ಕೊರೋನಾ ಭೀತಿಗೆ ಕೇರಳ-ದಕ್ಷಿಣ ಕನ್ನಡ ವಾಹನ ಸಂಚಾರ ಬಂದ್‌

Kannadaprabha News   | Asianet News
Published : Mar 21, 2020, 07:12 AM IST
ಕೊರೋನಾ ಭೀತಿಗೆ ಕೇರಳ-ದಕ್ಷಿಣ ಕನ್ನಡ ವಾಹನ ಸಂಚಾರ ಬಂದ್‌

ಸಾರಾಂಶ

ಕೊರೋನಾ ವೈರಸ್‌ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ದಕ್ಷಿಣಕನ್ನಡ ಜಿಲ್ಲಾಡಳಿತ ತುರ್ತು ಕ್ರಮ ಕೈಗೊಂಡಿದ್ದು, ಕೇರಳ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ನಡುವೆ ಸರ್ವ ವಾಹನ ಸಂಚಾರವನ್ನು ನಿಷೇಧಿಸಿ ಆದೇಶ ಹೊರಡಿಸಿದೆ.  

ಮಂಗಳೂರು(ಮಾ.21): ಕೊರೋನಾ ವೈರಸ್‌ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ದಕ್ಷಿಣಕನ್ನಡ ಜಿಲ್ಲಾಡಳಿತ ತುರ್ತು ಕ್ರಮ ಕೈಗೊಂಡಿದ್ದು, ಕೇರಳ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ನಡುವೆ ಸರ್ವ ವಾಹನ ಸಂಚಾರವನ್ನು ನಿಷೇಧಿಸಿ ಆದೇಶ ಹೊರಡಿಸಿದೆ.

ಮಾ.21ರ ಮಧ್ಯಾಹ್ನ ಎರಡು ಗಂಟೆಯಿಂದ ಮಾಚ್‌ರ್‍ 31ರವರೆಗೆ ಈ ಆದೇಶ ಜಾರಿಯಲ್ಲಿರುತ್ತದೆ. ಕಾಸರಗೋಡಿನಲ್ಲಿ ಈಗಾಗಲೇ 6 ಕೊರೋನಾ ಪಾಸಿಟಿವ್‌ ಪ್ರಕರಣಗಳು ದಾಖಲಾಗಿರುವುದರಿಂದ ಈ ಕ್ರಮವನ್ನು ಕೈಗೊಳ್ಳಲಾಗಿದೆ.

ಕಾಸರಗೋಡು ಪ್ರಯಾಣಿಕರ ಗಡಿ ದಾಟಿಸಲು ವಿಶೇಷ ಬಸ್‌

ಇದುವರೆಗೆ ದಕ್ಷಿಣ ಕನ್ನಡ ಮತ್ತು ಕೇರಳ ಗಡಿಭಾಗದಲ್ಲಿ ಪ್ರತಿಯೊಬ್ಬ ನಾಗರಿಕನನ್ನು ಥರ್ಮಲ್‌ ಪರೀಕ್ಷೆಗೆ ಒಳಪಡಿಸಿ ಬಿಡಲಾಗುತ್ತಿತ್ತು. ಈಗ ಎಲ್ಲ ಬಗೆಯ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ.
 

PREV
click me!

Recommended Stories

Bengaluru Weather: ರಾಜ್ಯಕ್ಕೆ ಈಶಾನ್ಯ ಮಾರುತ- ದಶಕದ ದಾಖಲೆಯ ಚಳಿಗೆ ಸಿದ್ಧರಾಗಿ; ಬೆಂಗಳೂರು ಸ್ಥಿತಿ ಏನು ನೋಡಿ!
ಕೆಕೆಆರ್‌ಟಿಸಿ ಬಸ್ ಪಲ್ಟಿ; ಶಾಲಾ ವಿದ್ಯಾರ್ಥಿಗಳು ಸೇರಿದಂತೆ 15 ಜನರಿಗೆ ಗಾಯ; ಕಂಡಕ್ಟರ್ ಸ್ಥಿತಿ ಗಂಭೀರ!