ಚಾಮರಾಜನಗರ: ನಡುರಸ್ತೆಯಲ್ಲಿ ಮಲಗಿ ವಾಟಾಳ್ ನಾಗರಾಜ್ ಪ್ರತಿಭಟನೆ

Suvarna News   | Asianet News
Published : Jan 17, 2021, 03:30 PM IST
ಚಾಮರಾಜನಗರ: ನಡುರಸ್ತೆಯಲ್ಲಿ ಮಲಗಿ ವಾಟಾಳ್ ನಾಗರಾಜ್ ಪ್ರತಿಭಟನೆ

ಸಾರಾಂಶ

ತಾಳವಾಡಿ ಅಚ್ಚಕನ್ನಡಿಗರ ಪ್ರದೇಶ| ತಮಿಳುನಾಡು ಸರ್ಕಾರ ಮೈಲುಗಟ್ಟಲೆ ಜಾಗವನ್ನ ಒತ್ತುವರಿ ಮಾಡಿಕೊಂಡಿದೆ| ಗಡಿಭಾಗದಲ್ಲಿ ತಮಿಳು ನಾಮಫಲಕ ತೆರವು ಮಾಡಿದ್ದಕ್ಕೆ ನನಗೆ ತಮಿಳರಿಂದ ಬೆದರಿಕೆ ಕರೆಗಳು ಬರುತ್ತಿವೆ| ಅಮೆರಿಕಾ, ಕೆನಡಾ, ಮಲೇಶಿಯ, ತಮಿಳುನಾಡು ಸೇರಿದಂತೆ ದೇಶ ವಿದೇಶಗಳಲ್ಲಿರು ತಮಿಳರಿಂದ  ಬೆದರಿಕೆ ಕರೆ ಬರುತ್ತಿವೆ| ಈ ಬಗ್ಗೆ ದಾಖಲೆ ಸಮೇತ ಸರ್ಕಾರಕ್ಕೆ ದೂರು ನೀಡುತ್ತೇನೆ: ವಾಟಾಳ್‌ ನಾಗರಾಜ್‌| 

ಚಾಮರಾಜನಗರ(ಜ.17):  ತಾಳವಾಡಿ ಕರ್ನಾಟಕಕ್ಕೆ ಸೇರಬೇಕೆಂದು ಆಗ್ರಹಿಸಿ ವಾಟಾಳ್ ನಾಗರಾಜ್ ಅವರು ನಡುರಸ್ತೆಯಲ್ಲಿ ಮಲಗಿ ಪ್ರತಿಭಟನೆ ನಡೆಸಿದ ಘಟನೆ ಇಂದು(ಭಾನುವಾರ) ನಗರದಲ್ಲಿ ನಡೆದಿದೆ.

ತಾಳವಾಡಿ ಅಚ್ಚಕನ್ನಡಿಗರ ಪ್ರದೇಶವಾಗಿದೆ. ತಮಿಳುನಾಡು ಸರ್ಕಾರ ಮೈಲುಗಟ್ಟಲೆ ಜಾಗವನ್ನ ಒತ್ತುವರಿ ಮಾಡಿಕೊಂಡಿದೆ. ಜಿಲ್ಲೆಯ ಗಡಿಭಾಗದಲ್ಲಿ ಜಂಟಿ ಸರ್ವೇ ಆಗಬೇಕು. ಗಡಿಭಾಗದಲ್ಲಿ ತಮಿಳು ನಾಮಫಲಕ ತೆರವು ಮಾಡಿದ್ದಕ್ಕೆ ನನಗೆ ತಮಿಳರಿಂದ ಬೆದರಿಕೆ ಕರೆಗಳು ಬರುತ್ತಿವೆ. ಅಮೆರಿಕಾ, ಕೆನಡಾ, ಮಲೇಶಿಯ, ತಮಿಳುನಾಡು ಸೇರಿದಂತೆ ದೇಶ ವಿದೇಶಗಳಲ್ಲಿರು ತಮಿಳರಿಂದ  ಬೆದರಿಕೆ ಕರೆ ಬರುತ್ತಿವೆ. ಈ ಬಗ್ಗೆ ದಾಖಲೆ ಸಮೇತ ಸರ್ಕಾರಕ್ಕೆ ದೂರು ನೀಡುತ್ತೇನೆ ಎಂದು ಹೇಳಿದ್ದಾರೆ. 

3 ವರ್ಷದ ನಂತ್ರ ದೇವಾಲಯಕ್ಕೆ ಬಂದ ಆನೆ: ಪ್ರಸಾದ ತಿನ್ನಿಸಿದ IAS ಅಧಿಕಾರಿಗೆ ಟೀಕೆ

ನಾನು ಯಾವ ಬೆದರಿಕೆಗೂ ಮಣಿಯುವುದಿಲ್ಲ. ನನ್ನ ಪ್ರಾಣ ಹೋದರೂ ಚಿಂತೆಯಿಲ್ಲ. ನಾನು ಹೋರಾಟವನ್ನ ಮುಂದುವರಿಸುತ್ತೇನೆ. ತಾಳವಡಿ ಕರ್ನಾಟಕಕ್ಕೆ ಸೇರಬೇಕೆಂದು ಆಗ್ರಹಿಸಿ ಫೆ. 13 ಜಿಲ್ಲೆಯ ಪುಣಜನೂರು ಬಳಿ ಗಡಿ ಬಂದ್ ಮಾಡಲಾಗುವುದು ಎಂದು ಹೇಳಿದ್ದಾರೆ. 
 

PREV
click me!

Recommended Stories

ದ್ವೇಷ ಭಾಷಣ ಪ್ರಕರಣ; ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ಗೆ ನಿರೀಕ್ಷಣಾ ಜಾಮೀನು!
Uttara Kannada: ಆಸ್ಪತ್ರೆಗೆ ಹೋಗಿದ್ದ ಗರ್ಭಿಣಿ ಹುಟ್ಟುಹಬ್ಬದಂದೇ ಸಾವು; ಹೊಟ್ಟೆಯಲ್ಲೇ ಅಸುನೀಗದ ಮಗು!