ಅಸಾಂಪ್ರದಾಯಿಕ ಇಂಧನ ಬಳಕೆ ಹೆಚ್ಚಲಿ: ಜ್ಞಾನೇಂದ್ರ

Published : Aug 01, 2022, 11:27 AM IST
 ಅಸಾಂಪ್ರದಾಯಿಕ ಇಂಧನ ಬಳಕೆ ಹೆಚ್ಚಲಿ: ಜ್ಞಾನೇಂದ್ರ

ಸಾರಾಂಶ

ವಿದ್ಯುತ್‌ ನಮ್ಮೆಲ್ಲರ ಜೀವನದ ಅವಿಭಾಜ್ಯ ಅಂಗವಾಗಿದ್ದು, ಪೆಟ್ರೋಲ್, ಡೀಸೆಲ್‌ ಬಳಕೆ ಕಡಿಮೆ ಮಾಡಿ, ಅಸಾಂಪ್ರದಾಯಿಕ ಇಂಧನದ ಬಳಕೆಯನ್ನು ಹೆಚ್ಚಿಸಬೇಕಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಶಿವಮೊಗ್ಗ (ಅ.1) : ವಿದ್ಯುತ್‌ ನಮ್ಮೆಲ್ಲರ ಜೀವನದ ಅವಿಭಾಜ್ಯ ಅಂಗವಾಗಿದ್ದು, ಪೆಟ್ರೋಲ…, ಡೀಸೆಲ್‌ ಬಳಕೆ ಕಡಿಮೆ ಮಾಡಿ, ಅಸಾಂಪ್ರದಾಯಿಕ ಇಂಧನದ ಬಳಕೆಯನ್ನು ಹೆಚ್ಚಿಸಬೇಕಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಜಿಲ್ಲಾಡಳಿತ, ಇಂಧನ ಇಲಾಖೆ ಹಾಗೂ ಮಂಗಳೂರು ವಿದ್ಯುತ್‌ ಸರಬರಾಜು ಕಂಪನಿ ನಿಯಮಿತ ಶಿವಮೊಗ್ಗ ವೃತ್ತ ಆಶ್ರಯದಲ್ಲಿ ಕುವೆಂಪು ರಂಗಮಂದಿರದಲ್ಲಿ ನಡೆದ ಉಜ್ವಲ ಭಾರತ, ಉಜ್ವಲ ಭವಿಷ್ಯ ಘೋಷಣೆಯಡಿ ವಿದ್ಯುತ್‌ ಮಹೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವಿದ್ಯುತ್‌(Electricity) ನಮ್ಮ ಬಾಳಿನಲ್ಲಿ ಬದಲಾವಣೆ ತಂದಿದೆ. ವಿದ್ಯುತ್‌ ಒಂದು ದೊಡ್ಡ ಜಾಲ, ಗ್ರಾಹಕರಿಗೆ ಉತ್ತಮ ವಿದ್ಯುತ್‌ ಸೇವೆ ನೀಡಲು ಅಧಿಕಾರಿ/ಸಿಬ್ಬಂದಿ ಎಲ್ಲ ರೀತಿಯ ಪ್ರಯತ್ನ ಮಾಡುತ್ತಿದ್ದಾರೆ. ವಿಶೇಷವಾಗಿ ಲೈನ್‌ಮನ್‌ಗಳು ತಮ್ಮ ಜೀವದ ಹಂಗು ತೊರೆದು ಸೇವೆ ಸಲ್ಲಿಸುತ್ತಿದ್ದಾರೆ. 10 ವರ್ಷಗಳಲ್ಲಿ ಪೆಟ್ರೋಲ…, ಡೀಸೆಲ್‌ ವಾಹನಗಳು ಕಡಿಮೆ ಆಗಲಿವೆ. ರೈಲ್ವೆಯಲ್ಲಿ ಸಹ ವಿದ್ಯುತ್‌ ಬಳಕೆ ಹೊಸ ಬದಲಾವಣೆ ತಂದಿದೆ. ದೇಶದ ಆರ್ಥಿಕ ಪ್ರಗತಿಗೆ ಸಹ ಇದು ಕೊಡುಗೆ ನೀಡುತ್ತಿದ್ದು, ದೇಶದ ಭವಿಷ್ಯ ಉಜ್ವಲವಾಗಿ ನಿರ್ಮಾಣ ಮಾಡುವಲ್ಲಿ ಪೂರ್ಣ ಪ್ರಮಾಣದ ಕೆಲಸವನ್ನು ಸರ್ಕಾರ ಮಾಡುತ್ತಿರುವುದು ಅಭಿನಂದನೀಯ ಎಂದರು.

ಜೈವಿಕ ಇಂಧನ ಬಳಕೆಗೆ ಹೆಚ್ಚಿನ ಆದ್ಯತೆ: ಕೇಂದ್ರ ಸಚಿವ ಗಡ್ಕರಿ

ಕಾರ್ಯಕ್ರಮದ ಉದ್ಘಾಟಿಸಿದ ರೇಷ್ಮೆ, ಯುವ ಸಬಲೀಕರಣ, ಕ್ರೀಡೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ. ಕೆ.ಸಿ. ನಾರಾಯಣಗೌಡ ಮಾತನಾಡಿ, ಅಭಿವೃದ್ಧಿ ಪಥದಲ್ಲಿ ಶಿವಮೊಗ್ಗ ನಂ.1 ಸ್ಥಾನದಲ್ಲಿದೆ. ಭಾರತಕ್ಕೆ ಸ್ವಾತಂತ್ರ್ಯ ಲಭಿಸಿ ನೂರು ವರ್ಷ ತುಂಬುವ 2047 ರ ಹೊತ್ತಿಗೆ ಇಡೀ ದೇಶಕ್ಕೆ ಶಕ್ತಿ ತುಂಬುವ ಕೆಲಸ ಆಗಲಿದೆ. ಪ್ರಧಾನಿಯವರ ನೇತೃತ್ವದಲ್ಲಿ 8 ವರ್ಷಗಳಲ್ಲಿ ದೇಶದಲ್ಲಿ ಅತ್ಯುತ್ತಮ ಸಾಧನೆ ಆಗಿದೆ. ಹಳ್ಳಿ-ಹಳ್ಳಿ, ಗುಡ್ಡಗಾಡು ಪ್ರದೇಶಗಳಿಗೂ ವಿದ್ಯುತ್‌ ಸಂಪರ್ಕ ಕಲ್ಪಿಸುವ ಅವರ ಕನಸು ಸಾಕಾರಗೊಂಡಿದೆ. ಮುಂದೆ ನಮ್ಮ ದೇಶ ಇಡೀ ವಿಶ್ವದಲ್ಲಿ 1ನೇ ಸ್ಥಾನಕ್ಕೆ ಬರಲಿದ್ದು, ಆ ನಿಟ್ಟಿನಲ್ಲಿ ಸಾಧನೆ ಪ್ರಗತಿಯಲ್ಲಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಸಂಸದ ಬಿ.ವೈ. ರಾಘವೇಂದ್ರ ಮಾತನಾಡಿ, ವಿದ್ಯುತ್‌ ಕ್ಷೇತ್ರದಲ್ಲಿ ಹೊಸ ಮನ್ವಂತರ ಸೃಷ್ಟಿಸುವ ಪ್ರಯತ್ನಗಳು ಆಗುತ್ತಿವೆ. ಶೇ.100 ಗ್ರಾಮೀಣ ವಿದ್ಯುದೀಕರಣ ಸಾಧಿಸಲಾಗಿದೆ. 18,500 ಗ್ರಾಮಗಳು, 2.86 ಕೋಟಿ ಮನೆಗಳಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸಲಾಗಿದೆ. ರೈತರ ಪಂಪ್‌ಸೆಟ್‌ಗಳಿಗೆ ರಾಜ್ಯ ಮತ್ತು ಕೇಂದ್ರದ ತಲಾ ಶೇ.30 ಸಬ್ಸಿಡಿ ತಲುಪಿದೆ. 2015 ರಲ್ಲಿ ಪ್ಯಾರಿಸ್‌ನಲ್ಲಿ ನಡೆದ ಸಭೆಯಲ್ಲಿ 2030ರ ಹೊತ್ತಿಗೆ ಶೇ.40 ನವೀಕರಿಸಬಹುದಾದ ಇಂಧನಕ್ಕೆ ಒತ್ತು ನೀಡಬೇಕೆಂಬ ಘೋಷಣೆಯಾಗಿದ್ದು, ರಾಜ್ಯದ ಇಂಧನ ಇಲಾಖೆ ಮುಂಗಡವಾಗಿಯೇ ಈ ಗುರಿ ತಲುಪಿರುವುದು ಅಭಿನಂದನೀಯ ಎಂದರು.

Renewable resources ಪುನರ್‌ಬಳಕೆ ಇಂಧನ ಬಳಕೆ ಹೆಚ್ಚಿಸಿದ ಹೋಂಡಾ 2 ವ್ಹೀಲರ್ಸ್ ಇಂಡಿಯಾ

2.68 ಲಕ್ಷ ಸಕ್ರ್ಯುಟ್‌ ಕಿ.ಮೀ. ಎಚ್‌.ಡಿ. ಲೈನ್‌ ಸ್ಥಾವರ, 6,500 ಸಕ್ರ್ಯೂಟ್‌ ಕಿ.ಮೀ. ಎಲ್‌ಟಿ ಲೈನ್‌ ಸ್ಥಾವರ ಸ್ಥಾಪನೆ ಆಗಿದೆ. ರಾಜ್ಯದಲ್ಲಿ 25 ಲಕ್ಷ ರೈತರ ಪಂಪ್‌ಸೆಟ್‌ ಇದ್ದು .11 ಸಾವಿರ ಕೋಟಿ ಮೌಲ್ಯದ ವಿದ್ಯುತ್‌ ಉಚಿತವಾಗಿ ನೀಡಿದೆ. ಇನ್ನೂ ಅನೇಕ ಜನಪರ ಯೋಜನೆಗಳ ಮೂಲಕ ಇಂಧನ ಇಲಾಖೆ ಗೌರವ ತರುವ ಕೆಲಸ ಮಾಡುತ್ತಾ ಉತ್ತಮ ಕೊಡುಗೆ ರಾಜ್ಯಕ್ಕೆ ನೀಡಿದೆ. ವಿದ್ಯುತ್‌ ಕಳ್ಳತನ, ಸೋರಿಕೆಯನ್ನು ಸಹ ಕಡಿಮೆ ಮಾಡುವ ಪ್ರಯತ್ನ ಇನ್ನೂ ಆಗಬೇಕು ಎಂದು ಹೇಳಿದರು.

ವಿಧಾನ ಪರಿಷತ್‌ ಶಾಸಕ ಡಿ.ಎಸ್‌. ಅರುಣ್‌ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಅನೇಕ ಉತ್ತಮ ಯೋಜನೆಗಳನ್ನು ನೀಡಿದೆ. 2047ರ ಹೊತ್ತಿಗೆ ಆಮದು ಮಾಡಿಕೊಳ್ಳುವುದು ನಿಂತು, ರಫ್ತು ಮಾಡುವ ಸಂಕಲ್ಪ ನಮ್ಮದಾಗಬೇಕು. ನವೀಕರಿಸಬಹುದಾದ ಇಂಧನದ ಬಗ್ಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದರು.

ಮೆಸ್ಕಾಂ(MESCOM) ಕಾರ್ಯನಿರ್ವಾಹಕ ಎಂಜಿನಿಯರ್‌(Engineer) ವೀರೇಂದ್ರ ಎಚ್‌.ಆರ್‌(Veerendra H.R). ಸ್ವಾಗತಿಸಿದರು. ಪರ್ವ ಗ್ರಿಡ್‌ ಕಾರ್ಪೋರೇಷನ್‌ ಆಫ್‌ ಇಂಡಿಯಾ ಲಿ.ನ ಉಪ ಮಹಾಪ್ರಬಂಧಕ ಮಂಗೇಶ್‌ ಎಸ್‌. ಬನ್ಸೊಡ್‌ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಾಲತೇಶ್‌, ರಾಜೇಶ್‌ ಕಾಮತ್‌, ಮೆಸ್ಕಾಂ ನಿರ್ದೇಶಕರಾದ ದಿನೇಶ್‌, ಗಿರಿರಾಜ್‌, ಶಿವರುದ್ರಪ್ಪ ಹಾಗೂ ವಸಂತಕುಮಾರ್‌, ಮೋಹನ್‌, ರಮೇಶ್‌ ಹೆಗ್ಡೆ, ಮುಖ್ಯ ಎಂಜಿನಿಯರ್‌ ಬಸಪ್ಪ, ಇತರರಿದ್ದರು.

PREV
Read more Articles on
click me!

Recommended Stories

ಹಿಂದೂಗಳಿಗಿಂತ ಮುಸ್ಲಿಮರ ಮೇಲೆ ಹೆಚ್ಚು ಬಾಂಡ್: ಎಸ್‌ಡಿಪಿಐ ಆರೋಪಕ್ಕೆ ಅಂಕಿ-ಅಂಶ ಸಮೇತ ಕಮಿಷನರ್ ತಿರುಗೇಟು!
ಕರೆಂಟ್‌ ಅಕೌಂಟಲ್ಲಿ ₹150 ಕೋಟಿ ಅಲ್ಲ, ₹1 ಸಾವಿರ ಕೋಟಿ ವಹಿವಾಟು