪುರ ಗ್ರಾಮದ ಶಾಂತಪ್ಪ(18) ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲಿಸಿದ್ದಾರೆ.

ಘಟನೆ ಮಾಹಿತಿ ತಿಳಿದು ಮೃತ ಯುವಕನ ಮನೆಗೆ ಭೇಟಿ ನೀಡಿದ ಸಿಂಧನೂರು ತಹಸೀಲ್ದಾರ್ ಅರುಣ್ ಕುಮಾರ್ ದೇಸಾಯಿ ಕುಟುಂಬಸ್ಥರಿಗೆ ಸ್ವಾಂತನ ಹೇಳಿ ಸರ್ಕಾರದಿಂದ ಪರಿಹಾರ ಕೊಡಿಸುವ ಭರವಸೆ ನೀಡಿದ್ದಾರೆ

ಕರ್ನಾಟಕದ 15 ಜಿಲ್ಲೆಯಲ್ಲಿ ಬೇಸಿಗೆ ಮಳೆ: ಐವರು ಬಲಿ

PREV
Read more Articles on
click me!

Recommended Stories

Discover Koppal: ವಿಶ್ವದ ಗಮನ ಸೆಳೆಯಲಿದೆ ಹಿರೇಬೆಣಕಲ್: ಡಿಸ್ಕವರ್ ಕೊಪ್ಪಳಕ್ಕೆ ಡಿಸಿ ವಿದ್ಯುಕ್ತ ಚಾಲನೆ
ಉತ್ತರಕನ್ನಡ: ಒಂದು ಎಕರೆ ಜಮೀನಿಗೆ ಹರಿದ ನೆತ್ತರು; ಕೋರ್ಟ್ ಮೆಟ್ಟಿಲೇರಿದ್ದಕ್ಕೇ ಪ್ರಾಣ ತೆಗೆದ ಪಾಪಿ!