ಕೋಲಾರ ಜಿಲ್ಲೆಯ ಎಲ್ಲ ರೈಲು ನಿಲ್ದಾಣ ಮೇಲ್ದರ್ಜೆಗೆ: ಸಂಸದ ಮುನಿಸ್ವಾಮಿ

Published : Aug 14, 2023, 03:00 AM IST
ಕೋಲಾರ ಜಿಲ್ಲೆಯ ಎಲ್ಲ ರೈಲು ನಿಲ್ದಾಣ ಮೇಲ್ದರ್ಜೆಗೆ: ಸಂಸದ ಮುನಿಸ್ವಾಮಿ

ಸಾರಾಂಶ

ಹಲವಾರು ವರ್ಷದಿಂದ ನನೆಗುದಿಗೆ ಬಿದ್ದಿದ್ದ ಮಾರಿಕುಪ್ಪಂ-ಕುಪ್ಪಂ ನಡುವಿನ ನೂತನ ರೈಲ್ವೆ ಹಳಿ ನಿರ್ಮಾಣ ಕಾಮಗಾರಿಗೆ 200 ಕೋಟಿ ರೂ.ಗಳನ್ನು ಬಿಡುಗಡೆಗೊಳಿಸಿ, ಈಗಾಗಲೇ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ಈ ಕುರಿತು ರೈಲ್ವೆ ಇಲಾಖೆ ಜನರಲ್‌ ಮ್ಯಾನೇಜರ್‌, ಅಧಿಕಾರಿಗಳು, ಗುತ್ತಿಗೆದಾರರು, ಎಂಜಿನಿಯರುಗಳ ಸಭೆ ನಾಳೆ ನಡೆಯಲಿದೆ ಎಂದ ಸಂಸದ ಎಸ್‌.ಮುನಿಸ್ವಾಮಿ 

ಕೆಜಿಎಫ್‌(ಆ.14): ನರೇಂದ್ರ ಮೋದಿ ನಾಯಕತ್ವದಲ್ಲಿ ಭಾರತ ಸರ್ಕಾರ ರೈಲ್ವೆ ಇಲಾಖೆಯಲ್ಲಿ ವಂದೇ ಭಾರತ್‌ ರೈಲಿನಿಂದ ಹಿಡಿದು ಹಲವಾರು ದಾಖಲೆಗಳನ್ನು ಮಾಡಿದ್ದು, ಕೋಲಾರ ಲೋಕಸಭಾ ವ್ಯಾಪ್ತಿಯ ಎಲ್ಲ ರೈಲ್ವೆ ನಿಲ್ದಾಣಗಳನ್ನು ಮೇಲ್ದರ್ಜೆಗೇರಿಸಲು ಸುಮಾರು 135 ಕೋಟಿ ರು.ಗಳನ್ನು ಬಿಡುಗಡೆಗೊಳಿಸಿದೆ ಎಂದು ಸಂಸದ ಎಸ್‌.ಮುನಿಸ್ವಾಮಿ ಹೇಳಿದರು.

ಮಾರಿಕುಪ್ಪಂ-ಕುಪ್ಪಂ ನಡುವೆ ನಡೆಯುತ್ತಿರುವ ನೂತನ ರೈಲು ಹಳಿ ನಿರ್ಮಾಣ ಕಾಮಗಾರಿ ವೀಕ್ಷಿಸಿ ಮಾತನಾಡಿ, ಹಲವಾರು ವರ್ಷದಿಂದ ನನೆಗುದಿಗೆ ಬಿದ್ದಿದ್ದ ಮಾರಿಕುಪ್ಪಂ-ಕುಪ್ಪಂ ನಡುವಿನ ನೂತನ ರೈಲ್ವೆ ಹಳಿ ನಿರ್ಮಾಣ ಕಾಮಗಾರಿಗೆ 200 ಕೋಟಿ ರೂ.ಗಳನ್ನು ಬಿಡುಗಡೆಗೊಳಿಸಿ, ಈಗಾಗಲೇ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ಈ ಕುರಿತು ರೈಲ್ವೆ ಇಲಾಖೆ ಜನರಲ್‌ ಮ್ಯಾನೇಜರ್‌, ಅಧಿಕಾರಿಗಳು, ಗುತ್ತಿಗೆದಾರರು, ಎಂಜಿನಿಯರುಗಳ ಸಭೆ ನಾಳೆ ನಡೆಯಲಿದೆ ಎಂದರು.

ಕೋಲಾರ: ಲಾಟರಿ ಮೂಲಕ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಮಾಲೂರಿನಲ್ಲಿ ಫ್ಲೈ ಓವರ್‌ ನಿರ್ಮಾಣ

ಮಾಲೂರಿನಲ್ಲಿ ರೈಲ್ವೆ ಫ್ಲೈ ಓವರ್‌ ನಿರ್ಮಾಣಕ್ಕೆ ಸಿಆರ್‌ಎಫ್‌ ನಿಧಿಯಲ್ಲಿ 31 ಕೋಟಿ ರು.ಗಳು ಹಾಗೂ ಟೇಕಲ್‌ನಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ 26 ಕೋಟಿ ಅನುದಾನ ಬಿಡುಗಡೆಗೊಳಿಸಲಾಗಿದೆ. ಅಲ್ಲದೇ ಬಂಗಾರಪೇಟೆ ರೈಲು ನಿಲ್ದಾಣದಲ್ಲಿ ಎಕ್ಸಲೇಟರ್‌, ಮಾರಿಕುಪ್ಪಂ, ಉರಿಗಾಂ, ಬಿಸಾನತ್ತಂ ನಿಲ್ದಾಣಗಳಲ್ಲಿ ಶೌಚಾಲಯ, ವಿದ್ಯುತ್‌ ದೀಪಗಳು, ಸಿಸಿ ಕ್ಯಾಮೆರಾ, ಪ್ಲಾಟ್‌ ಫಾರಂಗಳು ಸೇರಿದಂತೆ ಎಲ್ಲ ರೀತಿಯ ಅತ್ಯಾಧುನಿಕ ಸೌಲಭ್ಯಗಳನ್ನು ಒದಗಿಸಲು ಕ್ರಮ ವಹಿಸಲಾಗಿದೆ ಎಂದರು.

ಶತಮಾನಗಳ ಇತಿಹಾಸವಿರುವ ಬಿಜಿಎಂಎಲ್‌ ಕಟ್ಟಡಗಳನ್ನು ಸ್ಥಳೀಯವಾಗಿ ಯಾರಿಗೂ ಹಸ್ತಾಂತರ ಮಾಡದೇ ಗೋಲ್ಡನ್‌ ಸಫಾರಿಯನ್ನಾಗಿ ಪರಿವರ್ತಿಸಿ, ಪ್ರವಾಸೋದ್ಯಮ ತಾಣವನ್ನಾಗಿ ಮಾಡುವ ನಿಟ್ಟಿನಲ್ಲಿ ಇತ್ತೀಚೆಗೆ ನಡೆದ ಸಂಸತ್‌ ಅಧಿವೇಶನದಲ್ಲಿ ಪ್ರಧಾನ ಮಂತ್ರಿಗಳಿಗೆ ಮತ್ತು ರೈಲ್ವೆ ಸಚಿವರಿಗೆ ಮನವಿ ಪತ್ರ ಸಲ್ಲಿಸಲಾಗಿದೆ. ಕೆಜಿಎಫ್‌ನಲ್ಲಿರುವ ಹಳೆ ಕಟ್ಟಡಗಳು, ಕಾರ್ಖಾನೆ, ಚಿನ್ನದ ಶುದ್ಧೀಕರಣ ಘಟಕ ಇತ್ಯಾದಿಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಕೈಗೊಳ್ಳಬಹುದಾದ ಕ್ರಮಗಳ ಕುರಿತಂತೆ ಗಣಿ ಸಚಿವಾಲಯ ಬರುವ ಬುಧವಾರ ಚರ್ಚೆ ನಡೆಸಲಿದೆ ಎಂದರು.

2800 ಮಂದಿಗೆ ಮನೆ ಹಕ್ಕುಪತ್ರ

ಬಿಜಿಎಂಎಲ್‌ ಮನೆಗಳ ಸರ್ವೇ ಕಾರ್ಯ ನಡೆಯುತ್ತಿದ್ದು, ಒಂದೂವರೆ ತಿಂಗಳಲ್ಲಿ ಸರ್ವೇ ಕಾರ್ಯ ಮುಗಿಯುತ್ತಿದ್ದಂತೆ ಅತಿ ಶೀಘ್ರದಲ್ಲಿ ಈ ಹಿಂದೆ ಹಣವನ್ನು ಕಟ್ಟಿದ್ದಂತಹ ಬಿಜಿಎಂಎಲ್‌ನ 2800 ಮಂದಿ ನಿವೃತ್ತ ಕಾರ್ಮಿಕರ ಮನೆಗಳಿಗೆ ಕೇಂದ್ರ ರೈಲ್ವೆ ಸಚಿವ ಪ್ರಹ್ಲಾದ ಜೋಶಿಯವರೇ ಹಕ್ಕುಪತ್ರ ವಿತರಿಸಲಿದ್ದಾರೆ. ಎಸ್‌ಟಿಬಿಪಿ ಯೋಜನೆಯಡಿ 2800 ಮಂದಿಯನ್ನು ಹೊರತುಪಡಿಸಿ ಮೈನಿಂಗ್‌ ಪ್ರದೇಶದಲ್ಲಿ ಸುಮಾರು 10 ರಿಂದ 14 ಸಾವಿರ ಮಂದಿ ಮನೆಗಳನ್ನು ನಿರ್ಮಾಣ ಮಾಡಿಕೊಂಡಿದ್ದು, ಅವರಿಗೂ ಯಾವುದೇ ಕಾರಣಕ್ಕೂ ತೊಂದರೆಯಾಗದ ರೀತಿಯಲ್ಲಿ ಪತ್ರಗಳನ್ನು ಕೊಡಲು ಕ್ರಮ ವಹಿಸಲಾಗುವುದು ಎಂದರು.

Kolar: ಕೊಲೆ ಮಾಡಿ ಅವಿತು ಕುಳಿತಿದ್ದ ಆರೋಪಿಯನ್ನ 24 ಗಂಟೆಯಲ್ಲಿ ಪತ್ತೆ ಹಚ್ಚಿದ ಶ್ವಾನ!

ಈ ಹಿಂದೆಯೇ ರಾಜ್ಯ ಸರ್ಕಾರದಿಂದ ಬಿಜಿಎಂಎಲ್‌ ವಶದಲ್ಲಿರುವ ಸುಮಾರು 3 ಸಾವಿರ ಎಕರೆ ಪ್ರದೇಶದಲ್ಲಿ ಇಂಡಸ್ಟ್ರಿಯಲ್‌ ಕಾರಿಡಾರ್‌ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಿದೆ, ಮುಂದಿನ 2024ರ ಜನವರಿಯಲ್ಲಿ ಚೆನ್ನೈ- ಬೆಂಗಳೂರು ಎಕ್ಸ್‌ಪ್ರೆಸ್‌ ಕಾರಿಡಾರ್‌ ನಿರ್ಮಾಣ ಕಾಮಗಾರಿ ಪೂರ್ಣವಾಗುತ್ತಿದ್ದಂತೆ, ಕೇಂದ್ರ ಸರ್ಕಾರದಿಂದಲೇ ಇಲ್ಲಿ ಇಂಡಸ್ಟ್ರಿಯಲ್‌ ಕಾರಿಡಾರ್‌ ನಿರ್ಮಾಣ ಕಾಮಗಾರಿ ಮಾಡಲಾಗುವುದು ಎಂದರು.

ಸ್ಥಳೀಯ ಶಾಸಕರು ಮತ್ತು ಈ ಹಿಂದೆ ಸಂಸದರಾಗಿದ್ದಂತಹ ಅವರ ತಂದೆ ಹಿಂದೆಯಿಂದಲೂ ಯಾವುದೇ ಕೆಲಸಗಳನ್ನು ಮಾಡಿಲ್ಲ. ಆದರೂ ತೋರ್ಪಡಿಕೆಗೋಸ್ಕರ ಬಿಜಿಎಂಎಲ್‌ನಲ್ಲಿ ನಿಂತುಕೊಳ್ಳುವುದು, ಮೀಟಿಂಗ್‌ಗಳನ್ನು ನಡೆಸುವುದನ್ನು ಮಾಡುತ್ತಿದ್ದಾರೆ. ಇಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡಿರುವುದು ಕೇಂದ್ರ ಸರ್ಕಾರವೇ ಹೊರತೂ ರಾಜ್ಯ ಸರ್ಕಾರವಲ್ಲ ಎಂದು ವಾಗ್ದಾಳಿ ನಡೆಸಿದರು.

PREV
Read more Articles on
click me!

Recommended Stories

Wow.. ಕರ್ನಾಟಕದಲ್ಲೇ ಇಂತಹ ಜಲಪಾತಗಳಿವೆಯಾ? ಈ 6 ತಾಣಗಳ ಬಗ್ಗೆ ಬಹುತೇಕರಿಗೆ ಗೊತ್ತಿಲ್ಲ!
School Holiday: ಕರಾವಳಿಯಲ್ಲಿ ಭಾರೀ ಮಳೆ; ದಕ್ಷಿಣ ಕನ್ನಡ ಜಿಲ್ಲೆಯ 4 ತಾಲೂಕಿನ ಶಾಲಾ-ಕಾಲೇಜುಗಳಿಗೆ ನಾಳೆ ರಜೆ!