ರಾಯಚೂರಲ್ಲಿ ಸುರಿದ ಅಕಾಲಿಕ ಮಳೆ; ಸಿಡಿಲು ಬಡಿದು ಯುವಕ ಸಾವು

Published : Apr 14, 2024, 03:27 PM IST
ರಾಯಚೂರಲ್ಲಿ ಸುರಿದ ಅಕಾಲಿಕ ಮಳೆ; ಸಿಡಿಲು ಬಡಿದು ಯುವಕ ಸಾವು

ಸಾರಾಂಶ

ರಣ ಬಿಸಿಲಿಗೆ ಕಂಗೆಟ್ಟಿದ್ದ ರಾಯಚೂರು ಜಿಲ್ಲೆಯಲ್ಲಿ ನಿನ್ನೆಯಿಂದ ಸುರಿಯುತ್ತಿರುವ ಮೊದಲ ಮಳೆಗೆ ಸುಡುವ ನೆಲ ತಂಪಾಗಿ ಜನರು ಸಂತಸಗೊಂಡಿದ್ದಾರೆ. ಕೆಲವೆಡೆ  ಕೆಲವೆಡೆ ಭೀಕರ ಬಿರುಗಾಳಿ ಗುಡುಗು ಮಿಂಚು ಸಿಡಿಲು ಸಹಿತ ಮಳೆಯಾಗಿದ್ದು, ಸಾವು ನೋವು ಸಂಭವಿಸುವಂತೆ ಮಾಡಿದೆ.

ರಾಯಚೂರು (ಏ.14): ರಣ ಬಿಸಿಲಿಗೆ ಕಂಗೆಟ್ಟಿದ್ದ ರಾಯಚೂರು ಜಿಲ್ಲೆಯಲ್ಲಿ ನಿನ್ನೆಯಿಂದ ಸುರಿಯುತ್ತಿರುವ ಮೊದಲ ಮಳೆಗೆ ಸುಡುವ ನೆಲ ತಂಪಾಗಿ ಜನರು ಸಂತಸಗೊಂಡಿದ್ದಾರೆ. ಕೆಲವೆಡೆ  ಕೆಲವೆಡೆ ಭೀಕರ ಬಿರುಗಾಳಿ ಗುಡುಗು ಮಿಂಚು ಸಿಡಿಲು ಸಹಿತ ಮಳೆಯಾಗಿದ್ದು, ಸಾವು ನೋವು ಸಂಭವಿಸುವಂತೆ ಮಾಡಿದೆ.

ಸಿಂಧನೂರು ತಾಲೂಕಿನ ಮಲ್ಲಾಪುರ ಕ್ಯಾಂಪ್‌ನಲ್ಲಿ ಸುರಿದಿರುವ ಅಕಾಲಿಕ ಮಳೆ. ಮಳೆಯಲ್ಲಿ ಜಮೀನಿಗೆ ಹೋಗಿದ್ದ ವೇಳೆ ಸಿಡಿಲು ಬಡಿದು ಅಮರಾಪುರ ಗ್ರಾಮದ ಶಾಂತಪ್ಪ(18) ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲಿಸಿದ್ದಾರೆ.

ಘಟನೆ ಮಾಹಿತಿ ತಿಳಿದು ಮೃತ ಯುವಕನ ಮನೆಗೆ ಭೇಟಿ ನೀಡಿದ ಸಿಂಧನೂರು ತಹಸೀಲ್ದಾರ್ ಅರುಣ್ ಕುಮಾರ್ ದೇಸಾಯಿ ಕುಟುಂಬಸ್ಥರಿಗೆ ಸ್ವಾಂತನ ಹೇಳಿ ಸರ್ಕಾರದಿಂದ ಪರಿಹಾರ ಕೊಡಿಸುವ ಭರವಸೆ ನೀಡಿದ್ದಾರೆ

ಕರ್ನಾಟಕದ 15 ಜಿಲ್ಲೆಯಲ್ಲಿ ಬೇಸಿಗೆ ಮಳೆ: ಐವರು ಬಲಿ

PREV
Read more Articles on
click me!

Recommended Stories

ಕನ್ನಡಪ್ರಭ-ಏಷ್ಯಾನೆಟ್ ಸುವರ್ಣ ನ್ಯೂಸ್ ವತಿಯಿಂದ ಡಿ.20ಕ್ಕೆ ಚಿತ್ರಕಲಾ ಸ್ಪರ್ಧೆ: ಎಲ್ಲಿ?
ವಿಶ್ವೇಶ್ವರಯ್ಯ ಟರ್ಮಿನಲ್‌ ರೈಲು ನಿಲ್ದಾಣ ವಿಸ್ತರಣೆ ಕಾರ್ಯ ಆರಂಭ: ಪ್ರಯಾಣಿಕರು ಕಾಯುವ ದುಸ್ಥಿತಿ