ಭಾರೀ ಮಳೆಗೆ ಒಡೆಯಿತು ಡ್ಯಾಂ : ಸಾವಿರಾರು ಎಕರೆ ಜಲಾವೃತ

Published : Aug 12, 2019, 12:43 PM ISTUpdated : Aug 12, 2019, 12:58 PM IST
ಭಾರೀ ಮಳೆಗೆ ಒಡೆಯಿತು ಡ್ಯಾಂ : ಸಾವಿರಾರು ಎಕರೆ ಜಲಾವೃತ

ಸಾರಾಂಶ

ರಾಜ್ಯ ಹಲವು ಜಿಲ್ಲೆಗಳಲ್ಲಿ ಭೀಕರ ಮಳೆ ಭಾರೀ ಅನಾಹುತ ಸೃಷ್ಟಿ ಮಾಡುತ್ತಿದೆ. ಇತ್ತ ಉತ್ತರ ಕನ್ನಡದ ಡ್ಯಾಂ ಒಂದು ಒಡೆದು ಅನಾಹುತ ಸೃಷ್ಟಿಸಿದೆ.

ಯಲ್ಲಾಪುರ [ಆ.12] : ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಭೀಕರ ಪ್ರವಾಹಕ್ಕೆ ಜನಜೀವನ ಅಸ್ತವ್ಯಸ್ತವಾಗಿದೆ. 

ಭಾರೀ ಮಳೆಯಿಂದ ಹಲವು ಅಣೆಕಟ್ಟೆಗಳು ಬಹುತೇಕ ತುಂಬಿದ್ದು, ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡದ ಚಿಗಳ್ಳಿ ಅಣೆಗಟ್ಟು ಒಡೆದು ಅನಾಹುತವಾಗಿದೆ. 

ಕರ್ನಾಟಕ ಪ್ರವಾಹದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಬೇಡ್ತಿ ನದಿಗೆ ಕಟ್ಟಲಾಗಿರುವ ಈ ಅಣೆಕಟ್ಟು 20 ಅಡಿ ಎತ್ತರವಿದ್ದು 910 ಮೀಟರ್ ವಿಸ್ತಾರವಾಗಿರುವ ಡ್ಯಾಂ ಒಡೆದು ಸಾವಿರಾರು ಎಕರೆ ಭೂಮಿ ಜಲಾವೃತವಾಗಿದೆ. 

ಸ್ಥಳಕ್ಕೆ ಪೊಲೀಸರು ಮತ್ತು ರಕ್ಷಣಾ ತಂಡ ದೌಡಾಯಿಸಿದ್ದು, ತಗ್ಗು ಪ್ರದೇಶಗಳಲ್ಲಿ ನೂರಾರು ಜನರನ್ನು ತುರ್ತಾಗಿ ಸ್ಥಳಾಂತರ ಮಾಡಲಾಗುತ್ತಿದೆ. 

ಕೃಷಿ ಭೂಮಿಗೂ ನೀರು ನುಗ್ಗುತ್ತಿದ್ದು, ಶಿರಸಿ ಹಾಗೂ ಹುಬ್ಬಳ್ಳಿ ರಸ್ತೆಯೂ ಮುಳುಗುವ ಭೀತಿ ಎದುರಾಗಿದೆ. 

PREV
click me!

Recommended Stories

Karnataka News Live: ಶೃಂಗೇರಿ ಕ್ಷೇತ್ರದ ಮತ ಮರು ಎಣಿಕೆಯಲ್ಲಿ ಬಿಜೆಪಿ ಜೀವರಾಜ್ ಮುನ್ನಡೆ
NEET UG 2026 : ಇಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ; ರಾಜ್ಯದಲ್ಲಿ ಹೇಗಿದೆ ಸಿದ್ಧತೆ?