ಉಡುಪಿ: ಶ್ರೀಕೃಷ್ಣನ ಸನ್ನಿಧಿಯಲ್ಲಿ ನೆಲಭೋಜನ ಮಾಡಿ ಹರಕೆ ತೀರಿಸಿದ ಹರಿಪ್ರಿಯಾ-ವಸಿಷ್ಠ ಸಿಂಹ ಜೋಡಿ

Published : May 31, 2026, 04:41 PM IST
Udupi

ಸಾರಾಂಶ

ನಟ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ದಂಪತಿ ತಮ್ಮ ಪುತ್ರನೊಂದಿಗೆ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದ್ದಾರೆ. ಮಗು ಜನಿಸಿದ್ದಕ್ಕಾಗಿ ಹೊತ್ತಿದ್ದ 'ನೆಲಭೋಜನ' ಹರಕೆಯನ್ನು ಅವರು ಸಾಮಾನ್ಯ ಭಕ್ತರಂತೆ ಸರಳವಾಗಿ ಪೂರೈಸಿದ್ದು, ಅವರ ಈ ನಡೆಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

ಉಡುಪಿ (ಮೇ.31): ಸ್ಯಾಂಡಲ್‌ವುಡ್‌ನ ಪ್ರಸಿದ್ಧ ತಾರಾ ದಂಪತಿಗಳಾದ ನಟ ವಸಿಷ್ಠ ಸಿಂಹ ಹಾಗೂ ನಟಿ ಹರಿಪ್ರಿಯಾ ಅವರು ಉಡುಪಿಯ ಐತಿಹಾಸಿಕ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ತಮ್ಮ ವಿಶೇಷ ಹರಕೆಯನ್ನು ಭಕ್ತಿಯಿಂದ ತೀರಿಸಿದ್ದಾರೆ. ಸುಮಾರು ಒಂದೂವರೆ ವರ್ಷದ ಹಿಂದೆ ತಾವು ಹೊತ್ತುಕೊಂಡಿದ್ದ ಹರಕೆಯ ಪ್ರಕಾರ, ಈ ಸ್ಟಾರ್ ದಂಪತಿಗಳು ತಮ್ಮ ಪುಟ್ಟ ಮಗನೊಂದಿಗೆ ಮಠದಲ್ಲಿ ಜನಸಾಮಾನ್ಯರಂತೆ ನೆಲದ ಮೇಲೆ ಕುಳಿತು ಪ್ರಸಾದ ಸ್ವೀಕರಿಸುವ ಮೂಲಕ ಸರಳತೆ ಮೆರೆದಿದ್ದಾರೆ.

ನಟ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ದಂಪತಿಗಳಿಗೆ ಒಂದೂವರೆ ವರ್ಷದ ಹಿಂದೆ ಮಗು ಜನಿಸಿತ್ತು. ತಮಗೆ ಮಗು ಹುಟ್ಟಿದರೆ ಉಡುಪಿಯ ಶ್ರೀ ಕೃಷ್ಣನ ಸನ್ನಿಧಿಯಲ್ಲಿ ‘ನೆಲಭೋಜನ’ (ನೆಲದ ಮೇಲೆ ಕುಳಿತು ಅನ್ನಪ್ರಸಾದ ಸ್ವೀಕರಿಸುವುದು) ಮಾಡುವುದಾಗಿ ದಂಪತಿಗಳು ವಿಶೇಷ ಹರಕೆ ಕಟ್ಟಿಕೊಂಡಿದ್ದರು. ಅದರಂತೆಯೇ, ಈಗ ತಮ್ಮ ಮುದ್ದಾದ ಮಗನಿಗೆ ಮೊದಲ ಬಾರಿಗೆ ಉಡುಪಿ ಶ್ರೀ ಕೃಷ್ಣ ಹಾಗೂ ಮುಖ್ಯಪ್ರಾಣ ದೇವರ (ಆಂಜನೇಯ) ಭವ್ಯ ದರ್ಶನ ಮಾಡಿಸಿ, ಹರಕೆ ತೀರಿಸಿ ದಂಪತಿಗಳು ಅಪಾರ ಹರ್ಷ ವ್ಯಕ್ತಪಡಿಸಿದ್ದಾರೆ.

ಪರ್ಯಾಯ ಶ್ರೀಗಳ ಆಶೀರ್ವಾದ ಹಾಗೂ ಮಠದಲ್ಲಿ ಭೋಜನ

ಮಗನೊಂದಿಗೆ ದೇವರ ದರ್ಶನ ಪಡೆದ ಬಳಿಕ ವಸಿಷ್ಠ ಸಿಂಹ ದಂಪತಿಗಳು ಪ್ರಸ್ತುತ ಉಡುಪಿ ಕೃಷ್ಣ ಮಠದ ಪರ್ಯಾಯ ಪೀಠ ಅಲಂಕರಿಸಿರುವ ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಶ್ರೀಗಳ ಭೇಟಿಯ ನಂತರ ಮುಖ್ಯಪ್ರಾಣನ ಸನ್ನಿಧಿಯ ಭೋಜನ ಶಾಲೆಯಲ್ಲಿ ಹರಕೆಯಂತೆ ಜನಸಾಮಾನ್ಯ ಭಕ್ತಾದಿಗಳ ಜೊತೆಯಲ್ಲೇ ಸಾಲಿನಲ್ಲಿ ಕುಳಿತು ನೆಲಭೋಜನದ ಅನ್ನಪ್ರಸಾದವನ್ನು ಅತ್ಯಂತ ಶ್ರದ್ಧೆಯಿಂದ ಸ್ವೀಕರಿಸಿದರು.

ಯಾವುದೇ ಸ್ಟಾರ್ ಗಿಮಿಕ್ ಅಥವಾ ಹಮ್ಮು-ಬಿಮ್ಮು ಇಲ್ಲದೆ, ಮಠದ ನಿಯಮದಂತೆ ಸಾಧಾರಣ ಭಕ್ತರಂತೆ ನೆಲದ ಮೇಲೆ ಕುಳಿತು ಊಟ ಮಾಡಿದ ತಾರಾ ದಂಪತಿಗಳ ಸರಳತೆಗೆ ಮಠಕ್ಕೆ ಬಂದಿದ್ದ ಇತರೆ ಭಕ್ತರು ಹಾಗೂ ಅಭಿಮಾನಿಗಳು ಮನಸೋತಿದ್ದಾರೆ. ಈ ಭೇಟಿಯ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿವೆ.

 

PREV
Read more Articles on
click me!

Recommended Stories

ಕರ್ನಾಟಕದಲ್ಲಿ ಮುಂಗಾರು ಮಳೆ ಆರಂಭಕ್ಕೆ ಕ್ಷಣಗಣನೆ: ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್!
ಸ್ವಾಮೀಜಿ, ಫಾದರ್, ಮೌಲ್ವಿ ಸಮ್ಮುಖದಲ್ಲಿ ಡಿಕೆ ಶಿವಕುಮಾರ್ ಪ್ರಮಾವಚನ, ಸರ್ಕಾರದಿಂದ ಆಹ್ವಾನ