ಪ್ರಯಾಣಿಕರ ಗಮನಕ್ಕೆ: 3 ದಿನ ಕೆಎಸ್‌ಆರ್‌ಟಿಸಿ ಬಸ್‌ ಸಂಚಾರದಲ್ಲಿ ವ್ಯತ್ಯಯ

Published : Dec 24, 2022, 03:30 AM IST
ಪ್ರಯಾಣಿಕರ ಗಮನಕ್ಕೆ: 3 ದಿನ ಕೆಎಸ್‌ಆರ್‌ಟಿಸಿ ಬಸ್‌ ಸಂಚಾರದಲ್ಲಿ ವ್ಯತ್ಯಯ

ಸಾರಾಂಶ

ಧರ್ಮಸ್ಥಳ, ಉಪ್ಪಿನಂಗಡಿ, ಸುಬ್ರಹ್ಮಣ್ಯ, ಕಾಸರಗೋಡು ವಲಯಗಳಲ್ಲಿ ಕಾರ್ಯಾಚರಣೆಯಲ್ಲಿರುವ ಸಾರಿಗೆಗಳಲ್ಲಿ ಡಿ.26 ರಿಂದ 28ರ ವರೆಗೆ ದೈನಂದಿನ ಮಾರ್ಗ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗಲಿದೆ. 

ಮಂಗಳೂರು(ಡಿ.24): ಮೂಡಬಿದಿರೆಯಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಗೆ ರಾಜ್ಯದ ವಿವಿಧ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದ ಭಾರತ್‌ ಸ್ಕೌಟ್ಸ್‌- ಗೌಡ್ಸ್‌ನ ಸುಮಾರು 50,000 ಕ್ಕಿಂತಲೂ ಹೆಚ್ಚಿನ ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು ಆಗಮಿಸಿದ್ದಾರೆ.

ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಗೆ ರಾಜ್ಯ ರಸ್ತೆ ಸಾರಿಗೆ ನಿಗಮದ ಇತರೆ ವಿಭಾಗಗಳಿಂದ ಹಾಗೂ ವಾಯವ್ಯ, ಕಲ್ಯಾಣ ಕರ್ನಾಟಕ ನಿಗಮಗಳಿಂದ ವಿದ್ಯಾರ್ಥಿಗಳನ್ನು ಕರೆದುಕೊಂಡು ಬರಲಾಗಿದೆ. ಆ ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು ಡಿ.27ರಂದು ಕಾರ್ಯಕ್ರಮ ಮುಕ್ತಾಯಗೊಂಡು ಹಿಂತಿರುಗುವ ವೇಳೆಗೆ ಮೂಡುಬಿದಿರೆಯಿಂದ ರಾಜ್ಯದ ವಿವಿಧ ಸ್ಥಳಗಳಿಗೆ/ ರೈಲು ನಿಲ್ದಾಣಗಳಿಗೆ ಹೆಚ್ಚುವರಿ ಸಾರಿಗೆಗಳ ವ್ಯವಸ್ಥೆ ಮಾಡಿ ವಾಹನಗಳನ್ನು ನಿಯೋಜಿಸಬೇಕಾಗಿರುತ್ತದೆ. 

ಬಿಲ್ಲವರ 3 ಬೇಡಿಕೆ ಈಡೇರಿಸಿದರೆ ಪಾದಯಾತ್ರೆ ವಾಪಸ್‌: ಪ್ರಣವಾನಂದ ಶ್ರೀ

ಆದ್ದರಿಂದ ಧರ್ಮಸ್ಥಳ, ಉಪ್ಪಿನಂಗಡಿ, ಸುಬ್ರಹ್ಮಣ್ಯ, ಕಾಸರಗೋಡು ವಲಯಗಳಲ್ಲಿ ಕಾರ್ಯಾಚರಣೆಯಲ್ಲಿರುವ ಸಾರಿಗೆಗಳಲ್ಲಿ ಡಿ.26 ರಿಂದ 28ರ ವರೆಗೆ ದೈನಂದಿನ ಮಾರ್ಗ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಪ್ರಯಾಣಿಕರು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳು ಸಹಕರಿಸುವಂತೆ ನಿಗಮದ ಮಂಗಳೂರಿನ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

PREV
Read more Articles on
click me!

Recommended Stories

ಉಳೀತು ಬಡಪಾಯಿ ಜೀವ! ಭಾರೀ ಮಳೆ-ಗಾಳಿಗೆ ಪುಟ್ಟ ಮನೆ ಮೇಲೆಯೇ ಬಿದ್ದ ಬೃಹತ್ ಮರ!
ಸಿಂಧನೂರು ಕೆರೆ ನೀರಿನ ಪ್ರಮಾಣ ಕುಸಿತ: ನಗರಕ್ಕೆ ಕುಡಿಯುವ ನೀರಿಗೆ ಎದುರಾಗುತ್ತಾ ಸಂಕಷ್ಟ?