ಆಝಾನ್ ಕೊಡುತ್ತಿದ್ದ ವೇಳೆ ಹೃದಯಾಘಾತದಿಂದಾಗಿ ಧರ್ಮಗುರು ನಿಧನ; ಮೈಕ್ ಮುಂದೆಯೇ ಸಾವು

Published : Jun 10, 2026, 08:56 AM IST
Abdul Latif Madani

ಸಾರಾಂಶ

ಹೊನ್ನಾವರದ ಮಸೀದಿಯೊಂದರಲ್ಲಿ ಆಝಾನ್ ನೀಡುತ್ತಿದ್ದ ವೇಳೆ ಬಂಟ್ವಾಳ ಮೂಲದ ಧರ್ಮಗುರು ಅಬ್ದುಲ್ ಲತೀಫ್ ಮದನಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸಂಜೆಯ ನಮಾಝ್‌ಗೆ ಬಾಂಗ್ ಕೊಡುತ್ತಿದ್ದಾಗ ಅವರು ಮೈಕ್ ಮುಂದೆಯೇ ಕುಸಿದು ಬಿದ್ದಿದ್ದು, ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಉತ್ತರ ಕನ್ನಡ: ಮಸೀದಿಯಲ್ಲಿ ಆಝಾನ್ (ಬಾಂಗ್) ನೀಡುತ್ತಿದ್ದ ಸಂದರ್ಭದಲ್ಲೇ ಬಂಟ್ವಾಳ (Bantwal, Uttara Kannada) ಮೂಲದ ಧರ್ಮಗುರುಗಳೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಮಸೀದಿಯೊಂದರಲ್ಲಿ ಮಂಗಳವಾರ ನಡೆದಿದೆ. ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಪುಚ್ಚೆಕೆರೆ ನಿವಾಸಿ, ನೂಜಿ ಉಸ್ಮಾನ್ ಅವರ ಪುತ್ರ ಅಬ್ದುಲ್ ಲತೀಫ್ ಮದನಿ (50) ಮೃತರು.

 ಸಂಜೆ ಸುಮಾರು 4 ಗಂಟೆಯ ನಮಾಜ್ ಸಮಯಕ್ಕೆ ಸರಿಯಾಗಿ ಹೊನ್ನಾವರದ ಮಸೀದಿಯಲ್ಲಿ ಅಬ್ದುಲ್ ಲತೀಫ್ ಮದನಿ ಆಝಾನ್ ನೀಡುತ್ತಿದ್ದರು. ಈ ವೇಳೆ ಅವರಿಗೆ ದಿಢೀರನೆ ತೀವ್ರ ಸ್ವರೂಪದ ಹೃದಯಾಘಾತ ಸಂಭವಿಸಿದೆ. ಪರಿಣಾಮವಾಗಿ ಅವರು ಮೈಕ್ ಮುಂದೆಯೇ ಸ್ಥಳದಲ್ಲೇ ಕುಸಿದು ಕೊನೆಯುಸಿರೆಳೆದಿದ್ದಾರೆ. ಮೃತ ಅಬ್ದುಲ್ ಲತೀಫ್ ಮದನಿ ಕಳೆದ ಒಂದು ವರ್ಷದಿಂದ ಈ ಮಸೀದಿಯಲ್ಲಿ ಮೌಲ್ವಿಯಾಗಿ ಸೇವೆ ಸಲ್ಲಿಸುತ್ತಿದ್ದರು.

ಸಾವಿನ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆ

ಈ ಎಲ್ಲಾ ದೃಶ್ಯಗಳು ಮಸೀದಿಯಲ್ಲಿನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಅಬ್ದುಲ್ ಲತೀಫ್ ಮದನಿ ಅವರ ನಿಧನಕ್ಕೆ ಮುಹಿದ್ದೀನ್ ಜಾಮಿಯಾ ಮಸೀದಿ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು ಸಂತಾಪ ಸೂಚಿಸಿದ್ದಾರೆ.

PREV
Read more Articles on
click me!

Recommended Stories

Puneeth kerehalli: ರಾಯರ ದರ್ಶನಕ್ಕೆ ಹೋಗಿದ್ದ ಪುನೀತ್‌ ಕೆರೆಹಳ್ಳಿಗೆ ರಾಯಚೂರು ಪೊಲೀಸರು ಮಂತ್ರಾಲಯಕ್ಕೆ ಹೋಗಿ ನೋಟಿಸ್ ಕೊಟ್ಟಿದ್ದು ಸರಿಯೇ?
ಕುಸಿದ ಕಡವಾಡದ 60 ವರ್ಷ ಹಳೆಯ ಐತಿಹಾಸಿಕ ಸೇತುವೆ; ಮೀನುಗಾರರ ಬದುಕಿನ ಆಸರೆ ಈ ಸೇತುವೆ