ಚಿತ್ರದುರ್ಗ: ವರಮಹಾಲಕ್ಷ್ಮಿ ಹಬ್ಬದಂದು 23 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ!

Published : Aug 08, 2025, 04:54 PM ISTUpdated : Aug 08, 2025, 05:01 PM IST
Chitradurga

ಸಾರಾಂಶ

ಚಿತ್ರದುರ್ಗದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮದಲ್ಲಿದ್ದ ವೇಳೆ ಮನೆಯೊಂದರಲ್ಲಿ 23 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು ಬೆಳ್ಳಿ ಕಳವು. ಮನೆಯವರು ಊರಿನಿಂದ ಹೊರಗೆ ತೆರಳಿದ್ದ ವೇಳೆ ಕಳ್ಳರು ಕೈಚಳಕ ತೋರಿಸಿದ್ದಾರೆ. ಹಬ್ಬದ ದಿನ ಮನೆಗೆ ಬಂದ ಕುಟುಂಬಸ್ಥರಿಗೆ ಕಳ್ಳತನದ ಬಗ್ಗೆ ತಿಳಿದು ಆಘಾತ.

ಚಿತ್ರದುರ್ಗ: ವರಮಹಾಲಕ್ಷ್ಮೀ ಹಬ್ಬದ ಸಂಭ್ರಮದಲ್ಲಿ ಇದ್ದ ದಿನವೇ ದರೋಡೆಕೋರರು ಕನ್ನ ಹಾಕಿ, 23 ಲಕ್ಷಕ್ಕೂ ಹೆಚ್ಚು ಮೌಲ್ಯದ ಚಿನ್ನಾಭರಣ ಹಾಗೂ ಬೆಳ್ಳಿ ಸಾಮಾನುಗಳನ್ನು ಕಳವು ಮಾಡಿರುವ ಘಟನೆ ಚಿತ್ರದುರ್ಗ ನಗರದ ದೊಡ್ಡಪೇಟೆ ಬಡಾವಣೆಯಲ್ಲಿ ಬೆಳಕಿಗೆ ಬಂದಿದೆ. ಮಾಹಿತಿಯ ಪ್ರಕಾರ, ದೊಡ್ಡಪೇಟೆಯ ರಾಜಾರಾಮ್ ಅವರ ಮನೆಯಲ್ಲಿ ಈ ದರೋಡೆ ನಡೆದಿದೆ. ಹಬ್ಬದ ಕೆಲ ದಿನಗಳ ಮುಂಚೆ ಮನೆಯವರು ಊರಿನ ಹೊರಗೆ ತೆರಳಿದ್ದರು. ಎರಡು ದಿನದ ಹಿಂದೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳರು ಕೈಚಳಕ ತೋರಿಸಿದ್ದಾರೆ. ಹಬ್ಬದ ದಿನ ಮನೆಗೆ ಬಂದು ನೋಡಿದಾಗ ಕಳ್ಳತನ ಬಯಲಾಗಿದೆ. ಮಹಾಲಕ್ಷ್ಮೀ ಪೂಜೆಗೆಂದು ಬಂದ ಕುಟುಂಬಸ್ಥರಿಗೆ ಈ ವೇಳೆ ಶಾಕ್ ಆಗಿದೆ. ಮನೆ ಬೀಗ ಮುರಿದು ಒಳನುಗ್ಗಿದ ಕಳ್ಳರು 170 ಗ್ರಾಂ ತೂಕದ ಚಿನ್ನಾಭರಣ ಹಾಗೂ 2.5 ಕೆಜಿ ಬೆಳ್ಳಿ ಆಭರಣಗಳನ್ನು ಕದ್ದೊಯ್ದಿದ್ದಾರೆ.

ಹಬ್ಬದ ದಿನ ಮನೆಗೆ ಮರಳಿದ ಕುಟುಂಬಸ್ಥರು ಬೀಗ ಮುರಿದು ಬಿದ್ದಿರುವುದನ್ನು ಕಂಡು ಶಾಕ್‌ಗೆ ಒಳಗಾದರು. ಮಹಾಲಕ್ಷ್ಮೀ ಪೂಜೆಯ ಸಡಗರದಲ್ಲಿ ಇರಬೇಕಾದ ಕುಟುಂಬಕ್ಕೆ ಕಳ್ಳತನದ ಘಟನೆ ಕಣ್ಣೀರಾಗಿಸಿದೆ. ಘಟನೆಯ ಮಾಹಿತಿ ದೊರಕುತ್ತಿದ್ದಂತೆ ಚಿತ್ರದುರ್ಗ ನಗರ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಳ್ಳರ ಪತ್ತೆಗೆ ಪೊಲೀಸರು ತೀವ್ರ  ಶೋಧ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಎಸ್ಪಿ ರಂಜಿತ್ ಬಂಡಾರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಎಸ್ಪಿ ಗೆ ನಗರಠಾಣೆ CPI ಉಮೇಶ್ ಬಾಬು ಸಾಥ್ ನೀಡಿದರು.

PREV
Read more Articles on
click me!

Recommended Stories

ರಾಜ್ಯದಲ್ಲಿ ರಾಜಕೀಯ ಹೊಲಸೆದ್ದು, ಎಲ್ಲ ಪಕ್ಷಗಳು ಗಬ್ಬೆದ್ದು ಹೋಗಿವೆ: ಕೆ.ಎಸ್.ಈಶ್ವರಪ್ಪ
ದಾವಣಗೆರೆ ರಾಟ್‌ವೀಲರ್ ನಾಯಿಗಳ ಡೆಡ್ಲಿ ಅಟ್ಯಾಕ್; 50ಕ್ಕೂ ಹೆಚ್ಚು ಕಡೆ ಕಚ್ಚಿಸಿಕೊಂಡ ಮಹಿಳೆ ದುರ್ಮರಣ