ಪ್ರಯಾಣಿಕರ ಗಮನಕ್ಕೆ: 3 ದಿನ ಕೆಎಸ್‌ಆರ್‌ಟಿಸಿ ಬಸ್‌ ಸಂಚಾರದಲ್ಲಿ ವ್ಯತ್ಯಯ

Published : Dec 24, 2022, 03:30 AM IST
ಪ್ರಯಾಣಿಕರ ಗಮನಕ್ಕೆ: 3 ದಿನ ಕೆಎಸ್‌ಆರ್‌ಟಿಸಿ ಬಸ್‌ ಸಂಚಾರದಲ್ಲಿ ವ್ಯತ್ಯಯ

ಸಾರಾಂಶ

ಧರ್ಮಸ್ಥಳ, ಉಪ್ಪಿನಂಗಡಿ, ಸುಬ್ರಹ್ಮಣ್ಯ, ಕಾಸರಗೋಡು ವಲಯಗಳಲ್ಲಿ ಕಾರ್ಯಾಚರಣೆಯಲ್ಲಿರುವ ಸಾರಿಗೆಗಳಲ್ಲಿ ಡಿ.26 ರಿಂದ 28ರ ವರೆಗೆ ದೈನಂದಿನ ಮಾರ್ಗ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗಲಿದೆ. 

ಮಂಗಳೂರು(ಡಿ.24): ಮೂಡಬಿದಿರೆಯಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಗೆ ರಾಜ್ಯದ ವಿವಿಧ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದ ಭಾರತ್‌ ಸ್ಕೌಟ್ಸ್‌- ಗೌಡ್ಸ್‌ನ ಸುಮಾರು 50,000 ಕ್ಕಿಂತಲೂ ಹೆಚ್ಚಿನ ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು ಆಗಮಿಸಿದ್ದಾರೆ.

ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಗೆ ರಾಜ್ಯ ರಸ್ತೆ ಸಾರಿಗೆ ನಿಗಮದ ಇತರೆ ವಿಭಾಗಗಳಿಂದ ಹಾಗೂ ವಾಯವ್ಯ, ಕಲ್ಯಾಣ ಕರ್ನಾಟಕ ನಿಗಮಗಳಿಂದ ವಿದ್ಯಾರ್ಥಿಗಳನ್ನು ಕರೆದುಕೊಂಡು ಬರಲಾಗಿದೆ. ಆ ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು ಡಿ.27ರಂದು ಕಾರ್ಯಕ್ರಮ ಮುಕ್ತಾಯಗೊಂಡು ಹಿಂತಿರುಗುವ ವೇಳೆಗೆ ಮೂಡುಬಿದಿರೆಯಿಂದ ರಾಜ್ಯದ ವಿವಿಧ ಸ್ಥಳಗಳಿಗೆ/ ರೈಲು ನಿಲ್ದಾಣಗಳಿಗೆ ಹೆಚ್ಚುವರಿ ಸಾರಿಗೆಗಳ ವ್ಯವಸ್ಥೆ ಮಾಡಿ ವಾಹನಗಳನ್ನು ನಿಯೋಜಿಸಬೇಕಾಗಿರುತ್ತದೆ. 

ಬಿಲ್ಲವರ 3 ಬೇಡಿಕೆ ಈಡೇರಿಸಿದರೆ ಪಾದಯಾತ್ರೆ ವಾಪಸ್‌: ಪ್ರಣವಾನಂದ ಶ್ರೀ

ಆದ್ದರಿಂದ ಧರ್ಮಸ್ಥಳ, ಉಪ್ಪಿನಂಗಡಿ, ಸುಬ್ರಹ್ಮಣ್ಯ, ಕಾಸರಗೋಡು ವಲಯಗಳಲ್ಲಿ ಕಾರ್ಯಾಚರಣೆಯಲ್ಲಿರುವ ಸಾರಿಗೆಗಳಲ್ಲಿ ಡಿ.26 ರಿಂದ 28ರ ವರೆಗೆ ದೈನಂದಿನ ಮಾರ್ಗ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಪ್ರಯಾಣಿಕರು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳು ಸಹಕರಿಸುವಂತೆ ನಿಗಮದ ಮಂಗಳೂರಿನ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

PREV
Read more Articles on
click me!

Recommended Stories

ವಾಣಿಜ್ಯ ಸಿಲಿಂಡರ್‌ಗೆ ನೋಂದಣಿ ಕಡ್ಡಾಯ! ಕಾಳ ಸಂತೆಯಲ್ಲಿ ಮಾರಾಟ ತಡೆಗೆ ಕ್ರಮ
ಅಪ್ರಾಪ್ತ ಮಕ್ಕಳಿಗೆ ವಾಹನ ಚಾಲನೆ ಮಾಡಲು ನೀಡ್ತಿದ್ದೀರಾ? ಮಕ್ಕಳ ಆ್ಯಕ್ಸಿಡೆಂಟ್ ಕೇಸಲ್ಲಿ 1250 ಪೋಷಕರಿಗೆ ಸಂಕಷ್ಟ!